
ಬೆಂಗಳೂರು (ಏ.07): ಭಾರತದ ಐಟಿ ಸಿಟಿ ಬೆಂಗಳೂರಿನಲ್ಲಿ ಬಾರತದ ಎಲ್ಲ ರಾಜ್ಯಗಳ ಜನರೂ ಬಂದು ನೆಲೆಸಿದ್ದಾರೆ. ಇಲ್ಲಿ ಕನ್ನಡವೇ ಅಧಿಕೃತ ಭಾಷೆಯಾದ್ದರಿಂದ ಕನ್ನಡ ಭಾಷೆಯ ಕುರಿತಂತೆ ಹಿಂದಿ ಭಾಷಿಕರು ಆಗಿಂದಾಗ್ಗೆ ಕ್ಯಾತೆ ತೆಗೆಯುತ್ತಲೇ ಇರುತ್ತಾರೆ. ಇದೀಗ ಜಮ್ಮು-ಕಾಶ್ಮೀರದ ಯುವತಿಯೊಬ್ಬಳು ಬೆಂಗಳೂರಿನ ರಸ್ತೆಯಲ್ಲಿ ನಿಂತು ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾ ಹಿಂದಿ ಭಾಷಿಕರಿಗೆ ಚಳಿ ಬಿಡಿಸಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ.
ಬೆಂಗಳೂರಿನ ರಸ್ತೆಯೊಂದಲ್ಲಿ ಸೋಶಿಯಲ್ ಮಿಡಿಯಾ ಇನ್ಲ್ಪೂಯೆನ್ಸರ್ ಒಬ್ಬರು ಯುವತಿಯನ್ನು ನಿಲ್ಲಿಸಿ ಮಾತನಾಡಿಸುತ್ತಾರೆ. ಆಗ ಮೈಕ್ ಮುಂದೆ ಮಾತನಾಡಿದ ಜಮ್ಮು ಮೂಲದ ಯುವತಿ ನಿರರ್ಗಳವಾಗಿ ಕನ್ನಡ ಮಾತನಾಡಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ಜೊತೆಗೆ, ಈ ಯುವತಿ ಕನ್ನಡ ಮಾತನಾಡಲು ಕ್ಯಾತೆ ತೆಗೆಯುವ ಅನ್ಯ ಭಾಷಿಕರ ಬಗ್ಗೆಯೂ ಟೀಕೆ ಮಾಡಿದ್ದಾಳೆ. ಇದರ ಬೆನ್ನಲ್ಲಿಯೇ ಸ್ಥಳೀಯ ಕನ್ನಡ ಭಾಷೆಗಳನ್ನು ಕಲಿಯುವ ಚರ್ಚೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಭಾಷೆಯ ಮೇಲಿನ ತಮ್ಮ ಹಿಡಿತವನ್ನು ಪ್ರದರ್ಶಿಸುವುದಲ್ಲದೆ, ಕರ್ನಾಟಕದಲ್ಲಿ ವಾಸಿಸುವಾಗ ಮತ್ತು ಕೆಲಸ ಮಾಡುವಾಗ ಸ್ಥಳೀಯರಲ್ಲದವರು ಕನ್ನಡವನ್ನು ಕಲಿಯುವ ಅಗತ್ಯತೆ ಬಗ್ಗೆ ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ: ಬಂಗಾರದ ನಿಧಿ ಸಿಕ್ಕರೆ ಭಾರತ ಶ್ರೀಮಂತ ದೇಶ ಕಣ್ರೀ; ಬ್ರಿಟಿಷರಿಗೂ ಟಕ್ಕರ್ ಕೊಟ್ಟ ಗುಹೆ
ಬೆಂಗಳೂರು ನಗರಕ್ಕೆ ನಮ್ಮ ದೇಶದ ಎಲ್ಲ ರಾಜ್ಯಗಳ ಜನರೂ ಬರುತ್ತಾರೆ. ಹೆಚ್ಚಾಗಿ ಉತ್ತರ ಪ್ರದೇಶ, ಬಿಹಾರ ರಾಜ್ಯ ಸೇರಿ ಮತ್ತು ನೇಪಾಳ ದೇಶದಿಂದಲೂ ಜನರು ಬಂದು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗೆ ಕೆಲಸವನ್ನು ಹುಡುಕಿ 'ನೀವು ಕರ್ನಾಟಕಕ್ಕೆ ಬರುತ್ತಿದ್ದರೆ, ನೀವು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಸ್ಥಳೀಯ ಭಾಷೆಯನ್ನು ಕಲಿಯುವುದು' ಎಂದು ಜಮ್ಮು ಯುವತಿ ಹೇಳಿದ್ದಾರೆ. 'ಹೊರಗಿನಿಂದ ಇಲ್ಲಿಗೆ ಎಷ್ಟೋ ಜನರು ಬರುತ್ತಿರುವುದರಿಂದ ಇಲ್ಲಿ ಕರ್ನಾಟಕದ ಜನರಿಗೆ ಈಗ ಜಾಗವಿಲ್ಲ. ಅದರ ಮೇಲೂ ನಾವು ಹಿಂದಿಯಲ್ಲಿ ಮಾತನಾಡಬೇಕೆಂದು ಅವರು ಒತ್ತಾಯಿಸುತ್ತಾರೆ. ಅವರು ಕನ್ನಡವನ್ನು ಏಕೆ ಕಲಿಯಲು ಸಾಧ್ಯವಿಲ್ಲ?' ಎಂದು ಜಮ್ಮು ಯುವತಿ ಹೇಳಿದ್ದಾಳೆ.
ಈ ವಿಡಿಯೋ ಎಕ್ಸ್ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ತರಹೇವಾರಿ ಕಾಮೆಂಟ್ಗಳು ಕೂಡ ಬಂದಿವೆ. 'ಕನ್ನಡಿಗರು, ಸ್ಥಳೀಯ ಭಾಷೆಗಾಗಿ ಧ್ವನಿ ಎತ್ತಿದ್ದಕ್ಕೆ ಯುವತಿಯನ್ನು ಶ್ಲಾಘಿಸಿದ್ದಾರೆ. 'ಅವರು ಒಬ್ಬ ರಾಣಿ. ಕನ್ನಡೇತರರು ಅವರಿಂದ ಕಲಿಯಬೇಕು' ಎಂದು ಒಬ್ಬ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ಮತ್ತೊಬ್ಬರು, 'ಕರ್ನಾಟಕದಲ್ಲಿದ್ದಾಗ ಕನ್ನಡ ಕಲಿಯಿರಿ ಮತ್ತು ಈ ನೆಲದ ಭಾಷೆಯನ್ನು ಗೌರವಿಸಿ ಎಂದು ಬರೆದಿದ್ದಾರೆ. ಮತ್ತೊಬ್ಬರು ಕೆಲವರು "ಉದ್ಯೋಗ ಮತ್ತು ಲಾಭವನ್ನು ಪಡೆಯಲು ಕರ್ನಾಟಕಕ್ಕೆ ಬರುವ ಮೊದಲು, ಕನ್ನಡ ಕಲಿಯಿರಿ ಅಥವಾ ಹೊರಡಿ! ಹರ್ಷನ ಸಾಮ್ರಾಜ್ಯವನ್ನು ಪುಡಿಮಾಡಿದ ಯೋಧರ ರಕ್ತ ನಮ್ಮಲ್ಲಿ ಹರಿಯುತ್ತದೆ. ಹಿಂದಿ ಹೇರಿಕೆ ವಿಫಲಗೊಳ್ಳುತ್ತದೆ" ಎಂದು ಹೆಚ್ಚು ದೃಢವಾದ ಧ್ವನಿಯನ್ನು ತೆಗೆದುಕೊಂಡರು.
ಇದನ್ನೂ ಓದಿ: ಬೆಂಗಳೂರು: ಜೆಸಿ ರಸ್ತೆಯಲ್ಲಿ ರಾಂಗ್ ರೂಟ್ನಲ್ಲಿ ಬಂದ ಅಂಕಲ್, ಜಪ್ಪಯ್ಯ ಅಂದ್ರೂ ಜರುಗಲಿಲ್ಲ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ