ರಾಜ್ಯದಲ್ಲಿ ದುರ್ಬಲವಾದ ಎರಡು ಪಕ್ಷಗಳು ಒಂದಾಗಿವೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್‌ ವ್ಯಂಗ್ಯ

Published : Sep 09, 2023, 04:39 AM IST
ರಾಜ್ಯದಲ್ಲಿ ದುರ್ಬಲವಾದ ಎರಡು ಪಕ್ಷಗಳು ಒಂದಾಗಿವೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್‌ ವ್ಯಂಗ್ಯ

ಸಾರಾಂಶ

ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರೂ ಅಸಹಾಯಕರಾಗಿದ್ದು, ಈಗ ಎರಡೂ ಪಕ್ಷದವರು ಸೇರಿ ಮೈತ್ರಿಗೆ ಮುಂದಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿ​ಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ವ್ಯಂಗ್ಯವಾಡಿದರು.

ಹುಬ್ಬಳ್ಳಿ (ಸೆ.9) : ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರೂ ಅಸಹಾಯಕರಾಗಿದ್ದು, ಈಗ ಎರಡೂ ಪಕ್ಷದವರು ಸೇರಿ ಮೈತ್ರಿಗೆ ಮುಂದಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿ​ಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ವ್ಯಂಗ್ಯವಾಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವಾಗಲೂ ಅಸಹಾಯಕರು ಇಬ್ಬರು ಒಂದಾಗುತ್ತಾರೆ. ರಾಜ್ಯದಲ್ಲಿ ಜೆಡಿಎಸ್‌ ದುರ್ಬಲವಾಗಿದೆ. ಜೊತೆಗೆ ಬಿಜೆಪಿಯೂ ದುರ್ಲಲವಾಗಿದೆ. ಹಾಗಾಗಿ ಇಬ್ಬರಿಗೂ ಮೈತ್ರಿ ಅನಿವಾರ್ಯ. ಲೋಕಸಭಾ ಚುನಾವಣೆ ವೇಳೆ ದೊಡ್ಡಮಟ್ಟದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ. ಅನೇ​ಕರು ಬೇಜಾರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷಾಂತರ ಮತ್ತಷ್ಟುಹೆಚ್ಚಾಗಲಿದೆ ಎಂದು ಶೆಟ್ಟರ್‌ ಭವಿಷ್ಯ ನುಡಿದರು. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯೋದು ಮಾಡಿದಾಗ ಜನರ ನಂಬಿಕೆ ಕಳೆ​ದು​ಕೊ​ಳ್ಳು​ತ್ತಾ​ರೆ. ಜೊತೆಗೆ ಆಯಾ ಪಕ್ಷಗಳ ವಿಶ್ವಾಸಾರ್ಹತೆಯೂ ಕಡಿಮೆಯಾಗುತ್ತದೆ ಎಂದರು.

ಹಿಂದೂ ಧರ್ಮಕ್ಕೆ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ: ಸಂಸದ ಪ್ರತಾಪ್ ಸಿಂಹ

ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶೆಟ್ಟರ್‌, ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಮೈತ್ರಿ ವಿಚಾರದಲ್ಲಿ ಬಿಜೆಪಿ ಯಾವಾಗಲೂ ದ್ವಂದ್ವ ನಿಲುವು ಅನುಸರಿಸುತ್ತದೆ. ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಎಂದು ಹಿಂದೆ ಬಿಜೆಪಿಯವರೇ ಆರೋಪ ಮಾಡಿದರು. ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿಯ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು. ರಾಜಕೀಯ ಪಕ್ಷಕ್ಕೆ ಗಟ್ಟಿನಿರ್ಧಾರಗಳು ಇರಬೇಕು. ಇಂದು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!