
ಮೈಸೂರು (ಆ.22): ಎಚ್.ಡಿ.ಕೋಟೆ ತಾಲೂಕು ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬದಲು ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
ನದಿಗೆ ಬಿಡುವ ನೀರು ನೇರವಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಸೇರುತ್ತಿದೆ. ಕೇರಳದ ವೈನಾಡಲ್ಲಿ ಸುರಿದ ಮಳೆಯಿಂದಾಗಿ ಜಲಾಶಯ (ಗರಿಷ್ಠ ಮಟ್ಟ 2284 ಅಡಿ) ಭರ್ತಿಯಾಗಿತ್ತು. ಈಗ ಜಲಾಶಯದ ನೀರಿನ ಮಟ್ಟ 2275.56 ಅಡಿಗೆ ಕುಸಿದಿದೆ. ಕಳೆದ ಒಂಬತ್ತು ದಿನಗಳಲ್ಲಿ ಜಲಾಶಯದಿಂದ 4 ಟಿಎಂಸಿ ನೀರು ಖಾಲಿ ಮಾಡಲಾಗಿದೆ. ಆ.13ರಂದು 2,282 ಅಡಿ ಇದ್ದ ನೀರಿನ ಮಟ್ಟ, ಶುಕ್ರವಾರ 2,275 ಅಡಿ ಇದೆ. 19.52 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಕೇವಲ 14.57 ಟಿಎಂಸಿ ನೀರುವ ಮಾತ್ರ ಲಭ್ಯವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ