ಹಫ್ತಾ ವಸೂಲಿಗೆ ಒತ್ತಡ: ಕಲಬುರಗಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾನ್​ಸ್ಟೇಬಲ್​​ಗಳು

Published : Jul 07, 2023, 09:46 AM IST
ಹಫ್ತಾ ವಸೂಲಿಗೆ ಒತ್ತಡ: ಕಲಬುರಗಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾನ್​ಸ್ಟೇಬಲ್​​ಗಳು

ಸಾರಾಂಶ

ಇಲ್ಲಿನ ನಗರ ಸಂಚಾರ ಪೊಲೀಸ್‌ ಠಾಣೆ-1ರಲ್ಲಿನ ಪೇದೆ ಚಂದ್ರಕಾಂತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಕೆಲಸದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ತುಂಬ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಂದ್ರಕಾಂತ ವಿಷ ಪ್ರಾಶನ ಮಾಡಿದ್ದಾನೆ.

ಕಲಬುರಗಿ (ಜು.07): ಇಲ್ಲಿನ ನಗರ ಸಂಚಾರ ಪೊಲೀಸ್‌ ಠಾಣೆ-1ರಲ್ಲಿನ ಪೇದೆ ಚಂದ್ರಕಾಂತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಕೆಲಸದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ತುಂಬ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಂದ್ರಕಾಂತ ವಿಷ ಪ್ರಾಶನ ಮಾಡಿದ್ದಾನೆ. ತಕ್ಷಣ ಇವರು ವಿಷ ಕುಡಿದಿರೋದನ್ನ ಮನೆಯಲ್ಲಿ ಕುಟುಂಬದ ಸದಸ್ಯರು ಗಮನಿಸಿ ಅವರನ್ನು ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು ಪೇದೆ ಚಂದ್ರಕಾಂತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ಆಸ್ಪತ್ರೆ ಮೂಲಗಳು ಹೇಳಿವೆ.

ಏತನ್ಮದ್ಯೆ ಸದರಿ ಘಟನೆಗೆ ಪೊಲೀಸ್‌ ಪೇದೆಗಳು ಕ್ರೋಧಗೊಂಡಿದ್ದು ಹಿರಿಯ ಪೊಲೀಸ್‌ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಹಪ್ತಾ ವಸೂಲಿಯಂತಹ ಕೆಲಸಗಳಿಗೆ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ, ಮಾಡದೆ ಹೋದಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ, ಹಪ್ತಾ ವಸೂಲಿಗೆ ಸಹಕರಿಸದ ಪೊಲೀಸ್‌ ಪೇದೆಗಳನ್ನು ವರ್ಗಾವಣೆ ಮಾಡುತ್ತಿದ್ದಾರೆಂದು ಪೇದೆಗಳು ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Karnataka Budget 2023 Live Updates | ಕರ್ನಾಟಕ ಬಜೆಟ್

ಆತ್ಮಹತ್ಯೆಗೆ ಯತ್ನಿಸಿದ ಪೇದೆ ವರ್ಗವಾಗಿತ್ತು: ಇನ್ನು ಆತ್ಮಹತ್ಯೆಗೆ ಯತ್ನಿಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಕಾಂತ ಅವರನ್ನು ನಗರ ಪೊಲೀಸ್‌ ಆಯುಕ್ತ ಚೇತನ್‌ ಆರ್‌. ಫರಹತಾಬಾದ್‌ ಠಾಣೆಗೆ ವರ್ಗಾವಣೆ ಮಾಡಿದ್ದರು. ನಮ್ಮ ಮೇಲಾಧಿಕಾರಿಗಳೇ ಸುಳ್ಳು ಹೇಳಿ ವರ್ಗಾವಣೆ ಮಾಡಿಸಿದ್ದಾರೆ ಎಂದು ಚಂದ್ರಕಾಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ 59 ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ತಮಗೆ ಬೇಡವಾದವರನ್ನು ವರ್ಗಾವಣೆ ಮಾಡಿಸಿದ್ದಾರೆ ಆರೋಪ ಮಾಡಿದ್ದಾರೆ.

ಮದುವೆ‌‌ ವಿಚಾರದಲ್ಲಿ ಬೇಸರ: ಬೆಂಗಳೂರಿನ ಬೆಸ್ಕಾಂ ಇಂಜಿನಿಯರ್ ಪಾವಗಡದಲ್ಲಿ ಆತ್ಮಹತ್ಯೆ

ಕೆರಳಿದ ಪೇದೆಗಳು: ಮರಳು ಹಪ್ತಾ, ವೈನ್‌ ಶಾಪ್‌ ಹಪ್ತಾ ವಸೂಲಿ ಮಾಡಲು ಪಿಎಸ್‌ಐ, ಸಿಪಿಐ, ಡಿವೈಎಸ್ಪಿ ಅವರು ಒತ್ತಡ ಹೇರುತ್ತಿದ್ದಾರೆ. ಬಳಿಕ ಲೀಡರ್‌ಗಳಿಗೆ ದುಡ್ಡು ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್‌ ಕಾನ್‌ಸ್ಟೇಬಲ್‌ಗಳು ಮಾಡಿರುವ ಆರೋಪ ನಗರ ಪೊಲೀಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಪೇದೆ ಭೀಮಾ ನಾಯಕ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ