ಕರ್ನಾಟಕ ಬಂದ್: ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

Published : Feb 12, 2020, 03:04 PM ISTUpdated : Feb 12, 2020, 04:59 PM IST
ಕರ್ನಾಟಕ ಬಂದ್: ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಸಾರಾಂಶ

ಫೆ. 13 ರಂದು ಕರ್ನಾಟಕ ಬಂದ್| 600ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್‌ಗೆ ಬೆಂಬಲ| ಶಾಲಾ ಕಾಲೇಜುಗಳಿಗೆ ರಜೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು[ಫೆ.12]: ಸರೋಜಿನಿ ಮಹಿಷಿ ವರದಿಯಂತೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಸಬೇಕೆಂದು ಅಗ್ರಹಿಸಿ 600ಕ್ಕೂ ಹೆಚ್ಚು ಸಂಘಟನೆಗಳು ಫೆ.13 ರಂದು ಬಂಸ್ ಗೆ ಕರೆ ನೀಡಿವೆ. ಹೀಗಿರುವಾಗ ಓಲಾ, ಉಬರ್, ಏರ್ ಪೋರ್ಟ್ ಟ್ಯಾಕ್ಸಿ ಸೇರಿದಂತೆ ಹಲವಾರು ಸೇವೆಗಳು ವ್ಯತ್ಯಯವಾಗಲಿವೆ. ಹೀಗಿರುವಾಗ ಶಾಲಾ ಕಾಲೇಜುಗಳ ಕತೆ ಏನು? ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಎಂಬ ಚಿಂತೆ ಪೋಷಕರದ್ದಾಗಿದೆ. ಆದರೀಗ ಈ ಚಿಂತೆಗೆ ತೆರೆ ಬಿದ್ದಿದ್ದು, ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಬಂದ್‌ಗೆ 600ಕ್ಕೂ ಹೆಚ್ಚು ಸಂಘಟನೆ ಬೆಂಬಲ: ಏನಿರುತ್ತೆ? ಏನಿರಲ್ಲ?

ಈ ಸಂಬಂಧ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ 'ದಿನಾಂಕ 13.02.2020 ರಂದು‌ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ ಕಾಲೇಜುಗಳಿಗೆ ಅಧಿಕೃತವಾಗಿ ರಜೆ‌ ಘೋಷಣೆ‌ ಮಾಡುವುದಿಲ್ಲ ಆದಾಗ್ಯೂ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿ ಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಕರ್ನಾಟಕ ಬಂದ್ ಗೆ ಖಾಸಗಿ ಶಾಲೆಗಳ ಒಕ್ಕೂಟ ಕೂಡಾ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ 'ಬಂದ್ ಗೆ ನಮ್ಮದು ನೈತಿಕ ಬೆಂಬಲ ಅಷ್ಟೇ. ಪರೀಕ್ಷೆ ಸಮೀಪಿಸುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತದೆ. ಮಕ್ಕಳಿಗೆ ತೊಂದರೆಯಾಗುವುದರಿಂದ ಬಂದ್ಗೆ ಬೆಂಬಲ ಇಲ್ಲ' ಎಂದಿದ್ದಾರೆ.

ಫೆ.13ಕ್ಕೆ ಕರ್ನಾಟಕ ಬಂದ್ : ವಿವಿಧ ಸಂಘಟನೆಗಳ ಬೆಂಬಲ

ಹೀಗಿದ್ದರೂ ಶಾಲೆಗಳ ಖಾಸಗಿ ವ್ಯಾನ್ ಚಾಲಕರು ಬಂದ್ ಗೆ ಬೆಂಬಲ ಸೂಚಿಸಿದ್ದು, ಮಕ್ಕಳನ್ನು ಶಾಲೆಗೊಯ್ಯಲು ಕೊಂಚ ಕಷ್ಟವಾಗಬಹುದು

ಫೆಬ್ರವರಿ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!