
ಬೆಂಗಳೂರು, (ಆ.04): ಕನ್ನಡ ಪರ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗಾರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಇಂದು ನಿಧನರಾಗಿದ್ದಾರೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಜ್ಞಾನಾಂಬಿಕೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಂಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದಲ್ಲಿ ಪೊಲೀಸ್ ಸರ್ಪಗಾವಲು, ವೇತನ ಸಿಗದೆ ಕ್ರಿಕೆಟಿಗರು ಕಂಗಾಲು; ಆ.4ರ ಟಾಪ್ 10 ಸುದ್ದಿ!
ಜ್ಞಾನಾಂಬಿಕೆ ಅವರ ಮೃತದೇಹವನ್ನು ಡಾಲರ್ಸ್ ಕಾಲನಿಯಲ್ಲಿರುವ ವಾಟಾಳ್ ನಾಗರಾಜ್ ಅವರ ಮನೆಗೆ ಕೊಂಡೊಯ್ಯಲಾಗಿದೆ.
ಬುಧವಾರ (ಆಗಸ್ಟ್ 5) ಬೆಳಗ್ಗೆ 9 ಗಂಟೆಗೆ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ 16 ಗ್ರಾಮಕ್ಕೆ ಕೊಂಡೊಯ್ದು ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ