ಮೋಟಾರು ವಾಹನಗಳ ತೆರಿಗೆ ಬಿಲ್‌ಗೆ ಚರ್ಚೆ ಇಲ್ಲದೆ ಅಂಗೀಕಾರ; ಹೊಸ ತಿದ್ದುಪಡಿಯಿಂದ ವಾಹನ ಮಾಲೀಕರಿಗೆ ಆಗುವ ಲಾಭವೇನು?

Kannadaprabha News   | Kannada Prabha
Published : Mar 26, 2026, 09:53 AM IST
 Karnataka Assembly Passes Motor Vehicles Taxation Bill Without Discussion

ಸಾರಾಂಶ

ಕರ್ನಾಟಕ ಸರ್ಕಾರವು ಸ್ಲೀಪರ್‌ ಕೋಚ್‌ ಮತ್ತು 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಒಪ್ಪಂದದ ವಾಹನಗಳ ಮೇಲಿನ ಪ್ರತಿ ಆಸನದ ತೆರಿಗೆಯನ್ನು ಗಣನೀಯವಾಗಿ ಇಳಿಕೆ. ಹೊರ ರಾಜ್ಯಗಳಲ್ಲಿ ಕಡಿಮೆ ತೆರಿಗೆಯಿಂದಾಗಿ ಅಲ್ಲಿ ನೋಂದಣಿಯಾಗುತ್ತಿದ್ದ ವಾಹನಗಳನ್ನು ರಾಜ್ಯಕ್ಕೆ ಮರಳಿ ಸೆಳೆಯುವ ಮಾಸ್ಟರ್ ಪ್ಲಾನ್

ಸ್ಲೀಪರ್‌ ಬಸ್‌ ಪ್ರತಿ ಆಸನದ ತೆರಿಗೆ 3,000ಕ್ಕೆ ಇಳಿಕೆ

 ವಿಧಾನಸಭೆ: ಹೆಚ್ಚಿನ ತೆರಿಗೆ ಹಿನ್ನೆಲೆಯಲ್ಲಿ ನೋಂದಣಿಗಾಗಿ ಹೊರ ರಾಜ್ಯಗಳತ್ತ ಮುಖಮಾಡುತ್ತಿರುವ ವಾಹನಗಳನ್ನು ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಬುಧವಾರ ತಂದಿರುವ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕ 2026’ ಯಾವುದೇ ಚರ್ಚೆಯಿಲ್ಲದೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಬುಧವಾರ ಬಜೆಟ್‌ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರ ಖಂಡಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಈ ನಡುವೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಈ ತಿದ್ದುಪಡಿ ವಿಧೇಯಕ ಮಂಡಿಸಿದರು. ವಿಪಕ್ಷಗಳ ಸದಸ್ಯರು ಸದನಕ್ಕೆ ವಾಪಸ್‌ ಬರುವ ವೇಳೆಗೆ ಯಾವುದೇ ಚರ್ಚೆ ಇಲ್ಲದೆ ಧ್ವನಿಮತದ ಮುಖಾಂತರ ಅಂಗೀಕಾರಗೊಂಡಿತು.

ವಿಧೇಯಕದಲ್ಲಿ ರಾಜ್ಯದಲ್ಲಿ ನೋಂದಣಿಯಾಗುವ 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಒಪ್ಪಂದದ ವಾಹನ ಹಾಗೂ ಸ್ಲೀಪರ್‌ ಕೋಚ್‌ ಬಸ್‌ಗಳಿಗೆ ಪ್ರತಿ ಆಸನಗಳಿಗೆ ಈಗಿರುವ ತೆರಿಗೆ ಪ್ರಮಾಣವನ್ನು ಕ್ರಮವಾಗಿ ಸಾವಿರ ರು. ಇಳಿಕೆ ಮಾಡಲಾಗಿದೆ. ಪ್ರಸ್ತುತ ಬಾಡಿಗೆಗೆ ಓಡಿಸುವ 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ವಾಹನಗಳಿಗೆ ಪ್ರತಿ ಆಸನಕ್ಕೆ 3,500 ರು. ಹಾಗೂ ಸ್ಲೀಪರ್‌ ಕೋಚ್‌ ಬಸ್‌ಗಳಿಗೆ ಪ್ರತಿ ಆಸನಕ್ಕೆ 4 ಸಾವಿರ ರು. ತೆರಿಗೆ ನಿಗದಿಪಡಿಸಲಾಗಿದೆ. ಈಗ ಅದನ್ನು ಕ್ರಮವಾಗಿ 2,500 ರು. ಮತ್ತು 3 ಸಾವಿರ ರು.ಗೆ ಇಳಿಸಲಾಗಿದೆ.

ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ, ಕೆಲ ಹೊರ ರಾಜ್ಯಗಳಲ್ಲಿ ವಾಹನಗಳ ನೋಂದಣಿ ಶುಲ್ಕ ಮತ್ತು ತೆರಿಗೆ ತುಂಬಾ ಕಡಿಮೆ ಇದೆ. ಹೀಗಾಗಿ ಸಾವಿರಾರು ವಾಹನಗಳು ಕಡಿಮೆ ತೆರಿಗೆ ಇರುವ ಈ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಂಡು ಕರ್ನಾಟಕದಲ್ಲಿ ಕಾರ್ಯಾಚರಣೆ ಮಾಡುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ಕೇಂದ್ರದ ಮೋಟಾರು ವಾಹನ ಕಾಯ್ದೆಯ ಆಲ್‌ ಇಂಡಿಯಾ ಟೂರ್‌ ಪರ್ಮಿಟ್‌ (ಎಟಿಪಿ)ಯಲ್ಲಿ ಅವಕಾಶವೂ ಇದೆ. ಈ ನಡುವೆ ರಾಜ್ಯದಲ್ಲಿ ವಾಹನಗಳ ನೋಂದಣಿ ಗಣನೀಯವಾಗಿ ಇಳಿಕೆಯಾಗುತ್ತಿರುವುದರಿಂದ ಆದಾಯ ಕೂಡ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ತಿದ್ದುಪಡಿ ವಿಧೇಯದ ಮುಖಾಂತರ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಿದೆ. ಈ ತಿದ್ದುಪಡಿಯಿಂದ ಸರ್ಕಾರವು 2026-27ನೇ ಸಾಲಿನಲ್ಲಿ 250 ಕೋಟಿ ರು. ಆದಾಯ ಸಂಗ್ರಹದ ನಿರೀಕ್ಷೆಯಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka Latest News: ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಾಧ್ಯಾಪಕನ ಕೆಟ್ಟ ಪ್ರಪೋಸ್‌, ಕಾಲೇಜಾಯ್ತು ರಣರಂಗ!
ಮತ್ತೆ ಸಚಿವ ಸಂಪುಟ ಪುನಾರಚನೆ ಗುಸುಗುಸು