85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ

Published : Jan 05, 2020, 04:24 PM ISTUpdated : Jan 05, 2020, 06:22 PM IST
85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ

ಸಾರಾಂಶ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೊಗರಿ ಕಣಜ ಕಲಬುರಗಿ ಸಿದ್ಧವಾಗುತ್ತಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ಒಳಗೊಂಡಿದೆ. ಹಾಗಾದ್ರೆ ವಿಶೇಷತೆ ಏನೇನಿದೆ..? ಈ ಕೆಳಗಿನಂತಿದೆ ಸಂಪೂರ್ಣ ಮಾಹಿತಿ.

ಕಲಬುರಗಿ, (ಜ.05): ಕಲಬುಗಿಯಲ್ಲಿ ಇದೇ ಫೆಬ್ರುವರಿ 5,6 ಹಾಗೂ 7 ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛ ಬಿಡುಗಡೆಯಾಗಿದೆ.

ಕಲಬುರಗಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ ಮೂರ್ತಿ ಆಯ್ಕೆ

ಇಂದು (ಭಾನುವಾರ) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿ ಬಿ. ಶರತ್ ಲಾಂಛನವನ್ನು ಬಿಡುಗಡೆ ಮಾಡಿದರು. ಹಾಗೂ ಇದೇ ವೇಳೆ ಸಮ್ಮೇಳನದ ಸಿದ್ಧತೆಗೆ ಮಾಹಿತಿ ನೀಡಿದರು.

ಈ ವೇಳೆ ಸಮ್ಮೇಳನ ಹಿನ್ನೆಲೆ ರಚಿಸಲಾಗಿರುವ 16 ಸಮಿತಿಗಳ ಸದಸ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು , ಶಾಸಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕರಿಗಳು ಉಪಸ್ಥಿತರಿದ್ದರು.

ಸಾಹಿತ್ಯ ಸಮ್ಮೇಳನದ ತೂಗುಮಂಚದಲ್ಲಿ ಕೃಷ್ಣಕವಿ

ಲಾಂಛನದಲ್ಲಿ ವಿಶೇಷತೆ ಏನಿದೆ..?


 ಕಲಬುರಗಿಯ ಐತಿಹಾಸಿಕ ತಾಣ ಹಾಗೂ ಕವಿರಾಜ ಮಾರ್ಗ ಕೃತಿಯ ಚಿತ್ರಣವನ್ನು ಲಾಂಛನ ಒಳಗೊಂಡಿದೆ. ಕಲ್ಯಾಣ ಕರ್ನಾಟಕದ ಸೊಗಡು, ಸಂಸ್ಕೃತಿ ಸಾರುವ ಚಿತ್ರಗಳು ಒಳಗೊಂಡಿದ್ದು, ಈ ಲಾಂಛನವನ್ನು ಸ್ಥಳೀಯ ಕಲಾವಿದ ಡಾ.ಪಿ. ಪರಶುರಾಮ ವಿನ್ಯಾಸಗೊಳಿಸಿರುವವುದು ವಿಶೇಷ.

ಕನ್ನಡ ಆದರ್ಶ, ಇಂಗ್ಲಿಷ್‌ ವಾಸ್ತವ: ಎಚ್ಚೆಸ್ವಿ

ಕನ್ನಡಾಂಬೆಯ ಭಾವಚಿತ್ರದೊಂದಿಗೆ ಸ್ಥಳೀಯ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದೇನವಾಜ್ ದರ್ಗಾ, ಶರಣಬಸವೇಶ್ವರ ದೇವಸ್ಥಾನ, ಕಲಬುರಗಿಯ ಕೋಟೆ, ಚರ್ಚ್, ಬೌದ್ಧ ವಿಹಾರ ಹಾಗೂ ತೊಗರಿ ಬೆಳೆ ಚಿತ್ರಗಳನ್ನು ಲಾಂಛನದಲ್ಲಿ ಬಳಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌