
ಬೆಂಗಳೂರು : ರಾಜ್ಯ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇದೇ ವೇಳೆ ಅನೇಕ ಅತೃಪ್ತರು ಅಧಿವೇಶನಕ್ಕೆ ಗೈರಾಗಿದ್ದಾರೆ.
ಕಾಂಗ್ರೆಸ್ ಶಾಸಕರೊಂದಿಗೆ ಗೈರಾಗಿರುವ ಮಂಡ್ಯದ ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ನಾರಾಯಣ ಗೌಡ ಅನಾರೋಗ್ಯದ ಕಾರಣದಿಂದ ತಾವು ಅಧಿವೇಶನಕ್ಕೆ ಹಾಜರಾಗಿಲ್ಲ ಎಂದು ಹೇಳಿದ್ದಾರೆ.
ತಮಗೆ ಫುಡ್ ಪಾಯ್ಸನ್ ಆಗಿದ್ದು, ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮುಂಬೈ ಆಸ್ಪತ್ರೆಯಲ್ಲಿ ತಾವು ಚಿಕಿತ್ಸೆ ಪಡೆದುಕೊಳ್ಳುವುದಾಗಿ ನಾರಾಯಣ ಗೌಡ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಅಲ್ಲದೇ ತಮ್ಮ ಅನಾರೋಗ್ಯದ ವಿಚಾರವನ್ನು ಸ್ಪೀಕರ್ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೂ ತಂದಿರುವುದಾಗಿ ಅವರು ಹೇಳಿದ್ದಾರೆ.
ಒಟ್ಟಿನಲ್ಲಿ ಅತೃಪ್ತರ ಗುಂಪಿನಲ್ಲಿ ಬಜೆಟ್ ಅಧಿವೇಶನಕ್ಕೆ ಗೈರಾಗಿರುವ ಅವರು ಅನಾರೋಗ್ಯದ ನೆಪ ಹೇಳಿದರಾ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ