ಹಣದುಬ್ಬರ ಕಮ್ಮಿ ಆಗಿದೆ ಎಂಬುದು ಸುಳ್ಳು: ಸಿದ್ದರಾಮಯ್ಯ

Published : Nov 18, 2022, 02:30 AM IST
ಹಣದುಬ್ಬರ ಕಮ್ಮಿ ಆಗಿದೆ ಎಂಬುದು ಸುಳ್ಳು: ಸಿದ್ದರಾಮಯ್ಯ

ಸಾರಾಂಶ

ಹಣದುಬ್ಬರ ಕಡಿಮೆಯಾಗಿಲ್ಲ, ಗಗನಕ್ಕೇರಿರುವ ಬೆಲೆಗಳನ್ನು ನಿಯಂತ್ರಿಸಲಾಗದ ಬಿಜೆಪಿ ಸರ್ಕಾರಗಳು ಜನರಿಗೆ ಶಾಪವಾಗಿ ಬದಲಾಗಿವೆ: ಸಿದ್ದರಾಮಯ್ಯ

ಬೆಂಗಳೂರು(ನ.18): ಕೇಂದ್ರವು ದೇಶದಲ್ಲಿ ಹಣದುಬ್ಬರ ಕಡಿಮೆಯಾಗಿದೆ ಎಂದು ಸುಳ್ಳು ಹೇಳಿ ಅದನ್ನು ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದೆ. ಹಣದುಬ್ಬರ ಕಡಿಮೆಯಾಗಿಲ್ಲ, ಗಗನಕ್ಕೇರಿರುವ ಬೆಲೆಗಳನ್ನು ನಿಯಂತ್ರಿಸಲಾಗದ ಬಿಜೆಪಿ ಸರ್ಕಾರಗಳು ಜನರಿಗೆ ಶಾಪವಾಗಿ ಬದಲಾಗಿವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

‘ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ರಾಜನಿಗೆ ಬೇಕಾದಂತಹ ವರದಿಗಳನ್ನು ವಾಸ್ತವಕ್ಕೆ ವಿರುದ್ಧವಾಗಿ ಸಿದ್ಧ ಮಾಡಿಕೊಟ್ಟಂತೆ ಕಾಣುತ್ತಿದೆ. ಇದರಿಂದ ಬಿಜೆಪಿ ಎಂಬುದು ‘ದಿಲ್ಲಿಯಿಂದ ಹಳ್ಳಿವರೆಗೆ ಬೊಗಳೆ ಬಿಡುವ ಪಕ್ಷ’ ಎಂದು ಸಾಬೀತಾಗಿದೆ. ಹೀಗಾಗಿ ಜನರನ್ನು ಇದನ್ನು ‘ಸುಳ್ಳನ್ನು ಉತ್ಪಾದಿಸಿ ಮಾರುವ ಫ್ಯಾಕ್ಟರಿ’ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಹಣದುಬ್ಬರ ತಗ್ಗಿದ್ರೂ ಸಾಲಗಾರರಿಗೆ ತಪ್ಪಿಲ್ಲ ಟೆನ್ಷನ್; ರೆಪೋ ದರ 35 ಬೇಸಿಸ್ ಪಾಯಿಂಟ್ಸ್ ಹೆಚ್ಚಳ ನಿರೀಕ್ಷೆ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,‘ಬಿಜೆಪಿ ಹೇಳಿರುವುದು ಸತ್ಯವಾದರೆ ದೇಶದಲ್ಲಿ ಹೆಚ್ಚಾಗಿರುವ ಬೆಲೆಗಳೆಲ್ಲ ಕಡಿಮೆಯಾಗಿದೆಯೇ? ಜನರು ಬೆಲೆಗಳು ಕಡಿಮೆಯಾಗಿವೆಯೆಂದು ಖುಷಿಯಾಗಿದ್ದಾರೆಯೇ? ಜನರ ಖರೀದಿಯ ಸಾಮರ್ಥ್ಯ ಹೆಚ್ಚಾಗಿದೆಯೇ? ದೇಶದಲ್ಲಿ ಅಗತ್ಯ ವಸ್ತುಗಳ ಆಮದು ಕಡಿಮೆಯಾಗಿ ಉತ್ಪಾದನೆ ಹೆಚ್ಚಾಗಿದೆಯೇ?’ ಎಂದು ಪ್ರಶ್ನಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ