
ಬೆಂಗಳೂರು(ಜೂ.23): ಇಂದು(ಜು.23, 2022) ಬೆಳ್ಳಂಬೆಳ್ಳಗೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ ಅಂತ ಮಾಹಿತಿ ಲಭ್ಯವಾಗಿದೆ.
ಆದಾಯ ತೆರಿಗೆಯಲ್ಲಿ (Income Tax) ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಇದರ ಜತೆಗೆ ರಿಯಲ್ ಎಸ್ಟೇಟ್ (Real Estate), ಬಿಲ್ಡರ್ಗಳ ಮನೆ ಮೇಲೂ ದಾಳಿ ನಡೆಸಲಾಗಿದೆ ಅಂತ ತಿಳಿದು ಬಂದಿದೆ.
ಎಂಬೆಸ್ಸಿ ಗ್ರೂಪ್ ಮೇಲೆ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ
ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದು ಇಂದು ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಅಷ್ಟಕ್ಕೂ ಈ ಐಟಿ ದಾಳಿಗೆ ಕಾರಣವೇನು?
ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿಗೆ ಪ್ರಮುಖವಾಗಿ ಮೂರು ವಿಚಾರಗಳು ಕಾರಣವಾಗಿವೆ.
1)ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಶುಲ್ಕ ಸಂಗ್ರಹ ಆರೋಪ.
2)ಸರ್ಕಾರದ ನಿಯಮಾವಳಿಗಳನ್ನ ಮೀರಿ ಪೇಮೆಂಟ್ ಕೋಟಾ ಸೀಟ್ ಗಳನ್ನ ಮ್ಯಾನೇಜ್ ಮೆಂಟ್ ಗಳು ಬ್ಲಾಂಕಿಂಗ್ ಮಾಡಿ ಹೆಚ್ಚಿಸಿರುವ ಆರೋಪ.
3)ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣದ ಮಾಹಿತಿ ಐಟಿ ಗೆ ಒದಗಿಸದೆ ತೆರಿಗೆ ವಂಚನೆ ಆರೋಪ
ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಐಟಿ ಅಧಿಕಾರಿಗಳ ತಂಡ. ಸೆರ್ಚ್ ವಾರೆಂಟ್ ಪಡೆದು ಮುಂಜಾನೆಯೇ ಐಟಿ ದಾಳಿ ನಡೆದಿದೆ. 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ಈ ದಾಳಿ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ನಿರಂತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ