
ಕಲಬುರಗಿ (ಜೂ.19): ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ತೋಟದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಬ್ಲಾಸ್ಟ್ನಿಂದ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಮನೆ ಭಾಗಶಃ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಮನೆಯ ಯಜಮಾನ ಈರಯ್ಯ ಮಠಪತಿ ತೋಟದ ಕೆಲಸದಲ್ಲಿ ತೊಡಗಿದ್ದರೆ, ಅವರ ಪತ್ನಿ ಗ್ಯಾಸ್ನಲ್ಲಿ ಅನ್ನವಿಟ್ಟು ಹೊರಗೆ ಪಾತ್ರೆ ತೊಳೆಯುತ್ತಿದ್ದರು. ಈ ವೇಳೆ ದೊಡ್ಡ ಶಬ್ದದೊಂದಿಗೆ ಸಿಲಿಂಡರ್ ಸ್ಪೋಟಗೊಂಡಿದೆ. ನೋಡನೋಡುತ್ತಿದ್ದಂತೆ ಮನೆಗೆ ಬೆಂಕಿ ಆವರಿಸಿದೆ. ಅದೃಷ್ಟವಶಾತ್ ದುರಂತದ ವೇಳೆ ದಂಪತಿಗಳು ಹೊರಗಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಾರ ನಷ್ಟ:
ದುರಂತದ ವೇಳೆ ಮನೆಯಲ್ಲಿದ್ದ 12 ಚೀಲ ಜೋಳ, 10 ಚೀಲ ತೊಗರಿ, 25 ಚೀಲ ಗೋದಿ, 19 ಗ್ರಾಮ ಬಂಗಾರದ ಒಡವೆ ಹಾಗೂ 4 ಲಕ್ಷ ರೂಪಾಯಿ ನಗದು ಸಂಪೂರ್ಣ ಭಸ್ಮವಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರೂ, ಅಷ್ಟರೊಳಗೆ ಮನೆ ತೀವ್ರವಾಗಿ ಹಾನಿಗೊಳಗಾಗಿತ್ತು.
ಈ ಕುರಿತು ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ