ಬೆಂಗಳೂರು ಏರ್ಪೋರ್ಟ್ ಜೊತೆ ಕೈಜೋಡಿಸಿದ ಕನ್ನಡ ಸಾಹಿತ್ಯ ಪರಿಷತ್: ಬಿಎಐಎಲ್‌ನಲ್ಲಿ ಮಂಡ್ಯ ಸಮ್ಮೇಳನದ ಮಾಹಿತಿ!

Published : Sep 19, 2024, 11:24 AM IST
ಬೆಂಗಳೂರು ಏರ್ಪೋರ್ಟ್ ಜೊತೆ ಕೈಜೋಡಿಸಿದ ಕನ್ನಡ ಸಾಹಿತ್ಯ ಪರಿಷತ್: ಬಿಎಐಎಲ್‌ನಲ್ಲಿ ಮಂಡ್ಯ ಸಮ್ಮೇಳನದ ಮಾಹಿತಿ!

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಬಗ್ಗೆ ಚರ್ಚಿಸಿದರು. ಬಿಎಐಎಲ್ ವಿಮಾನ ನಿಲ್ದಾಣವು ಸಮ್ಮೇಳನದ ಪ್ರಚಾರ ಮತ್ತು ಪ್ರತಿನಿಧಿಗಳ ಸ್ವಾಗತಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಿದೆ.

ಬೆಂಗಳೂರು (ಸೆ.19): ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಬಗ್ಗೆ ಚರ್ಚಿಸಿದರು. ಬಿಎಐಎಲ್ ವಿಮಾನ ನಿಲ್ದಾಣವು ಸಮ್ಮೇಳನದ ಪ್ರಚಾರ ಮತ್ತು ಪ್ರತಿನಿಧಿಗಳ ಸ್ವಾಗತಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು , ಬಿಎಐಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿ  ಹರಿ ಮಾರರ್ ಮತ್ತು ಕಂಪನಿ ವ್ಯವಹಾರಗಳ ಮುಖ್ಯಸ್ಥರಾದ ಎಚ್. ಆರ್. ವೆಂಕಟ್ ರಾಮನ್  ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಕನ್ನಡ ಭಾಷೆ, ಕಲೆ, ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು  ಕೈಗೊಳ್ಳಬೇಕಾದ ಉಪಕ್ರಮಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದರು. 

ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಗೆ ಭರ್ಜರಿ ಲಾಬಿ: ಸಾಹಿತ್ಯೇತರ ಸಾಧಕರ ಪರಿಗಣಿಸಲು ಕೂಗು

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೆಂಬಲ ನೀಡಲು ಬಿಎಲ್ ಆರ್ ವಿಮಾನ ನಿಲ್ದಾಣವು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ವಿಮಾನ ನಿಲ್ದಾಣದಲ್ಲಿ ಪ್ರತಿನಿಧಿಗಳನ್ನು ಬರಮಾಡಿಕೊಳ್ಳಲು ಸ್ವಾಗತ ಡೆಸ್ಕ್ ಮತ್ತು ಫೋಟೋ ಬೂತ್ ಗಳನ್ನು ಒದಗಿಸಲಿದೆ. ಇದಲ್ಲದೆ, ಬಿಎಲ್ಆರ್ ವಿಮಾನ ನಿಲ್ದಾಣವು  ಈ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಪ್ರದರ್ಶಿಸಲು ಡಿಜಿಟಲ್ ಮಾಧ್ಯಮವನ್ನು ಬಳಸುತ್ತದಲ್ಲದೆ ಹಲವಾರು ಮನರಂಜನಾ ಚಟುವಟಿಕೆಗಳ ಮೂಲಕ ಪ್ರಯಾಣಿಕರನ್ನು ತೊಡಗಿಸಿಕೊಂಡು ಕನ್ನಡ ಭಾಷೆಯ ಪ್ರಚಾರ ಮಾಡಲಿದೆ.

ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯ ನಿರ್ವಾಹಕಾಧಿಕಾರಿ  ಹರಿ ಮರಾರ್ ಮಾತನಾಡಿ, ಕರ್ನಾಟಕದ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸಲು ಮತ್ತು ಪ್ರೋತ್ಸಾಹಿಸಲು  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆಯು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ