
ಬೆಂಗಳೂರು [ಡಿ.11]: ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿ.20ಕ್ಕೆ ಮುಂದೂಡಿದೆ.
ಪ್ರಕರಣದಿಂದ ಕೈ ಬಿಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಪ್ರಕರಣದ ಇತರೆ ಆರೋಪಿಗಳಾದ ಆಂಜನೇಯ ಮತ್ತು ಹನುಮಂತಯ್ಯ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವುದನ್ನು ನ್ಯಾಯಾಲಯಕ್ಕೆ ಗಮನಕ್ಕೆ ತರಲಾಯಿತು. ಮುಂದಿನ ವಾರ ವಿಚಾರಣೆ ಇರುವ ಕಾರಣ ಒಂದು ತಿಂಗಳ ವಿನಾಯಿತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಯಿತು.
ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್..
ಒಂದು ತಿಂಗಳ ಕಾಲ ಕಾಲಾವಕಾಶ ಕೋರಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯವು ಅಷ್ಟೊಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಲಾಯಿತು. ಡಿ.20ರಂದು ಸಾಕ್ಷಿಗಳ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ