ಬಳ್ಳಾರಿ ಭೇಟಿಗೆ ಅನುಮತಿ ಕೋರಿ ಜನಾರ್ದನ ರೆಡ್ಡಿ ಮೊರೆ

Kannadaprabha News   | Asianet News
Published : Nov 18, 2020, 11:05 AM ISTUpdated : Nov 18, 2020, 11:48 AM IST
ಬಳ್ಳಾರಿ ಭೇಟಿಗೆ ಅನುಮತಿ ಕೋರಿ ಜನಾರ್ದನ ರೆಡ್ಡಿ  ಮೊರೆ

ಸಾರಾಂಶ

ತಮ್ಮ ತವರು ಬಳ್ಳಾರಿ ಭೇಟಿಗೆ ಜಾಮೀನಿನಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಜನಾರ್ದನ ರೆಡ್ಡಿ ಸುಪ್ರಿಂ ಕೋರ್ಟಿನಲ್ಲಿ ಮನವಿ ಮಾಡಿದ್ದಾರೆ.


ನವದೆಹಲಿ (ನ.18): ಗಣಿ ಹಗರಣದಲ್ಲಿ ಆರೋಪಿ ಆಗಿರುವ ಕರ್ನಾಟಕದ ಗಣಿ ಉದ್ಯಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು, ತಮಗೆ ನೀಡಲಾಗಿರುವ ಜಾಮೀನು ಷರತ್ತುಗಳಲ್ಲಿ ಬದಲಾವಣೆ ಬಯಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ತಮ್ಮ ತವರು ಬಳ್ಳಾರಿ ಭೇಟಿಗೆ ಜಾಮೀನಿನಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಕೋರಿದ್ದಾರೆ.

 ಆದರೆ ಇದನ್ನು ವಿರೋಧಿಸಿದ ಸಿಬಿಐ ವಕೀಲೆ ಮಾಧವಿ ದಿವಾನ್‌, ‘ಪ್ರಭಾವಿಯಾಗಿರುವ ರೆಡ್ಡಿಗೆ ಬಳ್ಳಾರಿ ಭೇಟಿಗೆ ಅವಕಾಶ ನೀಡಬಾರದು. ಒಂದು ವೇಳೆ ಬಳ್ಳಾರಿಗೆ ತೆರಳಲು ಅವಕಾಶ ಕಲ್ಪಿಸಿದ್ದಲ್ಲಿ, ತನಿಖೆ ಮೇಲೆ ಪರಿಣಾಮ ಬೀರಬಹುದು’ ಎಂದರು. 2015ರಲ್ಲೇ ಈ ಹಗರಣದಲ್ಲಿ ರೆಡ್ಡಿಗೆ ಜಾಮೀನು ಸಿಕ್ಕಿತ್ತು. ಆಗ ಅವರಿಗೆ ಬಳ್ಳಾರಿ, ಅನಂತಪುರ, ಕಡಪಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಪ್ರಸಿದ್ಧ ಹಿಂದೂ ದೇವಾಲಯ: ಚಿದಂಬರಂ ದರ್ಶನ ಪಡೆದ ಜನಾರ್ದನ ರೆಡ್ಡಿ ಕುಟುಂಬ

ಅಲ್ಲಿ 40 ಸಾಕ್ಷಿಗಳಿದ್ದಾರೆ. ಈ ಹಿಂದೆ ಸಾಕ್ಷಿಗಳಿಗೆ ಬೆದರಿಸಲಾಗಿದೆ. ಅಲ್ಲಿ ಇವರ ಪ್ರವೇಶಕ್ಕೆ ಅನುಮತಿಸಿದರೆ ಏನಾಗುತ್ತೋ ತಿಳಿಯದು’

ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಕೋರ್ಟ್‌ನ ದ್ವಿಸದಸ್ಯ ಪೀಠ, ಹಗರಣದ ತನಿಖೆ ನಡೆಸಿರುವ ಸಿಬಿಐನ ಪ್ರತಿಕ್ರಿಯೆ ಬಯಸಿ ನೋಟಿಸ್‌ ಜಾರಿ ಮಾಡಿದೆ. ಇದೇ ವೇಳೆ ಬಳ್ಳಾರಿಯಷ್ಟೇ ಅಲ್ಲ, ಬಳ್ಳಾರಿ ಪಕ್ಕದ ಅನಂತಪುರ ಹಾಗೂ ಕಡಪಾ ಜಿಲ್ಲೆಗೂ ಭೇಟಿಗೆ ಅನುಮತಿಸಬೇಕು ಎಂದು ಅರ್ಜಿಯಲ್ಲಿ ರೆಡ್ಡಿ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್