
ಬೆಳಗಾವಿ (ಅ.31): ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಅಂದಾಜು 3 ರಿಂದ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ರಾಜ್ಯೋತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು.
ನ.1ರಿಂದ 1 ವರ್ಷ ‘ಕರ್ನಾಟಕ ಹಬ್ಬ’: ಸಚಿವ ಶಿವರಾಜ ತಂಗಡಗಿ
ಪ್ರತಿವರ್ಷದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
ಬೆಳಗಾವಿ ಗಡಿ ಪ್ರವೇಶಿಸದಂತೆ 3 ಮಹಾ ಸಚಿವರು, ಒಬ್ಬ ಸಂಸದರಿಗೆ ನಿರ್ಬಂಧ
ಈ ಬಾರಿಯ ರಾಜ್ಯೋತ್ಸವದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸೇರಿ ಒಟ್ಟಾರೆ 25 ಜನರನ್ನು ಗೌರವಿಸಿ ಸನ್ಮಾನಿಸಲಾಗುವುದು ರಾಜ್ಯೋತ್ಸವ ಮೆರವಣಿಗೆಯಲ್ಲಿ 75 ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ