
ಕಲಬುರಗಿ (ಏ.02): ಕಲ್ಯಾಣ ಕರ್ನಾಟಕ ಜನರ ಬಹುದಿನದ ಬೇಡಿಕೆಯಾಗಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ವಿಮಾನಯಾನ ಶೀಘ್ರದಲ್ಲಿ ಆರಂಭವಾಗಲಿದೆ. ಶನಿವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಯಾನ ಪ್ರಾಧಿಕಾರದ ತಜ್ಞರ ತಂಡ ಭೇಟಿ ನೀಡಿ ಇಲ್ಲಿನ ಲಭ್ಯ ಸವಲತ್ತುಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ರಾತ್ರಿ ವಿಮಾನ ಸಂಚಾರದ ಭರವಸೆ ನೀಡಿದೆ.
ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕರಾದ ಡಾ.ಮಹೇಶ ಚಿಲ್ಕಾ ಹಾಗೂ ದೆಹಲಿಯ ವಿಶೇಷ ವಿಮಾನದ ಪೈಲೆಟ್ ಅನೂಪ್ ಕಚ್ರೂ ವಿಮಾನ ನಿಲ್ದಾಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಿಂದ ವಿಶೇಷ ವಿಮಾನವನ್ನು ಹಾಗೂ ಸ್ಯಾಟಲೈಟ್ ಉಪಕರಣ ಹೊಂದಿರುವ ವಿಶೇಷ ವಿಮಾನವನ್ನು ತಂದು ಕಲಬುರಗಿಯಲ್ಲಿ ರಾತ್ರಿ ವೇಳೆಯಲ್ಲಿ ಇಳಿಯಲು ಮತ್ತು ಹಾರಾಟ ನಡೆಸಲು ಬೇಕಾಗಿರುವ ಎಲ್ಲ ಸೌಕರ್ಯಗಳ ಪರೀಕ್ಷೆ ನಡೆದಿದೆ. ಪ್ರಾಧಿಕಾರದಿಂದ ಅನುಮೋದನೆ ಸಿಕ್ಕ ತಕ್ಷಣ ತಿಂಗಳಯೊಳಗಾಗಿ ರಾತ್ರಿ ಪಾಳಯದ ವಿಮಾನ ಸಂಚಾರಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಕಾನೂನು ಬಾಹಿರವಾಗಿ ಮೀಸಲಾತಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
5 ವಿಮಾನ ಸಂಚಾರ: ಎರಡು ವಿಶೇಷ ವಿಮಾನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು ಐದು ವಿಮಾನಗಳ ಸಂಚಾರಕ್ಕೆ ಆಯಾ ವಿಮಾನ ಸಂಸ್ಥೆಗಳ ಮುಖ್ಯಸ್ಥರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಕಲಬುರಗಿಯಿಂದ ಬೆಂಗಳೂರು, ಕಲಬುರಗಿಯಿಂದ ತಿರುಪತಿ ಮತ್ತು ಕಲಬುರಗಿಯಿಂದ ಇಂಡನ್ (ದೆಹಲಿ) ಈ ಮಾರ್ಗಗಳಲ್ಲಿ ಸಂಚಾರ ಆರಂಭವಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ