Kannada Language Controversy: ತಮಿಳಿನಿಂದ ಕನ್ನಡ ಹುಟ್ಟಿದ್ರೆ ಸರಿ, ಅವಮಾನ ಹೇಗಾಗುತ್ತೆ? ಕಮಲ್ ಹಾಸನ್ ಬೆಂಬಲಕ್ಕೆ ನಿಂತ ನಟ ಕಿಶೋರ್!

Published : May 31, 2025, 06:47 PM IST
Kishore defends Kamal Haasan Mysuru

ಸಾರಾಂಶ

ಕಮಲ್ ಹಾಸನ್ ಅವರ ಕನ್ನಡ ಭಾಷೆಯ ಹುಟ್ಟಿನ ಕುರಿತ ಹೇಳಿಕೆಯನ್ನು ನಟ ಕಿಶೋರ್ ಸಮರ್ಥಿಸಿಕೊಂಡಿದ್ದಾರೆ. ಭಾಷೆಯನ್ನು ಭಾವುಕವಾಗಿ ನೋಡಬಾರದು ಮತ್ತು ಭಾಷೆಗಳ ಮೇಲು-ಕೀಳು ಎಂಬುದಿಲ್ಲ ಎಂದು ಅವರು ಹೇಳಿದ್ದಾರೆ. 

ಮೈಸೂರು (ಮೇ.31): 'ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಾಗುತ್ತಾ?' ಎಂದು ಕೇಳುವ ಮೂಲಕ ಮೈಸೂರಿನಲ್ಲಿ ಬಹುಭಾಷಾ ನಟ ಕಿಶೋರ್, ನಟ ಕಮಲ್ ಹಾಸನ್ ಅವರ ಕನ್ನಡ ಭಾಷೆಯ ಕುರಿತ ವಿವಾದಿತ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇತ್ತೀಚೆಗೆ ಕಮಲ್ ಹಾಸನ್ ಅವರು 'ಕನ್ನಡ ತಮಿಳಿನಿಂದ ಹುಟ್ಟಿದ ಭಾಷೆ' ಎಂದು ಹೇಳಿದ್ದು, ಕನ್ನಡಿಗರ ಗೌರವ ಮತ್ತು ಭಾಷಾ ಅಭಿಮಾನಕ್ಕೆ ಅವಮಾನವಾಗಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಈ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಕಿಶೋರ್, ಈ ಹೇಳಿಕೆಯನ್ನು ಭಾವುಕವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ತಮಿಳಿನಿಂದ ಕನ್ನಡ ಹುಟ್ಟಿದರೆ ಸರಿ:

'ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ, ಅದು ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ, ಅದಕ್ಕೆ ಒಂದು ತರ್ಕ ಇರುತ್ತೆ. ಅದೇನೆಂದು ಅವರನ್ನು ಕೇಳಿ ತಿಳಿದುಕೊಳ್ಳಬೇಕು' ಎಂದರು.

ಭಾಷೆಯನ್ನ ಭಾವುಕತೆಯಿಂದ ನೋಡಬಾರದು:

ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ. ಹಾಗಂತ ಒಂದು ಭಾಷೆ ಮೇಲು-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ, ಹಾಗೆಯೇ ತಮಿಳು ಕೂಡ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು. ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನೂ ಬಂಡವಾಳ ಮಾಡಿಕೊಂಡು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ, ಭಾಷೆಯನ್ನು ಭಾಷೆಯಾಗಿ ನೋಡಿ ಎಂದರು.

ತಿಳಿದ ಮನುಷ್ಯ ಏನೋ ಹೇಳಿದ್ದಾನೆ:

ಕಮಲ್ ಹಾಸನ್ ಅವರ ಹೇಳಿಕೆಯನ್ನು ಒಂದು ಸಿದ್ಧಾಂತ (ಥಿಯರಿ) ಎಂದು ಪರಿಗಣಿಸಬೇಕು ಎಂದು ಕಿಶೋರ್ ಸಲಹೆ ನೀಡಿದರಲ್ಲದೇ, ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ, ಏನು ಎಂದು ಕೇಳಿ ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಭಾಷೆಗಳ ಬಗ್ಗೆ ಬಹಳಷ್ಟು ಸಿದ್ಧಾಂತಗಳಿವೆ. ಒಂದೊಂದು ಭಾಷೆ ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಿವೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ, ಅದನ್ನು ಅವಮಾನ ಎಂದು ಯಾಕೆ ಭಾವಿಸಬೇಕು? ಕಮಲ್ ಹಾಸನ್ ಹೇಳಿರೋದು ಸಹ ಒಂದು ಸಿದ್ಧಾಂತವಿರಬಹುದು. ಅವರ ಸಿದ್ಧಾಂತ ಏನೆಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಿಶೋರ್ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಡ್ರಗ್ ಫ್ಯಾಕ್ಟರಿಗಳ ಅಟ್ಟಹಾಸ: ಗುಪ್ತಚರ ಇಲಾಖೆ ನಿದ್ದೆ ಮಾಡ್ತಿದೆಯೇ?- ಆರ್. ಅಶೋಕ್
ಅಯ್ಯಯ್ಯೋ.. ದೆವ್ವ ಹಿಡಿದಿದೆಯೆಂದು ಗೃಹಿಣಿಯನ್ನು ಬೇವಿನ ಕಟ್ಟಿಗೆಯಿಂದ ಥಳಿಸಿ ಕೊಲೆ!