
ಮಂಗಳೂರು (ಅ.12): ತುಳುನಾಡಿನ ದೈವದ ಕಥೆಯುಳ್ಳ ‘ಕಾಂತಾರ: ಚಾಪ್ಟರ್ ೧’ ಯಶಸ್ವಿಯಾಗಿ ಮುನ್ನಡೆಯುತ್ತಿರುವಾಗಲೇ ಚಿತ್ರದ ಕುರಿತಂತೆ ತುಳುನಾಡಿನಲ್ಲಿ ಪರ-ವಿರೋಧ ಸಂಘರ್ಷ ತಾರಕಕ್ಕೇರಿದೆ. ಕಾಂತಾರದಲ್ಲಿ ದೈವಾರಾಧನೆ ದೃಶ್ಯಗಳ ಅನುಕರಣೆ ಮಾಡಿ ತುಳುನಾಡು ದೈವಗಳ ನುಡಿಗಳ ಬಗ್ಗೆಯೇ ಅಪಹಾಸ್ಯ ಮಾಡಲಾಗುತ್ತಿದ್ದು, ಇದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಕಾಂತಾರ ಸಿನಿಮಾಗೆ ದೈವ ಅನುಮತಿ ನೀಡಿತ್ತಾ ಎನ್ನುವ ಹೊಸ ಚರ್ಚೆಗಳು ಸಂಚಲನ ಮೂಡಿಸುತ್ತಿವೆ.
ದೈವ ಹೇಳಿದ್ದಾ, ದೈವ ನರ್ತಕ ಹೇಳಿದ್ದಾ?:
ಕಾಂತಾರ ಸಿನಿಮಾ ಹಾಗೂ ದೈವಗಳ ಅನುಕರಣೆ ವಿರುದ್ಧ ದೈವಾರಾಧಕರು ಗುರುವಾರ ದೈವಕ್ಕೆ ದೂರು ನೀಡಿದ್ದರು. ಈ ವೇಳೆ ದೈವಾರಾಧಕರ ಹೋರಾಟಕ್ಕೆ ಪಿಲಿ ಚಾಮುಂಡಿ ದೈವ ಅಭಯ ನೀಡಿತ್ತು. ಆದರೆ ಇದೀಗ ಪಿಲಿಚಾಮುಂಡಿ ದೈವದ ನುಡಿಯ ಬಗ್ಗೆಯೇ ಅಪಹಾಸ್ಯ ಮಾಡಲಾಗುತ್ತಿದೆ. ಕಾಂತಾರ ಸಿನಿಮಾದ ಡೈಲಾಗ್ ಬಳಸಿ ದೈವ ನುಡಿ ವಿರುದ್ಧ ವ್ಯಂಗ್ಯ ಮಾಡಲಾಗುತ್ತಿದ್ದು, ದೈವ ಹೇಳಿದ್ದಾ, ದೈವ ನರ್ತಕ ಹೇಳಿದ್ದಾ? ಎಂದು ಸಾಮಾಜಿಕ ತಾಣಗಳಲ್ಲಿ ಅಪಹಾಸ್ಯ ಎಸಗಲಾಗಿದೆ.
ಎಚ್ಚರಿಕೆಯಾ, ಅನುಮತಿಯಾ?:
ಕಾಂತಾರ ಹಾಗೂ ರಿಷಬ್ ಶೆಟ್ಟಿ ಪರ ಪೋಸ್ಟ್ ಮಾಡುತ್ತಿರುವ ಹಲವರು, ರಿಷಬ್ ಕೂಡ ದೈವದ ಬಳಿಯೇ ಕೇಳಿ ಸಿನಿಮಾ ಮಾಡಿದ್ದು ಎಂದು ವಾದಿಸಿದ್ದಾರೆ. ಆದರೆ ಕಾಂತಾರ ಭಾಗ ಎರಡಕ್ಕೆ ದೈವ ಕೊಟ್ಟಿದ್ದು ಎಚ್ಚರಿಕೆಯಾ? ಅನುಮತಿಯಾ? ಎಂಬ ಹೊಸ ಚರ್ಚೆ ಸಂಚಲನ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ