ಮಂಡನೆಯಾಯ್ತು ಕನ್ನಡ ಭಾಷಾ ವಿಧೇಯಕ, ತಪ್ಪು ಮಾಡಿದ್ರೆ ಬೀಳುತ್ತೆ ದಂಡ

Published : Sep 22, 2022, 04:53 PM ISTUpdated : Sep 22, 2022, 05:34 PM IST
ಮಂಡನೆಯಾಯ್ತು ಕನ್ನಡ ಭಾಷಾ ವಿಧೇಯಕ, ತಪ್ಪು ಮಾಡಿದ್ರೆ ಬೀಳುತ್ತೆ ದಂಡ

ಸಾರಾಂಶ

 ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022  ವಿಧಾನಸಭೆಯಲ್ಲಿ  ಮಂಡನೆ ಮಾಡಲಾಗಿದೆ. ಕನ್ನಡದಲ್ಲೂ ಉದ್ಯೋಗ ಪ್ರೋರ್ಟಲ್ ತೆರೆಯಲು ಮತ್ತು ಕನ್ನಡ ಭಾಷೆಯನ್ನು ಕಲಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.

 ಬೆಂಗಳೂರು (ಸೆ.22): ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗ ಸಿದ್ದಪಡಿಸಿದ  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022  ವಿಧಾನಸಭೆಯಲ್ಲಿ  ಮಂಡನೆ ಮಾಡಲಾಗಿದೆ. ಕನ್ನಡದಲ್ಲೂ ಉದ್ಯೋಗ ಪ್ರೋರ್ಟಲ್ ತೆರೆಯಲು ಮತ್ತು ಕನ್ನಡ ಭಾಷೆಯ ಯಾರಿಗೆ ಬರೋದಿಲ್ವೋ ಅವರಿಗೆ ಕನ್ನಡ ಕಲಿಕಾ ಘಟಕ ಸ್ಥಾಪಸಿ ಕನ್ನಡ ಭಾಷೆ ಪರಿಚಯಿಸಲು ತೀರ್ಮಾನಿಸಲಾಗಿದೆ. ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವಿಚಾರಣೆಗೆ ಅಧಿಕಾರ  ಉಲ್ಲಂಘನೆಗಾಗಿ ದಂಡವನ್ನು ವಿಧಿಸಲು ಅವಕಾಶ ಇದೆ. ಕರ್ನಾಟಕ ಕಾನೂನು ಆಯೋಗ ಸಿದ್ದಪಡಿಸಿದ  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಕರುಡನ್ನು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಈ ಹಿಂದೆ ಸಲ್ಲಿಸಲಾಗಿತ್ತು.  ಇನ್ನು ಇದರ ಜೊತೆಗೆ ವಿಧಾನಸಭೆಯಲ್ಲಿ ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದ್ದು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ಮಾಡಿ ಕೊಡುವ ವಿಧೇಯಕ ಇದಾಗಿದೆ. ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ ಮಂಡನೆ. ಒಂದೇ ವಿಷಯದ ಶಿಕ್ಷಕರು ಪರಸ್ಪರ ವರ್ಗಾವಣೆಗೆ ಅವಕಾಶ ಕೊಡುವ ವಿಧೇಯಕವಾಗಿದೆ. 

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದಲ್ಲಿರುವ ಮುಖ್ಯಾಂಶಗಳು ಇಂತಿದೆ:

  • ಉನ್ನತ ತಾಂತ್ರಿಕ/ ವೃತ್ತಿ ಶಿಕ್ಷಣದಲ್ಲಿ, ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸುವುದು.
  • ಕನ್ನಡ ಮಾಧ್ಯಮದಲ್ಲಿ ಅಧ್ಯಯನ *ಮಾಡಿದವರಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಒದಗಿಸುವುದು.
  • ರಾಜ್ಯ ಸರ್ಕಾರ, ರಾಜ್ಯದಲ್ಲಿನ ಸ್ಥಳೀಯ ಪ್ರಾಧಿಕಾರಗಳು, ಶಾಸನಬದ್ಧ ಮತ್ತು ಶಾಸನೇತರ ಸಂಸ್ಥೆಗಳು ಮತ್ತು ಸಹಕಾರಿ ಸಂಘಗಳು ಹಾಗೂ ಇತರ ಸಂಘಗಳಲ್ಲಿ ಉದ್ಯೋಗವನ್ನು ಪಡೆಯಲು ಕನ್ನಡ ಭಾಷೆಯನ್ನು ಅತ್ಯವಶ್ಯಕ ಭಾಷೆ ಆಗಿರಬೇಕು
  • ಅಧೀನ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ, ಬ್ಯಾಂಕುಗಳಲ್ಲಿ, ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು. ಬಳಸುವುದು.
  • ಕನ್ನಡ ಭಾಷೆಯ ವ್ಯಾಪಕ ಬಳಕೆ ಮತ್ತು ಪ್ರಚಾರಕ್ಕಾಗಿ ಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳುವುದು.
  • ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶ ಅಭಿವೃದ್ಧಿಯಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವುದು.
  • ರಾಜ್ಯದಲ್ಲಿ ಅಧಿಸೂಚಿಸಿರುವ ಕೈಗಾರಿಕಾ ನೀತಿಯ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಎಲ್ಲ ಕೈಗಾರಿಕೆಗಳು ಸರ್ಕಾರದಿಂದ ತೆರಿಗೆ ರಿಯಾಯತಿ  ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳುವ ಹಕ್ಕನ್ನು ನೀಡುವುದು.
  • ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವಿಚಾರಣೆಗೆ ಅಧಿಕಾರ  ಉಲ್ಲಂಘನೆಗಾಗಿ ದಂಡವನ್ನು ವಿಧಿಸಲು ಅವಕಾಶ

ಮತಾಂತರ ನಿಷೇಧ ಮಸೂದೆ ಅಂಗೀಕಾರ, ರಾಜ್ಯಪಾಲರ ಅಂಕಿತ ಒಂದೇ ಬಾಕಿ!

ಮೊದಲನೇ ಸಾರಿ ತಪ್ಪು ಮಾಡಿದ್ರೆ 5 ಸಾವಿರ
ಎರಡನೇ ಸಾರಿ ತಪ್ಪು ಮಾಡಿದ್ರೆ 10 ಸಾವಿರ
ಮೂರನೇ ಸಾರಿ ತಪ್ಪು ಮಾಡಿದ್ರೆ 20 ಸಾವಿರ ದಂಡ

1-12 ಕ್ಲಾಸಲ್ಲಿ ಕನ್ನಡ ಕಲಿಕೆ ಕಡ್ಡಾಯಕ್ಕೆ ಶಿಫಾರಸು 

ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ 2022 ವಿಧೇಯಕ ಮಂಡನೆ: ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ 2022 ವಿಧೇಯಕ ಮಂಡನೆಯಾಗಿದ್ದು, And ಇರುವ ಜಾಗದಲ್ಲಿ or ಅಂತ ಬಳಸಲು ನಿರ್ಧಾರ ಮಾಡಲಾಗಿದೆ. ಚಾರಿಟಬಲ್ ಟ್ರಸ್ಟ್ ಮಾಡುವವರಿಗೆ ಅನುಕೂಲವಾಗುವಂತೆ ಈ ಕಾಯ್ದೆ ಮಂಡನೆಯಾಗಿದ್ದು, ಹೊಸ ತಿದ್ದುಪಡಿಯೊಂದಿಗೆ ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ.  

ಭೂ ಕಬಳಿಕೆ ಕೇಸ್ ವಾಪಸ್ ಪಡೆಯುವ ಉದ್ದೇಶವಿರುವ ವಿಧೇಯಕ:  ಸರ್ಕಾರಿ ಭೂಮಿಯಲ್ಲಿ ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಸಮಸ್ಯೆ ಆಗುತ್ತಿತ್ತು. ಈ ಹಿನ್ನಲೆಯಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ( ತಿದ್ದುಪಡಿ) ವಿಧೇಯಕ ಮಂಡನೆಯಾಗಿದೆ. ವಿಧೇಯಕಕ್ಕೆ ನಿನ್ನೆ ಸದನದಲ್ಲಿ ವಿರೋಧ ವ್ಯಕ್ತವಾಗಿತ್ತು. ಶಾಸಕ ಎಟಿ ರಾಮಸ್ವಾಮಿ ಹಾಗೂ ಗೂಳಿಹಟ್ಟಿ ಶೇಖರ್ ವಿರೋಧ ವ್ಯಕ್ತಪಡಿಸಿದ್ದರು.  ಕಾಯ್ದೆ ಭೂಗಳ್ಳರಿಗೆ ಅನುಕೂಲ ಆಗುವ ಸಾಧ್ಯತೆ ಇದೆ ಎಂದು ವಿರೋಧಿಸಿದ್ದರು. ಈ‌ ಹಿನ್ನಲೆಯಲ್ಲಿ ಕೆಲವೊಂದು ತಿದ್ದುಪಡಿಯೊಂದಿಗೆ ಇಂದು ಅಂಗೀಕಾರ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ