
ಬೆಂಗಳೂರು(ಏ.07): ಲಾಕ್ಡೌನ್ನಿಂದ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನಿತ್ಯ ಬಳಕೆಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರ ಈಗ ಬೇಕರಿ ಉತ್ಪನ್ನಗಳು, ಸಿಹಿ ತಿಂಡಿಗಳ ಮಾರಾಟಕ್ಕೆ ಅವಕಾಶ ನೀಡಿದೆ.
ಬೇಕರಿ ಹಾಗೂ ಸಂಬಂಧಪಟ್ಟಉತ್ಪನ್ನಗಳನ್ನು ವಿಶೇಷವಾಗಿ ರೋಗಿಗಳು, ಹಿರಿಯರು, ಮಕ್ಕಳು ಹೆಚ್ಚು ಬಳಕೆ ಮಾಡುತ್ತಾರೆ.ಈ ಹಿನ್ನೆಲೆಯಲ್ಲಿ ಬೇಕರಿ, ಬಿಸ್ಕತ್, ಕಾಂಡಿಮೆಂಟ್, ಸಿಹಿ ತಿಂಡಿಗಳ ಉತ್ಪಾದನೆ, ಪೂರೈಕೆ, ಹಾಗೂ ಕನಿಷ್ಠ ಸಿಬ್ಬಂದಿಯೊಂದಿಗೆ ಬೇರೆ ಬೇರೆ ಕಡೆಗೆ ಇಲ್ಲವೇ ಸಣ್ಣ ಅಂಗಡಿಗಳಿಗೆ ಪೂರೈಸಲು ಅವಕಾಶ ನೀಡಿದೆ.
ಈ ಸಂಬಂಧ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ, ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಈ ಘಟಕಗಳು ಅತ್ಯುತ್ತಮ ಗುಣಮಟ್ಟದ ವ್ಯವಸ್ಥೆಯಡಿ, ಸ್ವಚ್ಛವಾದ ವಾತಾವರಣದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು, ಆದರೆ ಯಾವುದೇ ಸಂದರ್ಭದಲ್ಲಿ ಇಂತಹ ಘಟಕಗಳಲ್ಲಿ ಗ್ರಾಹಕರಿಗೆ ಪೂರೈಸುವ, ಸೇವಿಸುವ ಅವಕಾಶ ಇರುವುದಿಲ್ಲ, ಕೇವಲ ಪಾರ್ಸೆಲ್ಗೆ ಮಾತ್ರ ಅವಕಾಶ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜನ ಲಾಕ್ಡೌನ್ ಪಾಲಿಸದಿದ್ದರೆ 14ರ ನಂತರವೂ ಮುಂದುವರಿಕೆ: ಸಿಎಂ
ಕೇಂದ್ರ ಸರ್ಕಾರ ಈಗಾಗಲೇ ಬೇಕರಿ, ಬಿಸ್ಕತ್, ಸಿಹಿ ತಿಂಡಿಗಳ ಉತ್ಪಾದನೆ, ಮಾರಾಟಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಲಾಕ್ಡೌನ್ ಆದೇಶದಿಂದ ವಿನಾಯಿತಿ ನೀಡಿದೆ. ಈಗಾಗಲೇ ನಿತ್ಯ ಬಳಕೆಯ ದಿನಸಿ ವಸ್ತುಗಳು, ತರಕಾರಿ, ಹಾಲು ಹಾಗೂ ಆನ್ಲೈನ್ ಮೂಲಕ ಆಹಾರ, ತಿಂಡಿ ತಿನಿಸುಗಳ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ.
ಪಡಿತರ ಪಡೆಯಲು ಒಟಿಪಿ ವಿನಾಯಿತಿ
ಬೆಂಗಳೂರು: ಪಡಿತರ ಅಂಗಡಿಗಳಲ್ಲಿ ಒಟಿಪಿ (ಒನ್ ಟೈಂ ಪಾಸ್ವರ್ಡ್) ಮೂಲಕ ಗ್ರಾಹಕರು ಪಡಿತರ ಪಡೆಯುವ ಪದ್ಧತಿಗೆ ಸದ್ಯ ವಿನಾಯಿತಿ ನೀಡಲಾಗಿದೆ. ಗ್ರಾಹಕರಿಗೆ ಏಪ್ರಿಲ್ ತಿಂಗಳ ಆಹಾರ ಧಾನ್ಯಗಳನ್ನು ಪಡಿತರ ಅಂಗಡಿಗಳಲ್ಲಿ ಒಟಿಪಿ ಪಡೆಯದೇ ಕೇವಲ ಸಹಿ ಪಡೆದು ವಿತರಿಸುವಂತೆ ಸರ್ಕಾರ ಆದೇಶಿಸಿದೆ.
ಕೊರೋನಾ ಎದುರಿಸಲು ರಾಜ್ಯದಲ್ಲಿ ಭರ್ಜರಿ ಸಿದ್ಧತೆ, ಲಾಕ್ಡೌನ್ ತೆರವು ಕಷ್ಟ!
ಹೊಸ ಪದ್ಧತಿಯಂತೆ ಗ್ರಾಹಕರಿಗೆ ಆಹಾರ ಧಾನ್ಯ ಪೂರೈಸುವಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ