ಕಲಬುರಗಿ: ಎಸ್ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು! ಕಾಂಗ್ರೆಸ್ ಹುರಿಯಾಳು ಗೆದ್ದಿರೋ ಮತ್ತೆರಡು ಕ್ಷೇತ್ರದಲ್ಲೂ ಮತಗಳವು?

Published : Oct 24, 2025, 11:38 AM IST
Kalaburagi voter list deletion scam

ಸಾರಾಂಶ

ಆಳಂದ ಮತಗಳವು ಯತ್ನದ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ, ಕಲಬುರಗಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯಿಂದ ಮತ ಅಳಿಸಿಹಾಕುವ ಪ್ರಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ. ದಾಳಿ ವೇಳೆ ಸಿಕ್ಕ ದಾಖಲೆ ಈ ಎರಡು ಕ್ಷೇತ್ರಗಳ ಅಲ್ಪಸಂಖ್ಯಾತ ಮತದಾರರ ಮಾಹಿತಿಗಳು ಪತ್ತೆಯಾಗಿವೆ.

ಬೆಂಗಳೂರು (ಅ.24): ಆಳಂದ ಮತಗಳವು ಯತ್ನ ಬಯಲಾದ ಬೆನ್ನಲ್ಲೇ ಅದೇ ಜಿಲ್ಲೆಯ ಮತ್ತೆರಡು ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು ಎಂಬ ಅನುಮಾನ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಲ್ಲಿ ವ್ಯಕ್ತವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ಮತ ಕಳವು ಯತ್ನ ಶಂಕೆ ಮೂಡಿದ್ದು, ಇದಕ್ಕೆ ಕೆಲ ದಾಖಲೆಗಳು ಆಳಂದ ಪ್ರಕರಣದ ತನಿಖೆ ವೇಳೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಹುರಿಯಾಳುಗಳು ಗೆಲುವು ಸಾಧಿಸಿದ್ದರು.

ಇತ್ತೀಚೆಗೆ ಆಳಂದ ಕ್ಷೇತ್ರದ ಮತಗಳವು ಯತ್ನ ಸಂಬಂಧ ಕ್ಷೇತ್ರದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ ಕೆಲವರ ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಾಲ್‌ ಸೆಂಟರ್‌ ಸಿಬ್ಬಂದಿ ಮನೆಯಲ್ಲಿ ಶೋಧನೆ ವೇಳೆ ಪತ್ತೆಯಾದ ದಾಖಲೆಗಳನ್ನು ಪರಿಶೀಲಿಸಿದಾಗ ಕಲಬುರಗಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳ ಮತದಾರರ ಕುರಿತು ಮಾಹಿತಿ ಸಿಕ್ಕಿದೆ. ಈ ಎರಡು ಕ್ಷೇತ್ರಗಳ ಮತದಾರರ ಪಟ್ಟಿ ಹಾಗೂ ನಿರ್ದಿಷ್ಟ ಪಕ್ಷಕ್ಕೆ ಬೀಳುವ ಮತತಗಳು ಎಂದು ಊಹಿಸಿದ್ದ ಮತದಾರರ ವಿವರ ಕೂಡ ಇದೆ ಎಂದು ಮೂಲಗಳು ತಿಳಿಸಿವೆ.

ದೂರು ದಾಖಲಾಗಿಲ್ಲ-ತನಿಖೆ ಇಲ್ಲ:

ಅಂದು ಚುನಾವಣೆ ವೇಳೆ ಕಲಬುರಗಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ಮತ ಕಳವು ಯತ್ನ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಈ ಬಗ್ಗೆ ಆ ಕ್ಷೇತ್ರದ ಚುನಾವಣಾಧಿಕಾರಿಗಳು ದೂರು ನೀಡದೆ ತನಿಖೆಗೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಹೀಗಾಗಿ ಆ ಎರಡು ಕ್ಷೇತ್ರಗಳ ಬಗ್ಗೆ ಹೆಚ್ಚಿನ ತನಿಖೆಗೆ ಎಸ್‌ಐಟಿ ಮುಂದಾಗಿಲ್ಲ ಎಂದು ತಿಳಿದು ಬಂದಿದೆ.

ಅಲ್ಪಸಂಖ್ಯಾತರ ಮತಗಳಿಗೆ ಕನ್ನ:

ಈ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರ ಮತಗಳಿಗೆ ಕನ್ನ ಹಾಕುವ ಯತ್ನ ನಡೆದಿತ್ತು ಎನ್ನಲಾಗಿದೆ. ಕಲಬುರಗಿ ಉತ್ತರದಲ್ಲಿ ಅಲ್ಪಸಂಖ್ಯಾತರ ಮತಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಿವೆ. ಅದೇ ರೀತಿ ದಕ್ಷಿಣದಲ್ಲಿ ಫಲಿತಾಂಶ ಬದಲಾಯಿಸುವ ಮಟ್ಟಿಗೆ ಆ ಸಮುದಾಯದ ಮತಗಳು ನಿರ್ಣಾಯಕವಾಗಲಿವೆ. ಹೀಗಾಗಿ ಅಲ್ಪಸಂಖ್ಯಾತರ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲು ಅದೇ ಸಮುದಾಯದವರನ್ನು ಕೆಲವರು ಗುರಾಣಿಯಾಗಿ ಬಳಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!