ರಾಜ್ಯದಲ್ಲಿ ಚುನಾವಣೆ : ಅಚ್ಚರಿಯ ಘೋಷಣೆ

Published : Oct 07, 2018, 07:22 AM IST
ರಾಜ್ಯದಲ್ಲಿ ಚುನಾವಣೆ : ಅಚ್ಚರಿಯ ಘೋಷಣೆ

ಸಾರಾಂಶ

ರಾಜ್ಯದ ಈ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಭಾರೀ ಚರ್ಚೆಗೂ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಇನ್ನು 6 ತಿಂಗಳು ಇರುವಾಗ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೊಷಣೆ ಮಾಡಲಾಗಿದೆ. 

ಬೆಂಗಳೂರು: 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇನ್ನು ಗರಿಷ್ಠ 6 ತಿಂಗಳಷ್ಟೇ ಇರುವಾಗ ಕರ್ನಾಟಕದ 3 ಲೋಕಸಭಾ ಸ್ಥಾನಗಳಿಗೆ ಉಪ ಚುನಾವಣೆ ಪ್ರಕಟವಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಬಹಿರಂಗ ವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಲೋಕಸಭೆಯ ಆಯುಸ್ಸೇ ಕೇವಲ 6 ತಿಂಗಳಿರುವಾಗ ಉಪಚುನಾವಣೆ ನಡೆಸುವ ಔಚಿತ್ಯವೇನಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ|ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. 

ಇದೇ ವೇಳೆ, ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಿಗೆ ಈ ಉಪಚುನಾವಣೆಯು ಸಾರ್ವತ್ರಿಕ ಚುನಾವಣೆಗೆ ತಮ್ಮ ತಂತ್ರಗಾರಿಕೆಯ ‘ಟೆಸ್ಟ್ ರನ್’ ಮಾಡಲು ಅನುಕೂಲವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!