ಸಾಕ್ಷಿದಾರನ ಕೈಗೆ ಕೋಳ ಹಾಕಿದ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Published : Aug 03, 2023, 10:42 PM IST
ಸಾಕ್ಷಿದಾರನ ಕೈಗೆ ಕೋಳ ಹಾಕಿದ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸಾರಾಂಶ

ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ಪೊಲೀಸ್‌ ಠಾಣೆಗೆ ಕರೆಸಿ ಕೈಗೆ ಕೊಳ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಕನಕಗಿರಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ನಡೆದಿದೆ. 

ಕೊಪ್ಪಳ (ಆ.03): ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ಪೊಲೀಸ್‌ ಠಾಣೆಗೆ ಕರೆಸಿ ಕೈಗೆ ಕೊಳ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಕನಕಗಿರಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ನಡೆದಿದೆ. ಕೈಗೆ ಕೊಳ ಹಾಕಿ, ಅಮಾನವೀಯತೆ ಮೆರೆದ ಕುರಿತು ಸಣ್ಣ ಹನುಮಂತಪ್ಪ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಆದರೆ, ಇದನ್ನು ಕನಕಗಿರಿ ಠಾಣೆ ಪಿಐ ಜಗದೀಶ ಅಲ್ಲಗಳೆದ್ದಾರೆ. ‘ನಾವು ಆತನನ್ನು ವಿಚಾರಣೆಗೆ ಕರೆತಂದಿದ್ದೆವು. ಈತ ಮಟ್ಕಾಬುಕ್ಕಿಯಾಗಿದ್ದ. ಪದೇ ಪದೆ ತಪ್ಪಿಸಿಕೊಂಡು ಹೋಗುತ್ತಿದ್ದರಿಂದ ಕೈಗೆ ಕೊಳ ಹಾಕಿ ಕುಳ್ಳಿರಿಸಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಡಿಸಿಎಂ ಸ್ವಕ್ಷೇ​ತ್ರ​ದಲ್ಲಿ ಸಾರಿಗೆ ಬಸ್ಸಿ​ನ ಅವ್ಯ​ವಸ್ಥೆ ಖಂಡಿಸಿ ಪ್ರತಿಭಟನೆ: ವಾಹನ ಸಂಚಾರ ಅಸ್ತವ್ಯಸ್ಥ

ಏನಿದು ಪ್ರಕರಣ?: ಸಣ್ಣ ಹನುಮಂತಪ್ಪ ಮಹಾರಾಷ್ಟ್ರಕ್ಕೆ ದುಡಿಯಲು ಹೋಗಿದ್ದ. ಗಂಭೀರ ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ಈತನನ್ನು ಕರೆತರಲಾಗಿತ್ತು. ಈ ವೇಳೆ ನನ್ನ ಕೈಗೆ ಕೊಳ ತೊಡಿಸಿ, ಅವಮಾನ ಮಾಡಿದ್ದಾರೆ ಎಂದು ಸಂತ್ರಸ್ತ ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ. 

ಆದರೆ, ಈಗ ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣವೊಂದು ಸಹ ದಾಖಲಾಗಿದೆ. ಅದರ ವಿಚಾರಣೆಗಾಗಿ ಕರೆತರಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೈಗೆ ಕೊಳ ಹಾಕಿರುವ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಆತನನ್ನು ಬಿಟ್ಟುಕಳುಹಿಸಲಾಗಿದೆ.

ಮರಣ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಪ್ರಕರಣದ ಕುರಿತು ಮಾಹಿತಿ ಬಂದಿದೆ. ಕೊಳ ಏಕೆ ತೊಡಿಸಿದ್ದರು? ಏನು ಪ್ರಕರಣ? ಎನ್ನುವುದನ್ನು ಡಿವೈಎಸ್ಪಿ ಹಂತದಲ್ಲಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು.
-ಯಶೋದಾ ಒಂಟಿಗೋಡ, ಎಸ್ಪಿ ಕೊಪ್ಪಳ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!