
ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ಮಂಗಳವಾರ ಎರಡು ಮಹತ್ವದ ವಿಧೇಯಕಗಳನ್ನು ಸರ್ಕಾರ ಮಂಡಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ನಗರಾಭಿವೃದ್ಧಿ ಸಚಿವ ಡಾ. ಹೆಚ್ ಸಿ. ಮಹಾದೇವಪ್ಪ ಅವರು ಗ್ರೇಟರ್ ಬೆಂಗಳೂರು ಎರಡನೇ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಅದಕ್ಕೂ ಜೊತೆಯಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ ಯನ್ನೂ ಅವರು ಸಭೆಯ ಮುಂದಿಟ್ಟರು.
(i)ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸದಸ್ಯರಾಗಿ ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನ ಸಭೆ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರುಗಳನ್ನು ಸೇರಿಸಲು.
(ii)ಮತ್ತು ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಮತ್ತು ಸರ್ಕಾರದ ಅಪರ ಕಾರ್ಯದರ್ಶಿ/ ಸರ್ಕಾರದ ಪೂನ (@) ಗೇಟರ್ ಬೆಂಗಳೂರು ಪ್ರಾಧಿಕಾರಕ್ಕೆ, ಪದನಿಮಿತ ಸದಸ್ಯರುಗಳನ್ನಾಗಿ ಸರ್ಕಾರದ ಅಂ ಕಾರ್ಯದರ್ಶಿ ಆರ್ಥಿಕ ಇಲಾಖೆ ಇವರನ್ನು ಸೇರಿಸಲು;
(iii) ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಸರ್ಕಾರದ ಅಪರ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರನ್ನು ಸೇರಿಸಲು,
(iv) ಹೊಸದಾಗಿ ನಿಗಮಿತಗೊಳಿಸಲಾದ ಸ್ಥಳೀಯ ಪ್ರದೇಶಗಳ ಸಂಬಂಧದಲ್ಲಿ ವಾರ್ಡ್ಗಳ ಪುನರ್ ವಿಂಗಡಣೆಯನ್ನು ನಿರ್ದಿಷ್ಟ ಅವಧಿಯೊಳಗೆ ಕೈಗೊಳ್ಳುವುದಕ್ಕಾಗಿ ಉಪಬಂಧಿಸಲು;
(v) ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ ಹೊಸದಾಗಿ ಸೇರಿಸಲಾದ ಸ್ಥಳೀಯ ಪ್ರದೇಶಗಳಿಗಾಗಿ ಚುನಾವಣೆಗಳನ್ನು ನಡೆಸುವುದಕ್ಕೆ ಸ್ಪಷ್ಟತೆಯನ್ನು ನೀಡಲು;
(vi) ಈ ಅಧಿನಿಯಮದ 30 (ಇ) ಪ್ರಕರಣದಡಿ ನಾಮನಿರ್ದೇಶಿಸಲಾದ ಸದಸ್ಯರನ್ನು ಸಮನ್ವಯ ಸಮಿತಿಯ ಸದಸ್ಯರನ್ನಾಗಿ ಪರಿಗಣಿಸಲು..
ನಗರಾಭಿವೃದ್ಧಿ ಮತ್ತು ಸಾಮಾಜಿಕ ಸಮಾನತೆ ಎರಡೂ ಕ್ಷೇತ್ರಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಉದ್ದೇಶಿಸುವ ಈ ಎರಡು ಮಸೂದೆಗಳು ರಾಜ್ಯದ ಆಡಳಿತಾತ್ಮಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ.
ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕವು ನಗರ ಆಡಳಿತವನ್ನು ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡುವ ಸಾಧ್ಯತೆ ಇದ್ದರೆ, ಸಾಮಾಜಿಕ ಬಹಿಷ್ಕಾರ ಮಸೂದೆ ಸಮಾಜದ ದುರುಪಯೋಗಕಾರಿ ಪರಂಪರೆಗಳಿಗೆ ಕಾನೂನುಬದ್ಧ ಕಡಿವಾಣ ಹಾಕುವ ಹೆಜ್ಜೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ