ಕೊರೋನಾ ಸೋಂಕಿತ ವಕೀಲರಿಗೆ ತಲಾ 50,000 ನೀಡಲು ನಿರ್ಧಾರ

Kannadaprabha News   | Asianet News
Published : Aug 01, 2020, 10:40 AM ISTUpdated : Aug 01, 2020, 10:42 AM IST
ಕೊರೋನಾ ಸೋಂಕಿತ ವಕೀಲರಿಗೆ ತಲಾ 50,000 ನೀಡಲು ನಿರ್ಧಾರ

ಸಾರಾಂಶ

ಎಲ್ಲ ವಕೀಲರಿಗೂ 1 ಲಕ್ಷ ವಿಮೆ: ಪರಿಷತ್‌ ಅಧ್ಯಕ್ಷ ಜೆ.ಎಂ.ಅನಿಲ್‌ ಕುಮಾರ್‌| ಕೇಂದ್ರ ಮತ್ತು ರಾಜ್ಯ ಸರ್ಕಾರ ಅನ್‌ಲಾಕ್‌ 3.0 ನಿಯಮ ಪ್ರಕಟಿಸಿದೆ. ಹೀಗಾಗಿ, ಕೂಡಲೇ ರಾಜ್ಯದ ಎಲ್ಲಾ ನ್ಯಾಯಾಲಯಗಳ ಕಾರ್ಯ ಕಲಾಪಗಳನ್ನು ಪುನರಾಂಭಿಸಲು ಕ್ರಮ ತೆಗೆದುಕೊಳ್ಳಬೇಕು| ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಕೀಲ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ಆರ್ಥಿಕ ನೆರವು ಮಂಜೂರು|

ಬೆಂಗಳೂರು(ಆ.01): ಕೋವಿಡ್‌ ಸೋಂಕಿತ ವಕೀಲರಿಗೆ ತಲಾ 50 ಸಾವಿರ ನೆರವು ನೀಡಲು ಕರ್ನಾಟಕ ವಕೀಲರ ಪರಿಷತ್ತು ತೀರ್ಮಾನಿಸಿದೆ. 

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಪರಿಷತ್‌ ಅಧ್ಯಕ್ಷ ಜೆ.ಎಂ.ಅನಿಲ್‌ ಕುಮಾರ್‌, ಪರಿಷತ್ತಿನಲ್ಲಿ ನೋಂದಣಿಯಾಗಿರುವ ವಕೀಲರಿಗೆ ಧೈರ್ಯ ತುಂಬುವ ಪ್ರಯತ್ನದ ಭಾಗವಾಗಿ ಆರ್ಥಿಕ ನೆರವು ಘೋಷಿಸಲಾಗಿದೆ. ಕೊರೋನಾ ಸೋಂಕಿಗೆ ತುತ್ತಾದ ವಕೀಲರಿಗೆ ತಲಾ 50 ಸಾವಿರ ನೀಡಲಾಗುವುದು. ಜತೆಗೆ, ಉತ್ತಮ ಚಿಕಿತ್ಸೆ ಪಡೆಯಲು ನೆರವಾಗುವಂತೆ ನೋಂದಣಿಯಾಗಿರುವ ಪ್ರತಿಯೊಬ್ಬ ವಕೀಲರಿಗೂ ಒಂದು ಲಕ್ಷ ರು. ಮೊತ್ತದ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲೇ ಮೊದಲು 10 ವರ್ಷದೊಳಗಿನ ಮಗು ಕೊರೋನಾ ಸೋಂಕಿಗೆ ಬಲಿ

ಅಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಅನ್‌ಲಾಕ್‌ 3.0 ನಿಯಮ ಪ್ರಕಟಿಸಿದೆ. ಹೀಗಾಗಿ, ಕೂಡಲೇ ರಾಜ್ಯದ ಎಲ್ಲಾ ನ್ಯಾಯಾಲಯಗಳ ಕಾರ್ಯ ಕಲಾಪಗಳನ್ನು ಪುನರಾಂಭಿಸಲು ಕ್ರಮ ತೆಗೆದುಕೊಳ್ಳಬೇಕು. ಮೊದಲಿನಂತೆ ಭೌತಿಕ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಒತ್ತಾಯಿಸಲಾಗಿದೆ. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಕೀಲ ಸಮುದಾಯಕ್ಕೆ ರಾಜ್ಯ ಸರ್ಕಾರ ಜು.30ರಂದು 5 ಕೋಟಿ ಆರ್ಥಿಕ ನೆರವು ಮಂಜೂರು ಮಾಡಿದೆ. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಕೀಲರ ಪರಿಷತ್ತು ಅಭಾರಿಯಾಗಿದೆ. ಆ ಹಣವನ್ನು ಸಂಕಷ್ಟದಲ್ಲಿರುವ ವಕೀಲ ಸಮುದಾಯಕ್ಕೆ ಪಾರದರ್ಶಕವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ