
ವಿಧಾನಸಭೆ (ಸೆ.14): ರಾಯಚೂರಿನ ಮಾನ್ವಿ ವಿಧಾನಸಭಾ ಕ್ಷೇತ್ರದ ಸಿರವಾರದಲ್ಲಿ ಸರ್ಕಾರಿ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮದ 8 ಎಕರೆಯನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ಬೆಳ್ತಂಗಡಿ ಏತ ನೀರಾವರಿ ಮಾರ್ಚ್ಗೆ ಲೋಕಾರ್ಪಣೆ: ಸಚಿವ ಗೋವಿಂದ ಕಾರಜೋಳ
ಜೆಡಿಎಸ್ ಸದಸ್ಯ ರಾಜಾ ವೆಂಕಟಪ್ಪ ನಾಯಕ್(MLA Rajavenkatappa Nayak) ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಆ ಭಾಗದಲ್ಲಿ ಪ್ರತಿ ಎಕರೆಗೆ 11.84 ಲಕ್ಷ ರು. ಬೆಲೆ ಇದೆ. ರಾಜ್ಯ ಸರ್ಕಾರದ ಕ್ರೀಡಾ ಇಲಾಖೆಗೆ ಅಗತ್ಯವಿರುವುದರಿಂದ ಶೇ.50 ರಷ್ಟುಹಣವನ್ನು ಪಾವತಿಸಿದರೆ ಹಸ್ತಾಂತರಿಸುವುದಾಗಿ ಹೇಳಿದ್ದೇವೆ. ಇದು ನೀರಾವರಿ ನಿಗಮದ ಆಸ್ತಿಯಾಗಿದ್ದು, ನಾವು ಬೇರೆ ಇಲಾಖೆಗೆ ಉಚಿತವಾಗಿ ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನಂಜನಗೂಡಿನಲ್ಲಿ ವಸತಿ ಶಾಲೆ:
ಕಾಂಗ್ರೆಸ್(Congress) ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ(Dr.Yathindra siddaramaiah) ಅವರ ಗಮನ ಸೆಳೆಯುವ ಸೂಚನೆಗೆ ಸಮಾಜ ಕಲ್ಯಾಣ ಸಚಿವರ ಪರವಾಗಿ ಉತ್ತರಿಸಿದ ಕಾರಜೋಳ ಅವರು, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನಿವಾರ್ಯತೆ ಬಗ್ಗೆ ಅರಿವಿದೆ. ಅಲ್ಲಿ ಕಟ್ಟಡ ನಿರ್ಮಿಸದಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯೂ ಗಮನದಲ್ಲಿದೆ.
ಕಬಿನಿ ಜಲಾಶಯಕ್ಕೆ ಸಚಿವ ಗೋವಿಂದ ಕಾರಜೋಳ ಭೇಟಿ: ಪರಿಶೀಲನೆ
ಆದರೆ ಒಂದೇ ಸಲ 25 ಕೋಟಿ ರು.ಗೆ ಅಂದಾಜುವೆಚ್ಚ ಸಿದ್ಧಪಡಿಸಲಾಗಿದೆ. ಬಜೆಟ್ನಲ್ಲಿ ಪ್ರಸ್ತಾಪಿಸದೆ ಒಂದೇ ಸಲ ಇಷ್ಟೊಂದು ಅನುದಾನ ಬಿಡುಗಡೆ ಮಾಡುವುದು ಕಷ್ಟ. ಹೀಗಾಗಿ ಮುಂದಿನ ದಿನಗಳಲ್ಲಿ ಆದ್ಯತೆಯಾಗಿ ಪರಿಗಣಿಸಿ ಖಂಡಿತ ವಸತಿ ಶಾಲೆ ಕಟ್ಟಡ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ