LIVE NOW
Published : Jul 31, 2026, 07:33 AM ISTUpdated : Jul 31, 2026, 10:54 AM IST

Karnataka News Live: ಧರ್ಮಸ್ಥಳ ಬುರುಡೆ ಪ್ರಕರಣ - ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 3 ಅಸ್ಥಿಪಂಜದ ಡಿಎನ್‌ಎ ದೃಢ; ನಾಪತ್ತೆಯಾದವರ ಗುರುತು ಪತ್ತೆ!

ಸಾರಾಂಶ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯವೂ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಕರ್ನಾಟಕ ಬಂದ್‌ ನಡೆಸುವ ಕುರಿತು ಇಂದು (ಜು.31) ಮಹತ್ವದ ಸಭೆ ನಡೆಯಲಿದೆ.

ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣ, ಪ್ರವೀಣ್‌ ಕುಮಾರ್‌ ಶೆಟ್ಟಿ, ಸಾ.ರಾ.ಗೋವಿಂದು, ಕೆ.ಆರ್‌.ಕುಮಾರ್‌, ಮಂಜುನಾಥ್‌ ದೇವ್‌, ಸಿ.ಕೆ.ರಾಮೇಗೌಡ, ಪಾಲನೇತ್ರ, ವ.ಚ.ಚನ್ನೇಗೌಡ ಸೇರಿ 35ರಿಂದ 50 ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂಬ ಒತ್ತಾಯದೊಂದಿಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

10:54 AM (IST) Jul 31

ಧರ್ಮಸ್ಥಳ ಬುರುಡೆ ಪ್ರಕರಣ - ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 3 ಅಸ್ಥಿಪಂಜದ ಡಿಎನ್‌ಎ ದೃಢ; ನಾಪತ್ತೆಯಾದವರ ಗುರುತು ಪತ್ತೆ!

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂರರ ಗುರುತನ್ನು ಡಿಎನ್‌ಎ ಪರೀಕ್ಷೆಯಿಂದ ಅಧಿಕೃತವಾಗಿ ದೃಢಪಡಿಸಲಾಗಿದೆ. ಹಲವು ವರ್ಷಗಳ ಹಿಂದೆ ಕೊಡಗು, ತುಮಕೂರು ಮತ್ತು ಕೋಲಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಗಳಿವು ಎಂದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಎಸ್‌ಐಟಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.
Read Full Story

10:53 AM (IST) Jul 31

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್​, ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿದ ಹೈಕೋರ್ಟ್

ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಬಿಗ್ ರಿಲಫ್ ಸಿಕ್ಕಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕನಿಗೆ ಸೆಷನ್ ಕೋರ್ಟ್ ಜಾಮೀನು ನೀರಾಕರಿಸಿತ್ತು. ಇದೀಗ ಹೈಕೋರ್ಟ್ ಜಾಮೀನು ನೀಡಿದೆ.

Read Full Story

10:26 AM (IST) Jul 31

HMT Land Row 450 ಎಕರೆ ಎಚ್ಎಂಟಿ ಭೂಮಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳದಂತೆ ಹೈಕೋರ್ಟ್‌ನಿಂದ ತಡೆ

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಲಿಮಿಟೆಡ್‌ಗೆ ಸೇರಿದ 430 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಭೂಮಿ ಹಸ್ತಾಂತರಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ ಎಚ್‌ಎಂಟಿಯನ್ನು ತೆರವುಗೊಳಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.
Read Full Story

10:24 AM (IST) Jul 31

ಕಮಲಾಕರ್‌ ಭಟ್‌ಗೆ ಮತ್ತೆ ಬಿಗ್‌ ಶಾಕ್..‌ ವಸಂತ್‌ ನಾಯ್ಕ್-ಸುಚಿತ್ರ ಕೇಸ್‌ನಲ್ಲಿ ಬಿಗ್‌ ಅಪ್‌ಡೇಟ್ಸ್‌..!

ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದ್ದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಜನ ಆರೋಪಿಗಳ ಮಧ್ಯಂತರ ಜಾಮೀನು ಅರ್ಜಿಯನ್ನು ಶಿರಸಿಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

Read Full Story

10:19 AM (IST) Jul 31

ಏನ್ರೀ ಇದು.. ರಶ್ಮಿಕಾ ಜೊತೆ ಮದುವೆ ಬಳಿಕ 10 ವರ್ಷದ ಹಿಂದಿನ 'ಆ ವ್ಯಕ್ತಿ' ನೆನಪಿಸಿಕೊಂಡ ವಿಜಯ್ ದೇವರಕೊಂಡ!

"ಇಂದಿನಿಂದ ನಾನು ಮಾಡುವ ಪ್ರತಿಯೊಂದು ಕೆಲಸವೂ ಹೃದಯದಿಂದಲೇ ಇರುತ್ತದೆ." ಸೋಲುಗಳು ಅವರನ್ನು ಬದಲಿಸಿರಬಹುದು, ಆದರೆ ಅವರಲ್ಲಿನ ಆ ಹಠ ಮತ್ತು ಪ್ರೇಕ್ಷಕರ ಮೇಲಿನ ಪ್ರೀತಿ ಮಾತ್ರ ಬದಲಾಗಿಲ್ಲ.. " ರಶ್ಮಿಕಾ ಮಂದಣ್ಣ ಪತಿ ವಿಜಯ್ ಹೀಗ್ ಹೇಳಿದ್ಯಾಕೆ? ಈ ಸ್ಟೋರಿ ನೋಡಿ..

Read Full Story

10:10 AM (IST) Jul 31

ಕುಡಿಯುವ ನೀರನ್ನ ಅಕ್ರಮವಾಗಿ ಜಮೀನಿಗೆ ಹರಿಸಿಕೊಂಡ ರೈತರು.. ಕೊಪ್ಪಳದಲ್ಲಿ ಅಸಲಿಗೆ ಆಗಿದ್ದೇನು?

ಗಂಗಾವತಿ ತಾಲೂಕಿನ ಬಸಾಪಟ್ಟಣ, ಹಿರೇಬೆಣಕಲ್ ಹಾಗೂ ದಾಸನಾಳ ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಹರಿಸಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಡಿಸ್ಟ್ರುಬ್ಯೂಟರ್ (Distributor) 14, 15, 16 ಮತ್ತು 17 ರಲ್ಲಿ ರೈತರು ಮುಖ್ಯ ಕಾಲುವೆಯಿಂದ (Main Canal) ಸಣ್ಣ ಕಾಲುವೆಗಳು ಹಾಗೂ ಉಪ-ಕಾಲುವೆಗಳ ಮೂಲಕ ಜಮೀನುಗಳಿಗೆ ಅಕ್ರಮವಾಗಿ ನೀರನ್ನು ಹರಿಸಿಕೊಳ್ಳುತ್ತಿದ್ದಾರೆ.

Read Full Story

09:48 AM (IST) Jul 31

ಮಾವ ಜೈಲು ಪಾಲು, ಅಳಿಯನ ಕನಸು ಮಣ್ಣು ಪಾಲು..? ದರ್ಶನ್ ಕುಟುಂಬದ ಕುಡಿ ಚಂದು ಸಿನಿಮಾ ಏನಾಯ್ತು? ಈ ಸ್ಟೋರಿ ನೋಡಿ..

ದರ್ಶನ್ ಅಕ್ಕನ‌ ಮಗ ಚಂದು ನಾಯಕನಾಗಿ ಪರಿಚಯಿಸಲು ದರ್ಶನ್ ಸಹೋದರರು ಸಿದ್ದರಾಗಿದ್ರು. ಚಂದು ನಾಯಕನಾಗಿ ನಟಿಸಬೇಕಿದ್ದ ಚಿತ್ರದ ಮುಹೂರ್ತ ಕಳೆದ ವರ್ಷ ಆಗಸ್ಟ್​ನಲ್ಲಿ ಆಗಬೇಕಿತ್ತು. ಅಷ್ಟರಲ್ಲಿ ಕೊಲೆ ಆರೋಪ ದರ್ಶನ್ ಮೇಲೆ ಬಂದು ಬಿಡ್ತು. ಈಗ ಈ ಸಿನಿಮಾ ಗತಿ ಏನು? ಉತ್ತರಕ್ಕೆ ಈ ಸ್ಟೋರಿ ನೋಡಿ..

Read Full Story

08:59 AM (IST) Jul 31

ಕಾವೇರಿ ನೀರು ಬಿಡುಗಡೆಗೆ ನಿರ್ವಹಣಾ ಪ್ರಾಧಿಕಾರದಿಂದಲೂ ಆದೇಶ ಕಾವೇರಿ ಇಕ್ಕಟ್ಟಿನಲ್ಲಿ ಸರ್ಕಾರ - ಮುಂದೇನು?

ತಮಿಳುನಾಡಿಗೆ ನಿತ್ಯ 3500 ಕ್ಯುಸೆಕ್‌ ನೀರು ಬಿಡಬೇಕೆಂಬ ಸಿಡಬ್ಲ್ಯುಆರ್‌ಸಿ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರ, ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದೆ.
Read Full Story

08:58 AM (IST) Jul 31

ಜನರಿಗೆ ಮತ್ತೆ ಬೆಲೆ ಏರಿಕೆ ಬರೆ..! ಆಗಸ್ಟ್‌ನಿಂದ ಇವುಗಳ ಭಾರೀ ಹೆಚ್ಚಳ.. ಲಿಸ್ಟ್‌ ನೋಡಿ ಗಾಬರಿ ಆಗಬೇಡಿ!

ಸಾಮಾನ್ಯ ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಆಗಸ್ಟ್ ತಿಂಗಳಿನಿಂದ ನಿಮ್ಮ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದ್ದು, ಹಲವು ದಿನಬಳಕೆ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ಬೆಲೆಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಲಿವೆ. ಹೇರ್ ಆಯಿಲ್, ಟೀ ಪುಡಿ, ಬಟ್ಟೆಗಳು ಹಾಗೂ ಎಲೆಕ್ಟ್ರಾನಿಕ್ ಸರಕುಗಳ ಬೆಲೆಗಳು ಶೀಘ್ರದಲ್ಲೇ ಗಗನಕ್ಕೇರಲಿವೆ.

Read Full Story

08:50 AM (IST) Jul 31

ಯೋಗೇಶ್ ಗೌಡ ಹತ್ಯೆ ಕೇಸ್ - ಜಾಮೀನು ಕೋರಿ ವಿನಯ್‌ ಕುಲಕರ್ಣಿ ಅರ್ಜಿ ಇಂದು ಹೈಕೋರ್ಟ್‌ ತೀರ್ಪು

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಈ ಮನವಿಯ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
Read Full Story

08:04 AM (IST) Jul 31

ಫುಟ್ಬಾಲ್‌ ವಿಶ್ವಕಪ್‌ ಬಹಿಷ್ಕಾರ - ಸ್ಪೇನ್‌ ಸೇರಿ 55 ದೇಶ ಎಚ್ಚರಿಕೆ! ಅಷ್ಟಕ್ಕೂ ಆಗಿದ್ದೇನು?

ಫಿಫಾದ ವಾಣಿಜ್ಯ ಚಟುವಟಿಕೆಗಳಲ್ಲಿ ಖಾಸಗಿ ಹೂಡಿಕೆದಾರರಿಗೆ ಪಾಲು ನೀಡುವ ಯೋಜನೆಗೆ ಯುಇಎಫ್‌ಎ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಪ್ರಸ್ತಾವನೆ ಮುಂದುವರಿದರೆ ವಿಶ್ವಕಪ್‌ ಸೇರಿದಂತೆ ಪ್ರಮುಖ ಟೂರ್ನಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದೆ. ಇದೇ ವೇಳೆ, ಅಕ್ಟೋಬರ್ 3ರಂದು ಕೋಲ್ಕತಾದಲ್ಲಿ ಭಾರತ ಮತ್ತು ಬ್ರೆಜಿಲ್ ನಡುವೆ ಸ್ನೇಹಾರ್ಥ ಫುಟ್ಬಾಲ್ ಪಂದ್ಯ ನಡೆಯಲಿದೆ.
Read Full Story

08:04 AM (IST) Jul 31

ಕೆಆರ್ ಪೇಟೆ - ಪೌತಿ ಖಾತೆ ಬಗ್ಗೆ ವಿಚಾರಿಸಲು ಬಂದ ರೈತನನ್ನ ಕೂಡಿಹಾಕಿದ ತಹಸೀಲ್ದಾರ್‌!

ಕೆ.ಆರ್.ಪೇಟೆ ತಾಲೂಕು ಕಚೇರಿಯಲ್ಲಿ ಪೌತಿ ಖಾತೆ ಬಗ್ಗೆ ವಿಚಾರಿಸಲು ಹೋದ ರೈತನನ್ನು ತಹಸೀಲ್ದಾರ್ ಮತ್ತು ಸಿಬ್ಬಂದಿ ಕೊಠಡಿಯಲ್ಲಿ ಕೂಡಿಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಧಿಕಾರಿಯ ನಡೆಗೆ ತೀವ್ರ ಟೀಕೆ ವ್ಯಕ್ತವಾಗಿದೆ.
Read Full Story

More Trending News