ಪಾಕಿಸ್ತಾನ್ ಗ್ಯಾಂಗ್‌ಸ್ಟರ್‌ಗಳ ಜೊತೆ ನಂಟು: ದೊಡ್ಡಬಳ್ಳಾಪುರದ ಎಸಿ ರಿಪೇರಿ ಮಾಡುತ್ತಿದ್ದವ ಅರೆಸ್ಟ್

Kannadaprabha News   | Kannada Prabha
Published : Aug 23, 2026, 05:28 AM IST
Karnatak man arrested in contact pakistan gangsters via instagram  Links  Doddaballapur

ಸಾರಾಂಶ

ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ದೊಡ್ಡಬಳ್ಳಾಪುರದ ಸೈಯದ್ ಅಬೂಬಕರ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್‌ವರ್ಕ್ ಜೊತೆ ಇನ್‌ಸ್ಟಾಗ್ರಾಂನಲ್ಲಿ ಸಂಪರ್ಕದಲ್ಲಿದ್ದ

  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್
  • ದೊಡ್ಡಬಳ್ಳಾಪುರದಲ್ಲಿ ಎಸಿ ಮೆಕ್ಯಾನಿಕ್‌. ಬೆಂಗಳೂರಿನ ಮಸೀದಿಯೊಂದರಲ್ಲಿ ಬೋಧಕನಾಗಿ ಕೆಲಸ
  • 2 ವರ್ಷದಿಂದ ಪಾಕ್‌ ಗ್ಯಾಂಗ್‌ಸ್ಟರ್‌ ಬುಟ್ಟಿ ನೆಟ್‌ವರ್ಕ್‌ ಜತೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕ
  • ಕೇರಳ, ದೆಹಲಿಗೆ ಹೋಗಿ ತರಬೇತಿ ಪಡೆದುಕೊಂಡು ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಬಂಧನ

ದೊಡ್ಡಬಳ್ಳಾಪುರ (ಆ.23) ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳ ಜೊತೆ ಸಾಮಾಜಿಕ ಜಾಲತಾಣ ಮೂಲಕ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ. ಕೌಂಟ‌ರ್ ಇಂಟಲಿಜೆನ್ಸ್ ಸೆಲ್ ಹಾಗೂ ಕೇಂದ್ರ ಗುಪ್ತಚರ ದಳ ಅಧಿಕಾರಿಗಳಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸೈಯದ್ ಅಬೂಬಕರ್‌ನನ್ನು ಬಂಧಿಸಿದ್ದಾರೆ.

ಎರಡು ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಲಿಂಕ್

ಪೊಲೀಸರ ಪ್ರಕಾರ, ಸೈಯದ್ ಅಬೂಬಕ‌ರ್ ಕಳೆದ 2 ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್‌ವರ್ಕ್ ಗ್ಯಾಂಗ್‌ಗೆ ಸಂಬಂಧಿಸಿದೆ ಎನ್ನಲಾದ ಇನ್‌ಸ್ಟಾಗ್ರಾಂ ಖಾತೆಯೊಂದರ ಮೂಲಕ ಆತ ಸಂಪರ್ಕ ಹೊಂದಿದ್ದ. ಗಣ್ಯ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಚಟುವಟಿಕೆಗಳಲ್ಲಿ ಈ ಪಾಕಿಸ್ತಾನಿ ಗ್ಯಾಂಗ್ ತೊಡಗಿಸಿಕೊಂಡಿದೆ ಎನ್ನಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಎಸಿ ರಿಪೇರಿ ಮಾಡುತ್ತಿದ್ದ ಶಂಕಿತ

‘Hammadmemon33320’ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಆರೋಪಿ ಸಂಪರ್ಕದಲ್ಲಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯು ತನ್ನ ಆಧಾರ್ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆಗಳ ವಿವರಗಳನ್ನು ನೀಡಿ ಆ ಖಾತೆಗೆ ಲಾಗಿನ್ ಆಗಿದ್ದ. ಈ ಮೂಲಕ ಪಾಕಿಸ್ತಾನದಲ್ಲಿರುವ ಗ್ಯಾಂಗ್ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಆರೋಪ ಕೇಳಿಬಂದಿದೆ. ಸೈಯದ್ ಅಬೂಬಕರ್ ದೊಡ್ಡಬಳ್ಳಾಪುರದಲ್ಲಿ ಎಸಿ ರಿಪೇರಿ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ಬೆಂಗಳೂರಿನ ಮಸೀದಿಯೊಂದರಲ್ಲಿ ಪಾಠ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಕೇರಳಕ್ಕೆ ತೆರಳಿ ಉಗ್ರ ತರಬೇತಿ

ಗ್ಯಾಂಗ್ ಸದಸ್ಯರ ಸೂಚನೆಯಂತೆ ಆತ ಕೇರಳ ಹಾಗೂ ದೆಹಲಿಗೆ ತೆರಳಿ ತರಬೇತಿಯನ್ನೂ ಪಡೆದುಕೊಂಡು ಬಂದಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ಚಟುವಟಿಕೆಗಳು ಹಾಗೂ ಪಾಕಿಸ್ತಾನಿ ಗ್ಯಾಂಗ್‌ನೊಂದಿಗಿನ ಸಂಪರ್ಕದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 113(3) ಹಾಗೂ 197(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿಂದೆ ಮತ್ತಷ್ಟು ವ್ಯಕ್ತಿಗಳ ಸಂಪರ್ಕವಿದೆಯೇ, ಆರೋಪಿ ಯಾವ ರೀತಿಯ ತರಬೇತಿ ಪಡೆದಿದ್ದ ಹಾಗೂ ಪಾಕಿಸ್ತಾನಿ ಗ್ಯಾಂಗ್‌ನೊಂದಿಗೆ ಆತನ ಸಂಪರ್ಕದ ಉದ್ದೇಶವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆ ಆರಂಭವಾಗಿ 2 ತಿಂಗಳಾದ್ರೂ ಸಿಗದ ಪಠ್ಯಪುಸ್ತಕ, ಜೆರಾಕ್ಸ್‌ ಕಾಪಿ ಇಟ್ಕೊಂಡು ಕ್ಲಾಸ್‌ನಲ್ಲಿ ವಿದ್ಯಾರ್ಥಿಗಳ ಕಲಿಕೆ!
ಶಾಲೆಗಳ ಅಭಿವೃದ್ಧಿಗೆ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನಿಂದ ರಾಜ್ಯ ಸರ್ಕಾರಕ್ಕೆ 1750 ಕೋಟಿ ಸಾಲ