ಶಿವಣ್ಣ ಅಭಿಮಾನಿಗಳಿಗೆ ಗುಡ್‌ನ್ಯೂಸ್; ಸರ್ಜರಿ ಯಶಸ್ವಿ, ಯಾವಾಗ ವಾಪಸ್ ಆಗ್ತಾರೆ? ಇಲ್ಲಿದೆ ವಿವರ

Published : Dec 26, 2024, 08:02 AM ISTUpdated : Dec 26, 2024, 08:59 AM IST
ಶಿವಣ್ಣ ಅಭಿಮಾನಿಗಳಿಗೆ ಗುಡ್‌ನ್ಯೂಸ್; ಸರ್ಜರಿ ಯಶಸ್ವಿ, ಯಾವಾಗ ವಾಪಸ್ ಆಗ್ತಾರೆ? ಇಲ್ಲಿದೆ ವಿವರ

ಸಾರಾಂಶ

ನಟ ಶಿವರಾಜ್‌ ಕುಮಾರ್‌ ಅವರ ಮೂತ್ರಕೋಶದ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ನೆರವೇರಿದೆ. ಕ್ಯಾನ್ಸರ್‌ ತಗುಲಿದ್ದ ಮೂತ್ರಕೋಶವನ್ನು ತೆಗೆದು ಕೃತಕ ಮೂತ್ರಕೋಶ ಅಳವಡಿಸಲಾಗಿದೆ. ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಸಾಮಾನ್ಯ ಜೀವನಕ್ಕೆ ಮರಳಲಿದ್ದಾರೆ.

ಬೆಂಗಳೂರು (ಡಿ.26) : ನಟ ಶಿವರಾಜ್‌ ಕುಮಾರ್ ಅವರಿಗೆ ಅಮೆರಿಕದ ಮಿಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಮೂತ್ರಕೋಶದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಅಲ್ಲಿನ ವೈದ್ಯ ಡಾ। ಮುರುಗೇಶ್‌ ಮನೋಹರನ್‌ ತಿಳಿಸಿದ್ದಾರೆ. ‘ಕ್ಯಾನ್ಸರ್‌ ತಗುಲಿದ್ದ ಮೂತ್ರಕೋಶವನ್ನು ಸಂಪೂರ್ಣ ತೆಗೆದುಹಾಕಲಾಗಿದೆ, ರೋಗವನ್ನು ನಿವಾರಿಸಲಾಗಿದೆ. ಸರ್ಜರಿ ಬಳಿಕ ಅವರದೇ ಕರುಳನ್ನು ಬಳಸಿಕೊಂಡು ಕೃತಕ ಮೂತ್ರಕೋಶ ಸೃಷ್ಟಿಸಿ ಅಳವಡಿಸಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

ಡಾ. ಮುರುಗೇಶ್ ನೇತೃತ್ವದ ಪರಿಣತ ವೈದ್ಯರ ತಂಡ ಸತತ 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಬಗ್ಗೆ ವಿವರ ನೀಡಿರುವ ಡಾ. ಮನೋಹರನ್, ‘ದೇವರ ದಯೆಯಿಂದ ಬಹಳ ಸಂಕೀರ್ಣವಾಗಿದ್ದ ಪ್ರಮುಖ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಶಸ್ತ್ರಚಿಕಿತ್ಸೆಯುದ್ದಕ್ಕೂ ಶಿವರಾಜ್‌ ಕುಮಾರ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಆ ಬಳಿಕವೂ ಅವರ ಆರೋಗ್ಯ ಬಹಳ ಚೆನ್ನಾಗಿದೆ. ದೇವರ ಕೃಪೆ ಮತ್ತು ನಿಮ್ಮೆಲ್ಲರ ಪ್ರಾರ್ಥನೆಯಿಂದ ಕೆಲವೇ ದಿನಗಳಲ್ಲಿ ಅವರು ಸಾಮಾನ್ಯಜೀವನಕ್ಕೆ ಮರಳುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದು ಹೇಳಿದ್ದಾರೆ. ಸದ್ಯ ವಿಶೇಷ ವಾರ್ಡ್‌ನಲ್ಲಿ ಶಿವರಾಜ್‌ಕುಮಾರ್‌ ಅವರ ಆರೈಕೆ ನಡೆಯುತ್ತಿದೆ.

ಹರಕೆ, ಹಾರೈಕೆ ನಡುವೆ ಅಮೇರಿಕದಲ್ಲಿ ಶಿವಣ್ಣನಿಗೆ ಸರ್ಜರಿ, ಕರುನಾಡಲ್ಲಿ ಫ್ಯಾನ್ಸ್ ಪೂಜೆ!

‘ಅಭಿಮಾನಿಗಳು ಹೇಗೆ ದೇವರಾಗಿದ್ದಾರೋ, ಅದೇ ರೀತಿ ಡಾಕ್ಟರ್ ಕೂಡ ದೇವರ ರೀತಿ ಬಂದಿದ್ದಾರೆ. ಸದ್ಯ ಶಿವರಾಜ್​ಕುಮಾರ್ ಐಸಿಯುನಲ್ಲಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯದಲ್ಲಿಯೇ ಶಿವರಾಜ ಕುಮಾರ್ ನಿಮ್ಮ ಬಳಿ ಮಾತನಾಡುತ್ತಾರೆ’ ಎಂದು ಶಿವಣ್ಣ ಪತ್ನಿ ಗೀತಾ ಶಿವರಾಜ್‌ಕುಮಾರ್‌ ತಿಳಿಸಿದ್ದಾರೆ.

ಇನ್ನೂ ಒಂದು ತಿಂಗಳವರೆಗೆ ಶಿವಣ್ಣ ಅವರಿಗೆ ಅಮೆರಿಕದಲ್ಲಿಯೇ ಚಿಕಿತ್ಸೆ ನಡೆಯಲಿದೆ. 2025ರ ಜನವರಿ 25ರಂದು ಅವರು ಭಾರತಕ್ಕೆ ಹಿಂದಿರುಗಲಿದ್ದಾರೆ ಎನ್ನಲಾಗಿದೆ. ಅಮೆರಿಕದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗೀತಾ ಶಿವರಾಜ್‌ಕುಮಾರ್‌ ಜೊತೆಗೆ ಇದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ