
ಬೆಂಗಳೂರು(ಆ.05): ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಬಿಎಂಪಿ ವತಿಯಿಂದ ಕಾಯ್ದಿರಿಸಿದ ಹಾಸಿಗೆಗಳಿಗೆ ಮುಂಗಡ ಹಣ ಪಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ.
ಬಿಬಿಎಂಪಿ ಅಥವಾ ಸರ್ಕಾರದಿಂದ ಶಿಫಾರಸು ಮಾಡಿದ ಸೋಂಕಿತರಿಂದ ಒಂದು ನಯಾ ಪೈಸೆ ಹಣ ಪಡೆಯುವಂತಿಲ್ಲ. ಆದರೆ, ಆಸ್ಪತ್ರೆ ಸಿಬ್ಬಂದಿ ಮತ್ತು ಆಡಳಿತ ಮಂಡಳಿ, ರೋಗಿ ದಾಖಲಾದ ಬಳಿಕ 30 ಸಾವಿರ ರು. ಹಣ ಪಾವತಿ ಮಾಡುವಂತೆ ಹೇಳಿದ ದೂರು ಕೇಳಿ ಬಂದಿದ್ದವು. ಪಾಲಿಕೆ ಶಿಫಾರಸು ಮಾಡಿದ ರೋಗಿಗಳನ್ನು ಎರಡರಿಂದು ಮೂರು ಗಂಟೆ ದಾಖಲು ಮಾಡಿಕೊಳ್ಳದೇ ಸತಾಯಿಸುತ್ತಿದ್ದರು. ಈ ಕುರಿತು ಎರಡು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತೆ ಪಲ್ಲವಿ ನೇತೃತ್ವದ ಅಧಿಕಾರಿಗಳ ತಂಡ ಆಸ್ಪತ್ರೆಗೆ ದಿಢೀರ್ ಭೇಟಿ ಹೊರ ರೋಗಿ ವಿಭಾಗವನ್ನು ಮುಚ್ಚಿಸಿ ಎಚ್ಚರಿಕೆ ನೀಡಿ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಒಂದೇ ವಾರದಲ್ಲಿ 15000 ಕೊರೋನಾ ಸೋಂಕಿತರು ಬಿಡುಗಡೆ
ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು. ಅದರಂತೆ ಆಸ್ಪತ್ರೆಯಲ್ಲಿ ಇರುವ 150 ಹಾಸಿಗೆಯಲ್ಲಿ 75 ಹಾಸಿಗೆಗಳನ್ನು ನೀಡಬೇಕಿತ್ತು. ಆದರೆ, ಕೇವಲ 15 ಹಾಸಿಗೆ ನೀಡಿದ್ದರು. ಹೀಗಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ನೀಡಲಾಗಿದೆ. ಆಸ್ಪತ್ರೆಯಿಂದ ಲಿಖಿತ ರೂಪದಲ್ಲಿ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಎಚ್ಚೆತ್ತುಕೊಳ್ಳದಿದ್ದರೆ ವಿಪತ್ತು ನಿರ್ವಹಣೆ ಕಾಯ್ದೆ ಅನುಸಾರ ಆಸ್ಪತ್ರೆಗೆ ಪರವಾನಗಿ ರದ್ದು ಪಡಿಸಲಾಗುವುದು ಎಂದು ಜಂಟಿ ಆಯುಕ್ತೆ ಪಲ್ಲವಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ