ಶಾಸಕ ಲಕ್ಷ್ಮಣ್ ಸವದಿ ಸಂವಿಧಾನ ಬದಲಾವಣೆ ಮಾತು! ಹೇಳಿದ್ದೇನು?

Published : Jan 30, 2024, 04:39 AM ISTUpdated : Jan 30, 2024, 04:40 AM IST
ಶಾಸಕ ಲಕ್ಷ್ಮಣ್ ಸವದಿ ಸಂವಿಧಾನ ಬದಲಾವಣೆ ಮಾತು! ಹೇಳಿದ್ದೇನು?

ಸಾರಾಂಶ

ಸಂವಿಧಾನಕ್ಕೆ ತಿದ್ದುಪಡಿ ಮಾಡುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಬಾಯಿ ಚಪಲಿಗೆ ಕೆಲವರು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ಹೇಳುತ್ತಾರೆ. ಅದು ಅಸಾಧ್ಯದ ಕೆಲಸ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ (ಜ.30): ಸಂವಿಧಾನಕ್ಕೆ ತಿದ್ದುಪಡಿ ಮಾಡುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಬಾಯಿ ಚಪಲಿಗೆ ಕೆಲವರು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ಹೇಳುತ್ತಾರೆ. ಅದು ಅಸಾಧ್ಯದ ಕೆಲಸ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಆದರ್ಶ ನಗರದ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಈಚೆಗೆ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಭಾರತೀಯ ಸಂವಿಧಾನದ ಕುರಿತ ಲಿಖಿತ ರಸಪ್ರಶ್ನೆ ಪ್ರಬಂಧ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಹೇಳುವಂತೆ ಶಿಕ್ಷಣ, ಸಂಘಟನೆ, ಹೋರಾಟ ಮೂರು ಅಂಶಗಳನ್ನು ಸಂಘಟನೆ ಪದಾಧಿಕಾರಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಜಗದೀಶ್ ಶೆಟ್ಟರ್ ಮರುಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಬೆನ್ನುಬಿದ್ದ ಬಿಜೆಪಿ!

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಬೀದರ ಜಿಲ್ಲೆಯ ಹಾಲಹಳ್ಳಿ ಬುದ್ದ ವಿಹಾರದ ಭಂತೇಜಿ ಧಮ್ಮದೀಪ ಸ್ವಾಮೀಜಿ, ಪುರಸಭೆ ಸದಸ್ಯ ರಾವಸಾಬ ಐಹೊಳೆ, ಮಾಜಿ ಜಿ.ಪಂ.ಸದಸ್ಯ ವಿನಾಯಕ ಬಾಗಡಿ, ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ ತಳವಾರ, ಎಂ.ಎಂ. ಖಾಂಡೆಕರ, ನ್ಯಾಯವಾದಿ ಮಿತೇಶ ಪಟ್ಟಣ, ಎ.ಎಂ. ಖೊಬ್ರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಯಾದವಾಡ, ಸಂಜಯ ತಳವಳಕರ, ರವಿ ಕಾಂಬಳೆ, ಶ್ರೀಕಾಂತ ಅಲಗೂರ, ಡಿಎಸ್‌ಎಸ್ ಮುಖಂಡರು, ಕಾರ್ಯಕರ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ಪ್ರಥಮ ದ್ವಿತೀಯ, ತೃತಿಯ ಸ್ಥಾನಗಳಿಗೆ ತಲಾ ₹25 ಸಾವಿರ, ₹15 ಸಾವಿರ, ₹12 ಸಾವಿರ ₹5 ನೂರು ರೂ.ದಂತೆ ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು.

 

ಜಗದೀಶ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆಯಾಗಿದ್ದು ಸಂತೋಷವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಫೋಟೊ ಶಿರ್ಷಿಕೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಲಿಖಿತ ಆಯೋಜಿಸಿದ್ದ ರಸಪ್ರಶ್ನೆ ಪ್ರಬಂಧ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಲಕ್ಷ್ಮಣ ಸವದಿ ನಿಗಮ ಮಂಡಳಿ ಅಧ್ಯಕ್ಷ ರಾಜು ಕಾಗೆ ಉದ್ಘಾಟಿಸಿ ಮಾತನಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!
VB–G RAM G Bill 2025: ಗಾಂಧೀಜಿ, ಹೋರಾಟಗಾರರಿಗೆ ಅಪಮಾನ: ಕೇಂದ್ರದ ವಿರುದ್ಧ ಉಗ್ರಪ್ಪ ಕೆಂಡಾಮಂಡಲ!