Published : Jul 31, 2026, 07:33 AM ISTUpdated : Jul 31, 2026, 10:51 PM IST

Karnataka News Live: ಇಂಗ್ಲೆಂಡ್‌ನಲ್ಲಿ ಭಾರತ ದಿವ್ಯಾಂಗ ಕ್ರಿಕೆಟ್‌ ತಂಡದ ಪರ ಆಡಲಿದ್ದಾನೆ ವಿಜಯಪುರದ ಚಿಂದಿ ಆಯುವವನ ಪುತ್ರ

ಸಾರಾಂಶ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯವೂ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಕರ್ನಾಟಕ ಬಂದ್‌ ನಡೆಸುವ ಕುರಿತು ಇಂದು (ಜು.31) ಮಹತ್ವದ ಸಭೆ ನಡೆಯಲಿದೆ.

ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣ, ಪ್ರವೀಣ್‌ ಕುಮಾರ್‌ ಶೆಟ್ಟಿ, ಸಾ.ರಾ.ಗೋವಿಂದು, ಕೆ.ಆರ್‌.ಕುಮಾರ್‌, ಮಂಜುನಾಥ್‌ ದೇವ್‌, ಸಿ.ಕೆ.ರಾಮೇಗೌಡ, ಪಾಲನೇತ್ರ, ವ.ಚ.ಚನ್ನೇಗೌಡ ಸೇರಿ 35ರಿಂದ 50 ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂಬ ಒತ್ತಾಯದೊಂದಿಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

10:51 PM (IST) Jul 31

ಇಂಗ್ಲೆಂಡ್‌ನಲ್ಲಿ ಭಾರತ ದಿವ್ಯಾಂಗ ಕ್ರಿಕೆಟ್‌ ತಂಡದ ಪರ ಆಡಲಿದ್ದಾನೆ ವಿಜಯಪುರದ ಚಿಂದಿ ಆಯುವವನ ಪುತ್ರ

ವಿಜಯಪುರದ ಕೊಳೆಗೇರಿಯ ಗುಡಿಸಲಿನಲ್ಲಿ ವಾಸಿಸುವ, ಚಿಂದಿ ಆಯುವ ದಂಪತಿಯ ಮಗನಾದ ವಿಕಲಚೇತನ ಕ್ರಿಕೆಟಿಗ ರಾಜೇಶ್ ಕಣ್ಣೂರ್, ಬಡತನದ ನಡುವೆಯೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

Read Full Story

10:28 PM (IST) Jul 31

ಕರ್ನಾಟಕದಲ್ಲಿ ಟೋಲ್ ಸಂಗ್ರಹ ಭಾರಿ ಜಿಗಿತ - 5 ವರ್ಷಗಳಲ್ಲಿ ದ್ವಿಗುಣಗೊಂಡ ಆದಾಯ, ₹4,779 ಕೋಟಿಗೆ ಏರಿಕೆ!

ಕಳೆದ ಐದು ವರ್ಷಗಳಲ್ಲಿ ಕರ್ನಾಟಕದ ಟೋಲ್ ಸಂಗ್ರಹಣೆ ಶೇ.100ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆ, 46 ರಿಂದ 68ಕ್ಕೆ ಏರಿದ ಟೋಲ್ ಪ್ಲಾಜಾಗಳ ಸಂಖ್ಯೆ ಮತ್ತು ನಿಯತಕಾಲಿಕ ದರ ಏರಿಕೆಯು ಈ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ.

Read Full Story

10:09 PM (IST) Jul 31

ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ; ಅಭಿಮಾನಿಗಳಿಂದ ಜೈಕಾರ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು.
Read Full Story

10:03 PM (IST) Jul 31

Bengaluru - ಯುಪಿಐ ಪಾವತಿ ಫೇಲ್, ಚಿಲ್ಲರೆ ಗಲಾಟೆ - ಹಣವಿದ್ದರೂ ಹೆದ್ದಾರಿಯಲ್ಲಿ ಪ್ರಯಾಣಿಕನನ್ನು ಕೆಳಗಿಳಿಸಿದ BMTC ಕಂಡಕ್ಟರ್!

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಯುಪಿಐ ಪಾವತಿ ವಿಫಲವಾದ ಕಾರಣ, ಕಂಡಕ್ಟರ್ ಪ್ರಯಾಣಿಕರೊಬ್ಬರನ್ನು ನಡುರಸ್ತೆಯಲ್ಲಿ ಇಳಿಸಿದ್ದಾರೆ. ಚಿಲ್ಲರೆ ಹಣ ಇಲ್ಲದಿರುವುದು ಮತ್ತು ಯಂತ್ರದ ದೋಷದಿಂದ ಉಂಟಾದ ಈ ಘಟನೆ ರೆಡ್ಡಿಟ್‌ನಲ್ಲಿ ವೈರಲ್ ಆಗಿದ್ದು, ಬಿಎಂಟಿಸಿ ಸಿಬ್ಬಂದಿಯ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

Read Full Story

09:53 PM (IST) Jul 31

'ನೀನು ರಾಯರಂತೆ ನಟಿಸುತ್ತೀಯಾ' ಎಂದ ಅಜ್ಜಿ - ರಾಘವೇಂದ್ರ ಮಹಾತ್ಮೆ ನಟ ಪರೀಕ್ಷಿತ್ ಭಾವುಕ

ರಾಘವೇಂದ್ರ ಸ್ವಾಮಿಗಳ ಪಾತ್ರದಲ್ಲಿ ನಟಿಸುತ್ತಿರುವ ಪರೀಕ್ಷಿತ್ ಅವರ ಅಭಿನಯ ವೀಕ್ಷಕರಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಇದೀಗ ಆ ಮೆಚ್ಚುಗೆಗೆ ಜೀವಂತ ಸಾಕ್ಷಿಯಾಗುವಂತಹ ಒಂದು ವಿಶೇಷ ಘಟನೆ ನಡೆದಿದೆ.

Read Full Story

09:04 PM (IST) Jul 31

35ರ ನಂತರ ತೂಕ ಹೆಚ್ಚಳಕ್ಕೆ ವಯಸ್ಸೇ ಕಾರಣವಲ್ಲ - ಥೈರಾಯ್ಡ್ ಸಮಸ್ಯೆಯ ಈ ಸೂಚನೆಗಳನ್ನು ಗಮನಿಸಿ

ದೇಹದ ಚಯಾಪಚಯ ಕ್ರಿಯೆ, ಶಕ್ತಿ ಮತ್ತು ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಥೈರಾಯ್ಡ್ ಗ್ರಂಥಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಕಾರ್ಯದಲ್ಲಿನ ವ್ಯತ್ಯಾಸವು ಅನಿರೀಕ್ಷಿತ ತೂಕ ಹೆಚ್ಚಳಕ್ಕೆ ಕಾರಣವಾಗಬಹುದು.

Read Full Story

08:39 PM (IST) Jul 31

ಕೊಡಗಿನ ಅಭಿವೃದ್ಧಿಗೆ ಸಚಿವ ಸ್ಥಾನ ಅಗತ್ಯ - ಶಾಸಕ ಮಂತರ್ ಗೌಡ ಹೇಳಿದ್ದೇನು?

ಸಚಿವ ಸಂಪುಟ ವಿಸ್ತರಣೆ ಫೈನಲ್ ಎನ್ನುತ್ತಿದ್ದು, ಈಗ ಅದು ಸೋಮವಾರಕ್ಕೆ ಹೋಗಿದೆ. ಸಚಿವಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಯಾವ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಹೈಕಮಾಂಡ್ ರಾಜ್ಯ ನಾಯಕರು ಯಾವ ರೀತಿ..

Read Full Story

08:21 PM (IST) Jul 31

ತೋಟದ ಕೆಲಸ, ಪ್ಲಂಬಿಂಗ್‌ ಕೆಲಸಕ್ಕೆ ಜನ ಸಿಕ್ತಿಲ್ವಾ? ಅದಕ್ಕೂ ಬಂದಿದೆ ಹೊಸ ಅಪ್ಲಿಕೇಶನ್‌ The Mestri

ಬನವಾಸಿ ಸಮೀಪದ ಕೃಷಿಕ ಹಾಗೂ ಐಟಿ ಎಂಜಿನಿಯರ್ ಗೌತಮ್ ಬೆಂಗಳೆ ಅವರು 'ದ ಮೇಸ್ತ್ರಿ' ಎಂಬ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದಾರೆ. ಈ ಆ್ಯಪ್, ಕೌಶಲ್ಯಪೂರಿತ ಕೆಲಸಗಾರರನ್ನು ಮತ್ತು ಸೇವೆ ಬಯಸುವ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ.
Read Full Story

08:12 PM (IST) Jul 31

ಪದೇಪದೇ ಚಾಕೊಲೇಟ್ ತಿನ್ನೋ ಅಭ್ಯಾಸ ಇದೆಯಾ? ದಿನವೊಂದಕ್ಕೆ ಇಷ್ಟು ಮಾತ್ರ ತಿಂದ್ರೆ ನೀವು ಬಚಾವ್ ಆಗ್ತಿರಾ! ಇಲ್ಲ ಅಂದ್ರೆ..

ಆರೋಗ್ಯಕರ ಆಹಾರ ಪದ್ಧತಿ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ, ಡಾರ್ಕ್ ಚಾಕೊಲೇಟ್ ಅನ್ನು ಸವಿಯುವ ಅಭ್ಯಾಸ ಮಾಡಿಕೊಳ್ಳಿ. ನೆನಪಿಡಿ, ‘ಕಹಿ’ಯಾದ ಕೋಕೋ ಹೆಚ್ಚಿದ್ದಷ್ಟೂ ನಿಮ್ಮ ಆರೋಗ್ಯಕ್ಕೆ ‘ಸಿಹಿ’ ಹೆಚ್ಚು!.. ಚಾಕೊಲೇಟ್ ಸೀಕ್ರೆಟ್ ತಿಳಿಯಲು ಈ ಸ್ಟೋರಿ ನೋಡಿ..

Read Full Story

08:00 PM (IST) Jul 31

‘ಅಯ್ಯೋ ಅಣ್ಣಾ, ನನ್ನ ಹೊರಗೆ ತೆಗೆಯಿರಿ’; ಮೋಕ್ಷ ಸಿಗುತ್ತೆ ಅಂತ ಹೋಗಿ ಸಾವಿನ ದವಡೆಗೆ ಜಾರಿದ ಮಹಿಳೆ; ಮುಂದೆ ಆಗಿದ್ದೇನು?

ಮೋಕ್ಷ ಸಿಗುತ್ತದೆ ಎಂಬ ಮೂಢನಂಬಿಕೆಯಿಂದ ತಿರುವಣ್ಣಾಮಲೈನ 'ಮೋಕ್ಷ ಮಾರ್ಗಂ' ಎಂಬ ಕಿರಿದಾದ ಗುಹೆಯಲ್ಲಿ ಸಿಲುಕಿಕೊಂಡ ಮಹಿಳೆಯೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Read Full Story

07:48 PM (IST) Jul 31

ಕಾರ್ಪೊರೇಟ್ ಕೆಲಸ ಬಿಟ್ಟು ಸಿನಿಮಾ ಕನಸಿನ ಹಿಂದೆ ಓಡಿದ ತಾರುಷ್ - 'ಜಾಲಿ' ಮೂಲಕ ಹೊಸ ಹೆಜ್ಜೆ

Jolly Kannada Movie: ಕನ್ನಡ ಚಿತ್ರರಂಗದಲ್ಲಿ ಹೊಸಬರ ಸಿನಿಮಾಗಳಿಗೆ ಪ್ರೇಕ್ಷಕರ ಬೆಂಬಲ ಅತ್ಯಗತ್ಯ. ಒಂದು ಸಿನಿಮಾ ಯಶಸ್ಸು ಕಾಣಬೇಕೆಂದರೆ ಉತ್ತಮ ಕಥೆಯ ಜೊತೆಗೆ ಪ್ರೇಕ್ಷಕರ ಪ್ರೋತ್ಸಾಹವೂ ಬೇಕು.

Read Full Story

07:16 PM (IST) Jul 31

ರಾವಣನಾಗಿ ಅಬ್ಬರಿಸಿರುವ ಯಶ್‌ಗೆ ರಿಯಲ್‌ ಲೈಫ್‌ನಲ್ಲಿ 'ಹಾರರ್' ಸಿನಿಮಾಗಳಂದ್ರೆ ಭಯವಂತೆ!

Yash On Horror Movies: ಹಾರರ್ ಸಿನಿಮಾಗಳ ಬಗ್ಗೆ ಮಾತನಾಡಿದ್ದ ಯಶ್‌, "ನಾನು ಎಲ್ಲಾ ರೀತಿಯ ಸಿನಿಮಾಗಳನ್ನು ನೋಡುತ್ತೇನೆ. ಆದರೆ ಹಾರರ್ ಸಿನಿಮಾಗಳನ್ನು ಮಾತ್ರ ಹೆಚ್ಚಾಗಿ ನೋಡುವುದಿಲ್ಲ.

Read Full Story

06:56 PM (IST) Jul 31

Toxic - ಕಂಪ್ಲೀಟ್ ಗುಟ್ಟು ಬಿಚ್ಚಿಟ್ಟ ಯಶ್.. 'ಟಾಕ್ಸಿಕ್'ನಲ್ಲಿ ರೊಮಾನ್ಸ್ ಮಾತ್ರವಲ್ಲ ಬೇರೇನೋ ಇದೆಯಂತೆ!

ಕಾಯ್ತಾ ಕಾಯ್ತಾ ಕಣ್ಣು ದಣಿದು ಹೋಗಿದ್ದ ಯಶ್​ಅಭಿಮಾನಿಗಳಿಗೆ, ಇಡೀ ಇಂಡಿಯನ್ ಸಿನಿಪ್ರೇಮಿಗಳಿಗೆ ಅಸಲಿ ಹಬ್ಬ ಆಗಿದ್ದು, ಟಾಕ್ಸಿಕ್​​ ಸಿನಿಮಾದ ರೊಮ್ಯಾಂಟಿಕ್ ಹಾಡು. ‘ತಬಾಹಿ’ಯಲ್ಲಿ ಕಿಯಾರಾನಾ ತಬ್ಬಿ ಮುದ್ದಾಡಿದ್ರು ಯಶ್.. ಆದ್ರೆ , ಸಿನಿಮಾದಲ್ಲಿ ಇನ್ನೂ ಏನೋ ಇದೆ ಅಂತ ಹೇಳಿದ್ದಾರೆ ಯಶ್!

Read Full Story

06:10 PM (IST) Jul 31

ಯಕ್ಷರಂಗದ ನಗುವಿನ ಚಕ್ರವರ್ತಿ ಶ್ರೀಧರ ಭಟ್ ಕಾಸರಕೋಡ್ ನಿಧನ; ಅಭಿಮಾನಿಗಳು ಕಣ್ಣೀರು

ಯಕ್ಷಗಾನದ ಹಾಸ್ಯ ಚಕ್ರವರ್ತಿ ಎಂದು ಖ್ಯಾತರಾಗಿದ್ದ ಶ್ರೀಧರ ಭಟ್ ಕಾಸರಕೋಡ್ (52) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರುವರೆ ದಶಕಗಳ ಕಾಲ ಯಕ್ಷರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು, ಗುಂಡಬಾಳ, ಮಂದಾರ್ತಿ, ಸಾಲಿಗ್ರಾಮ, ಜಲವಳ್ಳಿ ಮೇಳಗಳಲ್ಲಿ ಹಾಸ್ಯಕಲಾವಿದರಾಗಿ ಜನಪ್ರಿಯರಾಗಿದ್ದರು.
Read Full Story

06:07 PM (IST) Jul 31

ಯಶ್ 'ರಾಮಾಯಣ' ಹೈಪ್ ನಡುವೆ ರಾವಣನ ಮೂರ್ತಿ ಮುಂದೆ ರಾಧಿಕಾ - ಅಭಿಮಾನಿಗಳಲ್ಲಿ ಹೊಸ ಚರ್ಚೆ

Radhika Pandit Viral Photo: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಂದು ವಿಚಾರ ಸಖತ್ ಚರ್ಚೆಗೆ ಗ್ರಾಸವಾಗಿದೆ.

Read Full Story

05:29 PM (IST) Jul 31

35 ಟಿಎಂಸಿ ನೀರಿದ್ದರೂ ವಿಜಯನಗರ 11ಎ ಕಾಲುವೆಗೆ ನೀರಿಲ್ಲ - ಸರ್ಕಾರದ ವಿರುದ್ಧ ರೆಡ್ಡಿ, ಶ್ರೀರಾಮುಲು ಆಕ್ರೋಶ

Vijayanagar 11A Canal: ವಿಜಯನಗರ 11 ಎ ಕಾಲುವೆಗೆ ನೀರು ಬಿಡುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದಿಂದ ಅಂಜನಾದ್ರಿಯಿಂದ ಮುನಿರಾಬಾದ್ ನೀರಾವರಿ ಇಲಾಖೆಯವರಿಗೂ ಬೃಹತ್ ಪ್ರತಿಭಟನೆ ನಡೆಯಿತು.

Read Full Story

05:20 PM (IST) Jul 31

ಪ್ರತಾಪ್ ಸಿಂಹಗೆ ಸಕಲೇಶಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಓಪನ್ ಚಾಲೆಂಜ್ ಹಾಕಿದ ಚಾಮರಾಜ ಕ್ಷೇತ್ರದ ಶಾಸಕ!

ಶಾಸಕ ಕೆ.ಹರೀಶ್ ಗೌಡ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಚಾಮುಂಡಿಬೆಟ್ಟದಲ್ಲಿ ಬಹಿರಂಗ ಸವಾಲು ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಕಲೇಶಪುರ ಅಥವಾ ಚಾಮರಾಜ ಕ್ಷೇತ್ರದಿಂದ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಆಹ್ವಾನಿಸಿದ್ದು, ವೈಯಕ್ತಿಕ ಟೀಕೆ ಮತ್ತು ಪದಬಳಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read Full Story

05:03 PM (IST) Jul 31

Vinay Kulkarni - ಸಂಪುಟ ವಿಸ್ತರಣೆ ಸಮಯದಲ್ಲೇ ವಿನಯ್‌ಗೆ ಜಾಮೀನು; ಸೇರ್ತಾರಾ ಡಿಕೆ ಕ್ಯಾಬಿನೆಟ್‌? ಈಗ ಸುಪ್ರೀಂ ನಡೆ ಮೇಲೆ ಎಲ್ಲರ ಚಿತ್ತ!

ಯೋಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು ಮತ್ತು ಶಿಕ್ಷೆಗೆ ತಡೆ ಸಿಕ್ಕಿದೆ. ಇದರಿಂದಾಗಿ, ಅವರ ಸಚಿವ ಸಂಪುಟ ಸೇರ್ಪಡೆಯ ಚರ್ಚೆಗಳು ಗರಿಗೆದರಿದ್ದು, ಕಾಂಗ್ರೆಸ್ ವಲಯದಲ್ಲಿ ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಆದರೆ, ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆ ಇರುವುದರಿಂದ, ಅವರ ರಾಜಕೀಯ ಭವಿಷ್ಯವು ಸರ್ವೋಚ್ಚ ನ್ಯಾಯಾಲಯದ ಮುಂದಿನ ನಡೆಯನ್ನು ಅವಲಂಬಿಸಿದೆ.
Read Full Story

04:41 PM (IST) Jul 31

164 ಎಕರೆ ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಗೃಹ ಮಂಡಳಿ, ರೈತರು ನಿರಾಳ

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದಲ್ಲಿ ಗೃಹ ಯೋಜನೆಗಾಗಿ ಉದ್ದೇಶಿಸಿದ್ದ 164 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕರ್ನಾಟಕ ಗೃಹ ಮಂಡಳಿ (KHB) ಅಧಿಕೃತವಾಗಿ ಹಿಂಪಡೆದಿದೆ.

Read Full Story

04:20 PM (IST) Jul 31

'ಯಶಸ್ಸನ್ನು ಜೀರ್ಣಿಸಿಕೊಳ್ಳೋದು ಕಷ್ಟ..' RCB ಸ್ಟಾರ್‍‌ಗೆ ಏನಾಯ್ತು? ಕೃನಾಲ್ ಹೀಗ್ಯಾಕೆ ಹೇಳಿದ್ರು? VIDEO

ಆರ್‌ಸಿಬಿ ಪಾಡ್‌ಕಾಸ್ಟ್‌ನಲ್ಲಿ ಕ್ರಿಕೆಟಿಗ ಕೃನಾಲ್ ಪಾಂಡ್ಯ ತಮ್ಮ ವೃತ್ತಿಜೀವನದ ರಹಸ್ಯಗಳನ್ನು ಹಂಚಿಕೊಂಡಿದ್ದಾರೆ. ಯಶಸ್ಸನ್ನು ಜೀರ್ಣಿಸಿಕೊಳ್ಳುವುದು, ತಂಡದ ಗೆಲುವಿಗೆ ಆದ್ಯತೆ ನೀಡುವುದು ಮತ್ತು ಒತ್ತಡವನ್ನು ನಿಭಾಯಿಸುವ ಬಗ್ಗೆ ಅವರು ಸ್ಫೂರ್ತಿದಾಯಕ ಮಾತುಗಳನ್ನಾಡಿದ್ದಾರೆ. ಅವರ ತಂದೆಯ ಶ್ರಮವೇ ತಮ್ಮ ಸ್ಪರ್ಧಾತ್ಮಕ ಗುಣಕ್ಕೆ ಸ್ಫೂರ್ತಿ ಎಂದು ಅವರು ಹೇಳಿದ್ದಾರೆ.
Read Full Story

04:19 PM (IST) Jul 31

Exclusive Interview - ಕನ್ನಡದ ಮೊಟ್ಟ ಮೊದಲ ಜೆನ್‌ ಜೀ ಸಿನಿಮಾ ಬುಲ್ಲಿ - ಭುವನ್‌ ಪೊನ್ನಣ್ಣ ಸಂದರ್ಶನ

ಭುವನ್‌ ಪೊನ್ನಣ್ಣ ಮೂರು ವರ್ಷಗಳ ಬ್ರೇಕ್‌ ಬಳಿಕ ‘ಬುಲ್ಲಿ’ ಸಿನಿಮಾ ಮಾಡುತ್ತಿದ್ದಾರೆ. ಸಮೃದ್ಧ್‌ ಸ್ಟುಡಿಯೋಸ್‌ ಮತ್ತು ಭುವನಂ ಎಂಟರ್‌ಟೇನ್‌ಮೆಂಟ್‌ ನಿರ್ಮಿಸುತ್ತಿರುವ ಈ ಸಿನಿಮಾವನ್ನು ಅನೂಪ್‌ ಆ್ಯಂಟನಿ ನಿರ್ದೇಶಿಸುತ್ತಿದ್ದಾರೆ. ಸಿನಿಮಾ ಬಗ್ಗೆ ಭುವನ್‌ ಮಾತು.

Read Full Story

04:12 PM (IST) Jul 31

ರಹಾನೆ ವಿಷಯದಲ್ಲಿ ಅನ್ಯಾಯ; ಅವರು ಹಾಗೆ ನಡೆಸಿಕೊಳ್ಳಬಾರ್ದಿತ್ತು, ಆಕ್ರೋಶ ವ್ಯಕ್ತಪಡಿಸಿದ ಮಾಜಿ ನಾಯಕ!

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರಹಾನೆ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅವರ ನಿವೃತ್ತಿಯ ನಂತರ, ಟೀಂ ಇಂಡಿಯಾ ಮಾಜಿ ನಾಯಕ ಅವರು ರಹಾನೆಗೆ ಅನ್ಯಾಯ ಮಾಡಿದ್ದಾರೆ ಮತ್ತು ಅವರನ್ನು ಉತ್ತಮವಾಗಿ ನಡೆಸಿಕೊಳ್ಳಬೇಕಿತ್ತು ಎಂದು ಆರೋಪಿಸಿದ್ದಾರೆ.

Read Full Story

03:36 PM (IST) Jul 31

ಧಾರವಾಡ - ವಿನಯ್ ಕುಲಕರ್ಣಿಗೆ ಜಾಮೀನು, 'ನಾನು ಸುಪ್ರೀಂ ಕೋರ್ಟ್‌ಗೆ ಹೋಗಲ್ಲ' ಎಂದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ತೀರ್ಪನ್ನು ಪ್ರಶ್ನಿಸಿ ಮೃತರ ಸಹೋದರ ಸುಪ್ರೀಂ ಕೋರ್ಟ್‌ಗೆ ಹೋಗಲು ಸಿದ್ಧರಾಗಿದ್ದರೆ, ಪತ್ನಿ ಮಲ್ಲಮ್ಮ ಮಾತ್ರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಾನೂನು ಹೋರಾಟದಿಂದ ಹಿಂದೆ ಸರಿಯುವ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ.
Read Full Story

03:21 PM (IST) Jul 31

ಎಲ್ಲಿ ಮರೆಯಾದೆ? ಕಾವ್ಯಾ.. ಏಕೆ ದೂರಾದೆ? 'ಬಿಗ್ ಬಾಸ್' ಬಳಿಕ ಏಕೆ ಸಿನಿಮಾನೂ ಮಾಡ್ತಿಲ್ಲ 'ಕೊತ್ತಲವಾಡಿ' ಸುಂದರಿ?

ಕೊತ್ತಲವಾಡಿ ಸಿನಿಮಾ ಮೂಲಕ ಕನ್ನಡಿಗರ ಮನೆಮನಕ್ಕೆ ಬಲಗಾಲಿಟ್ಟು ಬಂದಿದ್ದ ನಟಿ ಕಾವ್ಯಾ ಶೈವ ಅವರು ಬಿಗ್ ಬಾಸ್ ಕನ್ನಡ ಸೀಸನ್ 12 ಮೂಲಕ ಕನ್ನಡ ಕಿರುತೆರೆ ವೀಕ್ಷಕರ ಹೃದಯದಲ್ಲಿ ಹರಿದಾಡುತ್ತಿದ್ದರು. ಆದ್ರೆ ಈಗ ಕಾವ್ಯಾ ಶೈವರ ಸಿನಿಮಾ ಇಲ್ಲ, ಕಿರುತೆರೆಯಲ್ಲಿಯೂ 'ದರ್ಶನ' ಇಲ್ಲ ಏಕೆ? ಈ ಸ್ಟೋರಿ ನೋಡಿ..

Read Full Story

03:06 PM (IST) Jul 31

ಸಿಎಂ ವಿಜಯ್‌ರನ್ನ ಕರೆಸಿ ಪ್ರತಿಭಟನೆ ಮಾಡಿದ್ರೆ ನನಗೆ ಸಮಾಧಾನ ಕಾಣುತ್ತಿಲ್ಲ - ಡಿ.ಕೆ. ಶಿವಕುಮಾರ್

ಕಾವೇರಿ ಜಲ ವಿವಾದ ಮತ್ತು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಬೆಂಗಳೂರು ಭೇಟಿಯನ್ನು ಮುಂದೂಡಲಾಗಿದೆ. ಅತಿಥಿಗಳಿಗೆ ಗೌರವ ನೀಡುವುದು ನಮ್ಮ ಕರ್ತವ್ಯ, ಸೌಹಾರ್ದಯುತ ವಾತಾವರಣ ನಿರ್ಮಾಣವಾದ ನಂತರ ಸಭೆ ನಡೆಸೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
Read Full Story

02:47 PM (IST) Jul 31

ಮುದ್ದೇಬಿಹಾಳ, ತಾಳಿಕೋಟೆ ಮಾರ್ಗವಾಗಿ ಆಲಮಟ್ಟಿಯಿಂದ ಯಾದಗಿರಿಗೆ ಹೊಸ ರೈಲು ಮಾರ್ಗದ ಕೂಗು

ಬ್ರಿಟಿಷರ ಕಾಲದಲ್ಲಿಯೇ ರೂಪಿಸಲಾಗಿದ್ದ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಮುದ್ದೇಬಿಹಾಳದಲ್ಲಿ ಹೋರಾಟ ಸಮಿತಿ ಸಭೆ ನಡೆಸಿದೆ. ಸರ್ಕಾರದ ಮೇಲೆ ಒತ್ತಡ ಹೇರಲು ಸಹಿ ಸಂಗ್ರಹ ಹಾಗೂ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Read Full Story

02:33 PM (IST) Jul 31

ಕತ್ತಲಲ್ಲಿ ಟಾರ್ಚ್ ಹಿಡಿದು ಆರ್‌. ಆಶೋಕ್‌ ದೇವರ ಎತ್ತುಗಳ ವೀಕ್ಷಣೆ, BJP ಬರ ಅಧ್ಯಯನ

ಬರ ಅಧ್ಯಯನಕ್ಕಾಗಿ ಮೊಳಕಾಲ್ಮೂರಿಗೆ ಆಗಮಿಸಿದ ವಿಪಕ್ಷ ನಾಯಕ ಆರ್. ಅಶೋಕ್, ರಾತ್ರಿ ವೇಳೆ ಟಾರ್ಚ್ ಬೆಳಕಿನಲ್ಲಿ ದೇವರ ಎತ್ತುಗಳನ್ನು ವೀಕ್ಷಿಸಿದರು. ಅವರ ಈ ಕತ್ತಲ ಭೇಟಿಯು, ತಮ್ಮ ಸಮಸ್ಯೆಗಳನ್ನು ತೋಡಿಕೊಳ್ಳಲು ಕಾದಿದ್ದ ಸ್ಥಳೀಯ ರೈತರಲ್ಲಿ ತೀವ್ರ ಬೇಸರವನ್ನುಂಟುಮಾಡಿತು.
Read Full Story

01:54 PM (IST) Jul 31

ವಿನಯ್ ಕುಲಕರ್ಣಿಗೆ ಹೈಕೋರ್ಟ್ ರಿಲೀಫ್, ಸುಪ್ರೀಂ ಮೆಟ್ಟಿಲೇರಲು ಹೋರಾಟಗಾರ ಬಸವರಾಜ್ ಕೊರವರ್ ನಿರ್ಧಾರ!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಆದೇಶವನ್ನು ಪ್ರಶ್ನಿಸಿ, ಸಾಕ್ಷಿ ನಾಶದ ಪ್ರಯತ್ನಗಳು ನಡೆಯುತ್ತಿರುವ ಕಾರಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೋರಾಟಗಾರ ಬಸವರಾಜ್ ಕೊರವರ್ ಸ್ಪಷ್ಟಪಡಿಸಿದ್ದಾರೆ.
Read Full Story

01:40 PM (IST) Jul 31

ವಿದೇಶಗಳಲ್ಲೂ ಕನ್ನಡದ 'ಕರಾವಳಿ' ಕರಾಮತ್ತು.. 6 ದಿನಗಳಲ್ಲಿ ಸಿನಿಮಾ ಕಲೆಕ್ಷನ್‌ ಎಷ್ಟಾಯ್ತು?

'ಕರಾವಳಿ' ಕೇವಲ ಸಿನಿಮಾ ಆಗಿ ಉಳಿಯದೆ ಒಂದು ಸಂಭ್ರಮವಾಗಿ ಮಾರ್ಪಟ್ಟಿದೆ. ಕಂಬಳದ ಕೋಣಗಳ ಓಟದಂತೆ ಬಾಕ್ಸ್ ಆಫೀಸ್‌ನಲ್ಲೂ ಊಹೆ ಮಾಡಿದ್ದಕ್ಕಿಂತ ಹೆಚ್ಚು ಗಳಿಕೆ ಮಾಡುತ್ತ ಮುನ್ನುಗ್ಗುತ್ತಿದೆ. 6 ದಿನಗಳಲ್ಲಿ ಈ ಸಿನಿಮಾ ಗಳಿಕೆ ಎಷ್ಟು? ಇಲ್ಲಿ ನೋಡಿ..

Read Full Story

01:23 PM (IST) Jul 31

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್, ಕಾವೇರಿ ನದಿ ನೀರು ಅನ್ಯಾಯ ವಿರೋಧಿಸಿ ಕನ್ನಡಪ ಸಂಘಟನೆಗಳಿಂದ ಕರೆ

ಕಾವೇರಿ ನೀರು ತಮಿಳುನಾಡಿಗೆ ಹರಿಸುವ CWRC ಆದೇಶ ವಿರುದ್ಧ ಹೋರಾಟ ತೀವ್ರಗೊಂಡಿದೆ. ಪ್ರತಿಭಟನೆ ತೀವ್ರಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಘೋಷಿಸಲಾಗಿದೆ. ಕನ್ನಡ ಪರ ಸಂಘಟನೆಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

Read Full Story

01:12 PM (IST) Jul 31

ಧಾರವಾಡ - ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಸುಪ್ರೀಂ ಮೆಟ್ಟಿಲೇರಲು ಯೋಗೇಶ್ ಗೌಡ ಸಹೋದರನ ಚಿಂತನೆ!

ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮೃತರ ಸಹೋದರ ಗುರುನಾಥಗೌಡರ್ ನಿರ್ಧರಿಸಿದ್ದು, ನ್ಯಾಯಕ್ಕಾಗಿ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

01:12 PM (IST) Jul 31

ಇಲ್ನೋಡಿ.. ಬರೀ 30 ದಿನ ಟೀಗೆ ಗುಡ್‌ಬೈ ಹೇಳಿದ್ರೆ ಸಾಕು, ದೇಹದ ಆರೋಗ್ಯದಲ್ಲಿ ಇಷ್ಟೊಂದು ಬದಲಾವಣೆ ಆಗುತ್ತೆ..!

ನೀವು ಟೀ ಬಿಡಲು ನಿರ್ಧರಿಸಿದರೆ, ಒಮ್ಮೆಲೇ ನಿಲ್ಲಿಸುವ ಬದಲು ಹಂತ ಹಂತವಾಗಿ ಪ್ರಮಾಣ ಕಡಿಮೆ ಮಾಡಿ. ಟೀ ಬದಲಿಗೆ ಲಿಂಬೆ ಹಣ್ಣಿನ ನೀರು, ಎಳನೀರು ಅಥವಾ ಗಿಡಮೂಲಿಕೆ ಚಹಾಗಳನ್ನು ಟ್ರೈ ಮಾಡಿ. ಈ ಪುಟ್ಟ ಬದಲಾವಣೆ ತಂದು ನೋಡಿ, ಫಲಿತಾಂಶ ಕಂಡು ನೀವೇ ಅಚ್ಚರಿ ಪಡುತ್ತೀರಿ!

Read Full Story

12:43 PM (IST) Jul 31

ನಷ್ಟದ ಸುಳಿಯಲ್ಲಿ ನಮ್ಮ ಮೆಟ್ರೋ..? ನಿತ್ಯ 11 ಲಕ್ಷ ಪ್ರಯಾಣಿಕರೂ ಓಡಾಡಿದ್ರೂ ಕೋಟಿ ಕೋಟಿ ನಷ್ಟ..?

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದರೂ, ಕಳೆದ ಮೂರು ವರ್ಷಗಳಲ್ಲಿ ನಿಗಮವು ₹1,164 ಕೋಟಿಗೂ ಅಧಿಕ ನಷ್ಟವನ್ನು ಅನುಭವಿಸಿದೆ. ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚ, ಸಾಲದ ಮೇಲಿನ ಬಡ್ಡಿ ಪಾವತಿಗಳಿಂದಾಗಿ ಈ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದನ್ನು ಸರಿದೂಗಿಸಲು BMRCL ಪ್ರತಿ ಮೂರು ವರ್ಷಕ್ಕೊಮ್ಮೆ ಶೇ. 12ರಷ್ಟು ದರ ಏರಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
Read Full Story

12:42 PM (IST) Jul 31

ಪ್ರಾಣ ಹೋದ್ರೆ ಹೋಗ್ಲಿ.. ಆದ್ರೆ ಈ ವಿಷ್ಯ ಮಾತ್ರ ನಿಮ್ಮ 'ಲೈಫ್ ಪಾರ್ಟ್ನರ್' ಜೊತೆ ಶೇರ್‌ ಮಾಡ್ಬೇಡಿ! ಇದು ಲವ್ ಸೀಕ್ರೆಟ್!

ಆರೋಗ್ಯಕರ ಸಂಬಂಧ ಎಂದರೆ ಕನ್ನಡಿಯಂತೆ ಎಲ್ಲವನ್ನೂ ತೋರಿಸುವುದಲ್ಲ, ಬದಲಾಗಿ ಸಂಗಾತಿಯ ಗೌರವ ಮತ್ತು ನೆಮ್ಮದಿಗೆ ಧಕ್ಕೆ ಬಾರದಂತೆ ಬದುಕುವುದು. ಕೆಲವು ವಿಷಯಗಳನ್ನು ನಿಮ್ಮಲ್ಲೇ ಇಟ್ಟುಕೊಳ್ಳುವುದು ಸ್ವಾರ್ಥವಲ್ಲ, ಅದು ನಿಮ್ಮ ಲೈಫ್ & ಲವ್ ಸೀಕ್ರೆಟ್! ಅದು ಹೇಗೆ? ಈ ಸ್ಟೋರಿ ನೋಡಿ..

Read Full Story

12:18 PM (IST) Jul 31

ದೇಶದ ಅತಿ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ - ಡಿ.ಕೆ. ಶಿವಕುಮಾರ್‌ ನಂ. 1, ಅತೀ ಬಡ ಸಿಎಂ ಇವರೇ ನೋಡಿ!

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ, ಕರ್ನಾಟಕದ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಅತಿ ಕಡಿಮೆ ಆಸ್ತಿ ಹೊಂದಿದ್ದಾರೆ. ಈ ವರದಿಯು ದೇಶದ 31 ಮುಖ್ಯಮಂತ್ರಿಗಳ ಆಸ್ತಿ, ಕ್ರಿಮಿನಲ್ ಪ್ರಕರಣಗಳು ಮತ್ತು ಸರಾಸರಿ ಸಂಪತ್ತಿನ ಕುರಿತು ವಿವರವಾದ ವಿಶ್ಲೇಷಣೆಯನ್ನು ಒದಗಿಸುತ್ತದೆ.
Read Full Story

12:05 PM (IST) Jul 31

ಹೃದಯ ಬಡಿತದಲ್ಲಿ ಏರುಪೇರು ಆಗುತ್ತಿದೆಯೇ? ಅನಿಯಮಿತವಾಗಿ ಬಡಿದುಕೊಂಡರೆ, ಹೃದಯದ ಲಯ ತಪ್ಪಿದರೆ ಇರಲಿ ಎಚ್ಚರ!

ಹೃದಯದ ಆರೋಗ್ಯವೇ ನಿಮ್ಮ ಬದುಕಿನ ಶಕ್ತಿ. ಎದೆಯಲ್ಲಿ ಸಣ್ಣ ಅಸಹಜತೆ ಕಂಡುಬಂದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಆರಂಭಿಕ ಹಂತದಲ್ಲಿ ಪತ್ತೆಹಚ್ಚುವುದು ಮತ್ತು ಆಧುನಿಕ ಚಿಕಿತ್ಸೆ ಪಡೆಯುವುದು ನಿಮ್ಮ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ. ನೆನಪಿಡಿ, ಹೃದಯದ ಬಗ್ಗೆ ಇರಲಿ ಎಚ್ಚರ!

Read Full Story

11:55 AM (IST) Jul 31

2027ರ ಏಕದಿನ ವಿಶ್ವಕಪ್ - ಈ 12 ಸ್ಟೇಡಿಯಂಗಳಲ್ಲಿ ನಡೆಯಲಿದೆ ಹೈವೋಲ್ಟೇಜ್ ಕದನ, ಐಸಿಸಿಯಿಂದ ಮಹತ್ವದ ಘೋಷಣೆ

2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ, ನಮೀಬಿಯಾ ಮತ್ತು ಜಿಂಬಾಬ್ವೆ ಆತಿಥ್ಯ ವಹಿಸಲಿವೆ. ಈ ಟೂರ್ನಿಯು 12 ಸ್ಥಳಗಳಲ್ಲಿ ಹೊಸ ಮೂರು ಹಂತದ ಮಾದರಿಯಲ್ಲಿ ನಡೆಯಲಿದ್ದು, ಇದು ಕೆಲವು ವಿವಾದಗಳಿಗೆ ಕಾರಣವಾಗಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ಆಫ್ರಿಕನ್ ಸಂಸ್ಕೃತಿಯನ್ನು ಬಿಂಬಿಸುವ ಅಧಿಕೃತ ಲೋಗೋವನ್ನು ಅನಾವರಣಗೊಳಿಸಲಾಗಿದೆ.
Read Full Story

10:54 AM (IST) Jul 31

ಧರ್ಮಸ್ಥಳ ಬುರುಡೆ ಪ್ರಕರಣ - ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 3 ಅಸ್ಥಿಪಂಜದ ಡಿಎನ್‌ಎ ದೃಢ; ನಾಪತ್ತೆಯಾದವರ ಗುರುತು ಪತ್ತೆ!

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂರರ ಗುರುತನ್ನು ಡಿಎನ್‌ಎ ಪರೀಕ್ಷೆಯಿಂದ ಅಧಿಕೃತವಾಗಿ ದೃಢಪಡಿಸಲಾಗಿದೆ. ಹಲವು ವರ್ಷಗಳ ಹಿಂದೆ ಕೊಡಗು, ತುಮಕೂರು ಮತ್ತು ಕೋಲಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಗಳಿವು ಎಂದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಎಸ್‌ಐಟಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.
Read Full Story

10:53 AM (IST) Jul 31

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್​, ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿದ ಹೈಕೋರ್ಟ್

ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಬಿಗ್ ರಿಲಫ್ ಸಿಕ್ಕಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕನಿಗೆ ಸೆಷನ್ ಕೋರ್ಟ್ ಜಾಮೀನು ನೀರಾಕರಿಸಿತ್ತು. ಇದೀಗ ಹೈಕೋರ್ಟ್ ಜಾಮೀನು ನೀಡಿದೆ.

Read Full Story

10:26 AM (IST) Jul 31

HMT Land Row 450 ಎಕರೆ ಎಚ್ಎಂಟಿ ಭೂಮಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳದಂತೆ ಹೈಕೋರ್ಟ್‌ನಿಂದ ತಡೆ

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಲಿಮಿಟೆಡ್‌ಗೆ ಸೇರಿದ 430 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಭೂಮಿ ಹಸ್ತಾಂತರಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ ಎಚ್‌ಎಂಟಿಯನ್ನು ತೆರವುಗೊಳಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.
Read Full Story

More Trending News