ಹಿಂದುಗಳು ಒಂದೆರಡು ಮಕ್ಕಳಿಗೆ ಜನ್ಮ ನೀಡಿದ್ರೆ ಸಾಲದು; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ!

Published : Jan 09, 2024, 11:56 PM IST
ಹಿಂದುಗಳು ಒಂದೆರಡು ಮಕ್ಕಳಿಗೆ ಜನ್ಮ ನೀಡಿದ್ರೆ ಸಾಲದು; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ!

ಸಾರಾಂಶ

ಹಿಂದೂಗಳು ಕೇವಲ ಒಂದು ಅಥವಾ ಎರಡು ಮಕ್ಕಳಿಗೆ ಜನ್ಮ ನೀಡಿದರೆ ಸಾಕಾಗುವುದಿಲ್ಲ ಮತ್ತು ಮುಸ್ಲಿಂ ಜನಸಂಖ್ಯೆಯು ಭಾರತದಲ್ಲಿ ಹಿಂದೂಗಳನ್ನು ಮೀರಿಸುತ್ತದೆ ಎಂದು ಹೇಳುವ ಮೂಲಕ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೊಸ ವಿವಾದಕ್ಕೆ ನಾಂದಿಯಾಡಿದ್ದಾರೆ.

ದಕ್ಷಿಣ ಕನ್ನಡ (ಜ.9): ಹಿಂದೂಗಳು ಕೇವಲ ಒಂದು ಅಥವಾ ಎರಡು ಮಕ್ಕಳಿಗೆ ಜನ್ಮ ನೀಡಿದರೆ ಸಾಕಾಗುವುದಿಲ್ಲ ಮತ್ತು ಮುಸ್ಲಿಂ ಜನಸಂಖ್ಯೆಯು ಭಾರತದಲ್ಲಿ ಹಿಂದೂಗಳನ್ನು ಮೀರಿಸುತ್ತದೆ ಎಂದು ಹೇಳುವ ಮೂಲಕ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೊಸ ವಿವಾದಕ್ಕೆ ನಾಂದಿಯಾಡಿದ್ದಾರೆ.

ಜನವರಿ 7ರಂದು ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು: ಸಚಿವ ರಾಮಲಿಂಗಾರೆಡ್ಡಿ

'ಭಾರತದಲ್ಲಿ ಹಿಂದೂಗಳ ಜನಸಂಖ್ಯೆ 80 ಕೋಟಿ ಮತ್ತು ಮುಸ್ಲಿಮರು ಕೇವಲ 20 ಕೋಟಿ ಇದ್ದಾರೆ ಎಂದು ಕೆಲವರು ಭಾವಿಸುತ್ತಾರೆ. ಆದರೆ, ನೀವು ಇನ್ನೊಂದು ದಿಕ್ಕಿನಲ್ಲಿ ಯೋಚಿಸಬೇಕಿದೆ. ಮುಸ್ಲಿಮರು ಸಂಖ್ಯೆಯಲ್ಲಿ ಕಡಿಮೆಯಿದ್ದಾರೆ ಮತ್ತು ಅವರು ಯಾವುದೇ ಹಾನಿ ಮಾಡುವುದಿಲ್ಲ ಎಂಬುದು ನಮ್ಮ ನಂಬಿಕೆ. ಆದರೆ, ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ ಮತ್ತು ಹಿಂದೂಗಳು ಹೆಚ್ಚಾಗಿ ಒಂದು ಅಥವಾ ಎರಡು ಮಕ್ಕಳನ್ನು ಹೊಂದಿದ್ದಾರೆ. 20 ಕೋಟಿ ಇರುವ ಮುಸ್ಲಿಮರು ತಲಾ ನಾಲ್ಕು ಮಕ್ಕಳಿಗೆ ಜನ್ಮ ನೀಡಿದರೆ ಅವರ ಜನಸಂಖ್ಯೆ 80 ಕೋಟಿಯಾಗುತ್ತದೆ. ನಮ್ಮ ಜನಸಂಖ್ಯೆ 20 ಕೋಟಿಗೆ ಇಳಿಯಲಿದೆ' ಎಂದು ಹೇಳಿದ್ದಾರೆ.

ನಿಖಿಲ್ ಬೈಕ್ ಡಿಕ್ಕಿ ಹೊಡೆದಿದ್ದು ನಟ ಯಶ್ ಬೆಂಗಾವಲು ವಾಹನಕ್ಕಲ್ಲ, ಬೇರೆ ಕರ್ತವ್ಯದಲ್ಲಿದ್ದ ಪೊಲೀಸ್ ಜೀಪಿಗೆ!

ಹೀಗೆ ಮುಂದುವರಿದರೆ, ಮುಸ್ಲಿಂ ಜನಸಂಖ್ಯೆಯು 80 ಕೋಟಿಯನ್ನು ಮುಟ್ಟುತ್ತದೆ ಮತ್ತು ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತದೆ. ಆಗ ದೇಶದಲ್ಲಿ ಹಿಂದೂಗಳ ದುಸ್ಥಿತಿಯನ್ನು ನೀವು ಊಹಿಸಬಹುದೇ? ಈ ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾದರೆ, ಹಿಂದೂಗಳ ಸಂಕಷ್ಟ ಹೇಗಿರುತ್ತದೆ ಎಂಬ ಬಗ್ಗೆ ನೀವು ಮನೆಯಲ್ಲಿ ಕುಳಿತು ಯೋಚಿಸಬೇಕು' ಎಂದು ಪೂಂಜಾ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!