ಮೇಲ್ಮನೆ ಚುನಾವಣೆಗೆ ನೋಂದಣಿ : ಜೆಡಿಎಸ್‌ ದೂರು

Published : Oct 21, 2019, 08:30 AM IST
ಮೇಲ್ಮನೆ ಚುನಾವಣೆಗೆ ನೋಂದಣಿ : ಜೆಡಿಎಸ್‌ ದೂರು

ಸಾರಾಂಶ

ಚುನಾವಣಾಧಿಕಾರಿಗಳು ನೋಂದಣಿಗೆ ಬರುವ ಮತದಾರರಿಗೆ ಸಮರ್ಪಕವಾದ ಅರ್ಜಿ ನಮೂನೆ ನೀಡುತ್ತಿಲ್ಲ. ಹೀಗಾಗಿ ಮತದಾರರ ನೋಂದಣಿಯನ್ನು ಮುಕ್ತವಾಗಿ ಮಾಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್‌ ದೂರು ನೀಡಲಾಗಿದೆ. 

ಬೆಂಗಳೂರು[ಅ.21]:  ತಾಲೂಕು ಕೇಂದ್ರ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು ನೋಂದಣಿಗೆ ಬರುವ ಮತದಾರರಿಗೆ ಸಮರ್ಪಕವಾದ ಅರ್ಜಿ ನಮೂನೆ ನೀಡುತ್ತಿಲ್ಲ. ಹೀಗಾಗಿ ಮತದಾರರ ನೋಂದಣಿಯನ್ನು ಮುಕ್ತವಾಗಿ ಮಾಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್‌ ಬಾಬು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮತದಾರರ ನೋಂದಾಣಿ ಪ್ರಕ್ರಿಯೆ ಆರಂಭಗೊಂಡಿದೆ. ಆದರೆ, ಕೆಲವು ಸಹಾಯಕ ಚುನಾವಣಾಧಿಕಾರಿಗಳು ಮತದಾರರಿಗೆ ಪೂರ್ಣವಾದ ಮಾಹಿತಿ ನೀಡುತ್ತಿಲ್ಲ. ಕಳೆದ ಚುನಾವಣೆಯ ಮತದಾರರ ಸಂಖ್ಯೆಗಿಂತ ಈ ಬಾರಿ ನೋಂದಣಿ ಪ್ರಕ್ರಿಯೆ ಶೇ.50ಕ್ಕಿಂತ ಕಡಿಮೆಯಾದರೆ ಸಂಬಂಧಪಟ್ಟಸಹಾಯಕ ಚುನಾವಣಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಾಲು ಸಾಲು ಸರ್ಕಾರಿ ರಜೆ ಇದ್ದ ಕಾರಣ ಅರ್ಜಿ ನಮೂನೆಗಳು ನಿಗದಿತ ಸಮಯದಲ್ಲಿ ಪೂರೈಕೆಯಾಗಿಲ್ಲ. ಮೊದಲನೇ ಹಂತದ ಮತದಾರರ ನೋಂದಣಿಗೆ ನ.6 ಕೊನೆಯ ದಿನಾಂಕವಾಗಿದೆ. ಇದನ್ನು 10 ದಿನಗಳ ಕಾಲ ಮುಂದೂಡಬೇಕು ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!