'ನಾವೆಲ್ಲರೂ ಅವನನ್ನು ತುಂಬಾ ಇಷ್ಟಪಟ್ಟಿದ್ದೆವು ಆದರೆ.,' ದರ್ಶನ್ ಬಗ್ಗೆ ನಟ ಅನಿರುದ್ಧ್ ಮಾತು!

Published : Jun 18, 2024, 10:55 PM IST
'ನಾವೆಲ್ಲರೂ ಅವನನ್ನು ತುಂಬಾ ಇಷ್ಟಪಟ್ಟಿದ್ದೆವು ಆದರೆ.,' ದರ್ಶನ್ ಬಗ್ಗೆ ನಟ ಅನಿರುದ್ಧ್ ಮಾತು!

ಸಾರಾಂಶ

ಕನ್ನಡ ಚಿತ್ರರಂಗದ ಮೇರು ನಟರೆನಿಸಿದ್ದ ದರ್ಶನರನ್ನ ನಾವೆಲ್ಲರೂ ಅವನನ್ನ ತುಂಬಾ ಇಷ್ಟಪಟ್ಟಿದ್ದೆವು. ಆದರೆ ದರ್ಶನ್ ಜೀವನದಲ್ಲಿ ಈ ರೀತಿ ನಡೆಯುತ್ತಿರೋದು ಸಂಕಟ ತಂದಿದೆ ಎಂದು ನಟ ಅನಿರುದ್ಧ್ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು (ಜೂ.18): ಪ್ರೇಯಸಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳಿಸಿದನೆಂಬ ಕಾರಣಕ್ಕೆ  ದರ್ಶನ್‌ ಅಂಡ್ ಗ್ಯಾಂಗ್‌ನಿಂದ ಬರ್ಬರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಡೀ ಸ್ಯಾಂಡಲ್‌ವುಡ್‌ನ ಕಳೆಯನ್ನೇ ನುಂಗಿಬಿಟ್ಟಿದೆ. ರಾಜಕಾರಣಿಗಳು, ಟಿವಿ ಮಾಧ್ಯಮ ಎಲ್ಲಿ ನೋಡಿದರೂ ದರ್ಶನ್‌ ಅಂಡ್‌ ಗ್ಯಾಂಗ್‌ ಮಾಡಿದ ವಿಕೃತಿಯದ್ದೇ ಸುದ್ದಿ. ದರ್ಶನ್ ಬಂಧನವಾದಾಗ ಪ್ರಕರಣದ ಕುರಿತು ಪ್ರತಿಕ್ರಿಯಿಸಲು ಸ್ಟಾರ್ ನಟರು, ಕಲಾವಿದರು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದರು. ಆದರೆ ಇದೀಗ ಮುಂದೆ ಬಂದು ಪ್ರತಿಯೊಬ್ಬರು ಕೃತ್ಯವನ್ನು ಖಂಡಿಸುತ್ತಿದ್ದಾರೆ, ನ್ಯಾಯಕ್ಕೆ ಆಗ್ರಹಿಸುತ್ತಿದ್ದಾರೆ.

'ನಾನು ದರ್ಶನ್ ಗೆಳೆಯರು ಆದರೆ..,' ಪೊಲೀಸರ ಮುಂದೆ ಹಾಸ್ಯ ನಟ ಚಿಕ್ಕಣ್ಣ ಹೇಳಿದ್ದೇನು?

ದರ್ಶನ್ ಅಂಡ್‌ ಗ್ಯಾಂಗ್ ನಡೆಸಿದ ಕೃತ್ಯದಿಂದ ಇಡೀ ಕನ್ನಡ ಚಿತ್ರರಂಗ ತಲೆತಗ್ಗಿಸುವಂತಾಗಿದೆ ಎಂದು ಜನ ಮಾತಾಡಿಕೊಳ್ಳುವಂತಾಗಿರುವುದು ಸುಳ್ಳಲ್ಲ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮತ್ತೊಬ್ಬ ನಟ ಅನಿರುದ್ಧ, 'ಈ ಪ್ರಕರಣ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಅಲ್ಲ, ಇದೊಂದು ದುರ್ಘಟನೆ, ದುರಂತ' ಎಂದಿದ್ದಾರೆ.

ದರ್ಶನ್ ಬಂಧನ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಚಿಕ್ಕಣ್ಣನಿಗೆ ನೋಟಿಸ್: ಹಾಸ್ಯ ನಟನಿಗೆ ಢವ ಢವ ಶುರು!

ರೇಣುಕಾ ಸ್ವಾಮಿ ಹತ್ಯೆ ಬಳಿಕ ಅವರ ಕುಟುಂಬ ಸಂಕಟ ಅನುಭವಿಸುತ್ತಿದೆ. ಇನ್ನು ಕನ್ನಡ ಚಿತ್ರರಂಗದ ಮೇರು ನಟರೆನಿಸಿದ್ದ ದರ್ಶನರನ್ನ ನಾವೆಲ್ಲರೂ ಅವನನ್ನ ತುಂಬಾ ಇಷ್ಟಪಟ್ಟಿದ್ದೆವು. ಆದರೆ ದರ್ಶನ್ ಜೀವನದಲ್ಲಿ ಈ ರೀತಿ ನಡೆಯುತ್ತಿರೋದು ಸಂಕಟ ತಂದಿದೆ. ಪ್ರಕರಣದ ಬಗ್ಗೆ ಈಗಾಗಲೇ ಎಲ್ಲ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಈಗಲೇ ತೀರ್ಮಾನಕ್ಕೆ ಬರಲು ಆಗೋದಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆಯಾಗಲಿ ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ