
ಬೆಂಗಳೂರು (ಜು.14) : ಚಂದ್ರಯಾನ 3 ಯಶಸ್ವಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಗುರುವಾರ ತಿರುಪತಿಯ ವೆಂಕಟಾಚಲಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ವಿಜ್ಞಾನಿಗಳ ನಡೆಗೆ ಪ್ರಗತಿಪರ ಚಿಂತಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ 3 ಮಾದರಿ ಜೊತೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಇಸ್ರೋ ವಿಜ್ಞಾನಿಗಳು ತಂಡ. ಇದಕ್ಕೆ ಡಾ. ಮೂಡ್ನಾಕಡು ಚಿನ್ನಸ್ವಾಮಿ, ಪ್ರೊ ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ, ಕೆ.ಬಿ ಮಹದೇವಪ್ಪ ಸೇರಿದಂತೆ ಹಲವು ಸಾಹಿತಿಗಳ ವಿರೋಧ ವ್ಯಕ್ತಪಡಿಸಿದರು.
ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು
ಆತ್ಮ ಸ್ಥೈರ್ಯ ಮತ್ತು ಸಂಶೋದನೆ ಬಗ್ಗೆ ಅನುಮಾನ ಮೂಡುತ್ತದೆ ಎಂದ ಸಾಹಿತಿಗಳು ತಂತ್ರಜ್ಞಾನ ಇಷ್ಟು ಮುಂದುವರೆದಿದ್ದರೂ ಧಾರ್ಮಿಕ ನಂಬಿಕೆ ಮೊರೆ ಹೋಗಿರುವುದಕ್ಕೆ ಆಕ್ರೋಶ ಹೊರಹಾಕಿದ್ದರಲ್ಲದೇ ವಿಜ್ಞಾನಿಗಳೆನಿಸಿಕೊಂಡವರ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕು ತಪ್ಪಿಸುತ್ತದೆ ಎಂದಿದ್ದಾರೆ..
ಇಂದು ಮಧ್ಯಾಹ್ನ 2ಗಂಟೆ 35 ನಿಮಿಷ 17ಸೆಕೆಂಡಿಗೆ ಶ್ರೀಹರಿಕೋಟಾ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿರುವ ಚಂದ್ರಯಾನ -3. ಆಗಸ್ಟ್ ನಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿರುವ ಲ್ಯಾಂಡರ್ ಮಿಷನ್.
ಇಸ್ರೋ ವಿಜ್ಞಾನಿಗಳು ಪ್ರಮುಖ ಕಾರ್ಯಾಚರಣೆಗೆ ಸಿದ್ಧಗೊಳ್ಳಲು ತಿರುಪತಿ ತಿಪ್ಪಪ್ಪನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಹಿಂದೆ ಪೂಜೆ ಸಲ್ಲಿಸಿ ಉಡಾವಣೆ ಮಾಡಿರುವ ವಿಜ್ಞಾನಿಗಳು.
Chayan Dutta: ಅಸ್ಸಾಂ ವಿಜ್ಞಾನಿ ಹೆಗಲಿಗೆ ಚಂದ್ರಯಾನ-3 ಲಾಂಚ್ನ ನೇತೃತ್ವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ