ಜಯಪ್ರಕಾಶ್ ಹೆಗ್ಡೆ, ಇಬ್ಬರು ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!

Published : Mar 12, 2024, 11:19 PM IST
ಜಯಪ್ರಕಾಶ್ ಹೆಗ್ಡೆ, ಇಬ್ಬರು ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!

ಸಾರಾಂಶ

ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು

ಬೆಂಗಳೂರು (ಮಾ.12): ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ, ಸಂಸದ ಮತ್ತು ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಫೆಬ್ರವರಿ 29 ರಂದು "ಜಾತಿ ಗಣತಿ" ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ಜಯಪ್ರಕಾಶ್ ಹೆಗ್ಡೆ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ನಗರದಲ್ಲಿ ನೀರಿನ ಕೊರತೆ ಇಲ್ಲ ಎಂದ ಡಿಕೆಶಿ; ಇತ್ತ ಬೆಳಗಿನ ಟಾಯ್ಲೆಟ್‌ಗೂ ನೀರಿಲ್ಲದೆ ಬೆಂಗಳೂರು ತೊರೆಯುತ್ತಿದ್ದಾರೆ ಟೆಕ್ಕಿಗಳು!

ಹೆಗ್ಡೆ ಅವರು ಈ ಹಿಂದೆ ಬಿಜೆಪಿಯಲ್ಲಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಸದಾನಂದ ಗೌಡ ಅವರು ಅಚಾನಕ್ ಆಗಿ ಸಿಎಂ ಆದರು. ಈ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ನಿಂದ ಸಂಸದರಾಗಿ ಆಯ್ಕೆ ಆದರು. ಆ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಇನ್ನು ಬಿಜೆಪಿಯ ಇಬ್ಬರು ಮಾಜಿ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ಮೂರು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಎಂಪಿ ಕುಮಾರಸ್ವಾಮಿ ಅವರು ಸಹ ಇಂದು ಕಾಂಗ್ರೆಸ್ ಸೇರಿದ್ದಾರೆ.

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

2023ರ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರಿಗೂ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕುಮಾರಸ್ವಾಮಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆಯಿಂದ ಜೆಡಿಎಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ, ಇಂಧನ ಸಚಿವ ಕೆ ಜೆ ಜಾರ್ಜ್ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ