27 ವರ್ಷಗಳ ಬಳಿಕ ಕರ್ನಾಟಕ ಹೈಕೋರ್ಟ್‌ಗೆ ಕನ್ನಡಿಗ ಸಿಜೆ..!

Published : Feb 01, 2024, 04:31 AM IST
27 ವರ್ಷಗಳ ಬಳಿಕ ಕರ್ನಾಟಕ ಹೈಕೋರ್ಟ್‌ಗೆ ಕನ್ನಡಿಗ ಸಿಜೆ..!

ಸಾರಾಂಶ

ಪಿ.ಎಸ್. ದಿನೇಶ್ ಕುಮಾರ್ ಅವರ ಪದೋನ್ನತಿಯಿಂದ 27 ವರ್ಷಗಳ ನಂತರ ರಾಜ್ಯದ ಹೈಕೋರ್ಟ್‌ಗೆ ಸಿಜೆಯಾಗಿ ನೇಮಕಗೊಳ್ಳುವ ಮೂಲಕ ಇತಿಹಾಸ ನಿರ್ಮಾಣಕ್ಕೆ ಕಾರಣವಾಗಿದ್ದಾರೆ.

ಬೆಂಗಳೂರು(ಫೆ.01): ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಪದೋನ್ನತಿ ಪಡೆದಿರುವುದರಿಂದ ರಾಜ್ಯ ನ್ಯಾಯಾಂಗದ ಇತಿಹಾಸದಲ್ಲಿ ಹೊಸದೊಂದು ದಾಖಲೆ ನಿರ್ಮಾಣಗೊಂಡಿದೆ. ಬರೋಬ್ಬರಿ 27 ವರ್ಷಗಳ ನಂತರ ಕರ್ನಾಟಕದಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿ ಸೇವೆ ಸಲ್ಲಿಸಿ ಹಾಗೂ ಕರ್ನಾಟಕ ಹೈಕೋರ್ಟ್ ನ್ಯಾಯ ಮೂರ್ತಿಯಾಗಿ ನೇಮಕವಾದ ಬಳಿಕ ಸಿಜೆಯಾಗಿ ಪದೋ ನ್ನತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿಗೆ ಪಿ.ಎಸ್. ದಿನೇಶ್ ಕುಮಾರ್ ಒಳಗಾಗಿದ್ದಾರೆ.

ಕನ್ನಡಿಗರಾದ ನ್ಯಾ|ಎಸ್‌.ಎ.ಹಕೀಮ್ ಅವರು 1996ರ ಮೇ3ರಿಂದ 9ರವರೆಗೆ ಕೇವಲ 6 ದಿನಗಳ ಕಾಲ ಹೈಕೋರ್ಟ್ ಸಿಜೆಯಾಗಿದ್ದರು. ಅವರ ನಂತರ ಕನ್ನಡಿಗರೊಬ್ಬರು ಹೈಕೋರ್ಟ್ ಸಿಜೆಯಾದ ಉದಾಹರಣೆ ಇರಲಿಲ್ಲ. ಇದೀಗ ಪಿ.ಎಸ್. ದಿನೇಶ್ ಕುಮಾರ್ ಅವರ ಪದೋನ್ನತಿಯಿಂದ 27 ವರ್ಷಗಳ ನಂತರ ರಾಜ್ಯದ ಹೈಕೋರ್ಟ್‌ಗೆ ಸಿಜೆಯಾಗಿ ನೇಮಕಗೊಳ್ಳುವ ಮೂಲಕ ಇತಿಹಾಸ ನಿರ್ಮಾಣಕ್ಕೆ ಕಾರಣವಾಗಿದ್ದಾರೆ.

ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ಪತ್ರ ಕಡ್ಡಾಯ: ಹೈಕೋರ್ಟ್‌ ಸ್ಪಷ್ಟನೆ

ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿ (ಹಾಲಿ ಸುಪ್ರಿಂಕೋರ್ಟ್ ನ್ಯಾಯಮೂರ್ತಿ) ಪ್ರಸನ್ನ ವರಾಳೆ ಅವರು ಮೂಲತಃ ಬೆಳಗಾ ವಿಯನಿಪ್ಪಾಣಿಯವರಾದವರೂಮುಂಬೈನಲ್ಲಿ ಕಾನೂನು ಪದವಿ ಪಡೆದವರು. ಅಲ್ಲಿನ ನ್ಯಾಯಮೂರ್ತಿಯಾಗಿ, 2022ರ ಅ.15ರಂದು ಕರ್ನಾ ಟಕ ಹೈಕೋರ್ಟ್ ಸಿಜೆಯಾಗಿ ನೇಮಕಗೊಂಡಿದ್ದರು. ಸುಮಾರು 16 ತಿಂಗಳ ಕಾಲ ಇಲ್ಲಿದ್ದರು. 1984ಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನೇ ಸಿಜೆಯಾಗಿ ನೇಮಿಸುವ ಸಂಪ್ರದಾಯವಿತ್ತು.

ವಕೀಲರಾಗಿ, ಬಳಿಕ ಜಡ್ಜ್ ಆದ ದಿನೇಶ್: ದಿನೇಶ್ ಕುಮಾರ್‌ಅವರು 1990ರಲ್ಲಿ ಕಾನೂನು ಪದವಿ ಪಡೆದು ವಕೀಲಿಕೆ ಆರಂಭಿಸಿದ್ದರು. 1998ರಲ್ಲಿ ಕೇಂದ್ರ ಸರ್ಕಾರಿ ವಕೀಲರಾಗಿದ್ದರು. 2003ರಲ್ಲಿ ಕೇಂದ್ರ ಸರ್ಕಾರದ ಹಿರಿಯ ವಕೀಲರಾದರು. ಇದೇ ಫೆ.24ರಂದು ನಿವೃತ್ತಿ ಹೊಂದಲಿದ್ದಾರೆ. ಅವರ ತಂದೆ ಸಹ ನ್ಯಾಯಾಧೀಶರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ