
ಬೆಂಗಳೂರು (ಏ.21): ಬಿಟ್ ಕಾಯಿನ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಹಲವರ ಮೇಲೆ ದಾಳಿ ನಡೆಸಿದೆ. ಆದರೆ, ಬಿಜೆಪಿ ನಾಯಕರ ವಿರುದ್ಧ ಯಾಕೆ ದಾಳಿ ಮಾಡಿಲ್ಲ? ಇ.ಡಿ. ದಾಳಿ ಆಗುವುದಾದರೆ ಬಿಜೆಪಿಯ ದೊಡ್ಡವರ ಮನೆಗೂ ಆಗಬೇಕಾಗಿತ್ತಲ್ಲವೇ? ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇದೀಗ ಇ.ಡಿ. ದಾಳಿ ನಡೆಸಿದ್ದು ಬಿಟ್ ಕಾಯಿನ್ ವಿಚಾರವಾಗಿಯೋ ಅಥವಾ ಬೇರೆ ವಿಚಾರವಾಗಿಯೋ ಎಂಬುವುದು ಗೊತ್ತಿಲ್ಲ. ಈ ಬಗ್ಗೆ ಇ.ಡಿ.ಯವರು ಸ್ಪಷ್ಟವಾಗಿ ಹೇಳಬೇಕು. ಬಿಟ್ ಕಾಯಿನ್ ಸಂಬಂಧಿಸಿ ಟಾರ್ಗೆಟ್ ಮಾಡಿ ಇವರು ದಾಳಿ ಮಾಡುತ್ತಿದ್ದಾರೆ. ಇಂದು ಇ.ಡಿ. ದಾಳಿ ಆಗುವುದಾದರೆ ಬಿಜೆಪಿಯ ದೊಡ್ಡವರ ಮನೆಗೂ ಆಗಬೇಕಾಗಿತ್ತು ಎಂದರು.
ದೊಡ್ಡವರು ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ, ‘ದೊಡ್ಡವರು ಯಾರು ಎಂಬುದಕ್ಕೆ ಚಾರ್ಜ್ ಶೀಟ್ನಲ್ಲೇ ಕೆಲವರ ಹೆಸರುಗಳಿವೆ. ಆಗ ಯಾರು ಗೃಹ ಸಚಿವರಾಗಿದ್ದರು? ಯಾರು ಆಡಳಿತದಲ್ಲಿದ್ದರು? ಏನೇನು ಆಯಿತು ಎಲ್ಲಾ ಗೊತ್ತಿದೆ ಅಲ್ಲವೇ? ಏನೂ ನಡೆದೇ ಇಲ್ಲ ಎಂದು ಆಗಿನ ಸರ್ಕಾರದವರು ಹೇಳಿದ್ದರಲ್ಲ. ಬಳಿಕ ಏನಾಯಿತು ಎಂಬುದೂ ಎಲ್ಲರ ಮುಂದಿದೆ’ ಎಂದು ಪ್ರಿಯಾಂಕ್ ಹೇಳಿದರು.
ನಲಪಾಡ್ ಹಾಗೂ ಶ್ರೀಕಿ ನಡುವಿನ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಲಪಾಡ್ ಹಾಗೂ ಬಿಟ್ ಕಾಯಿನ್ ಪ್ರಕರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧ ಇಲ್ಲ ಎಂದು ಅವರೇ ಹೇಳಿದ್ದಾರೆ. ಇ.ಡಿ. ಚಾರ್ಜ್ಶೀಟ್ ಹಾಕಲಿ ನೋಡೋಣ ಏನಾಗುತ್ತೆ ಅಂತ. ಐಟಿ, ಇ.ಡಿ. ಸಿಬಿಐ ಇವರೆಲ್ಲರೂ ಕೇಂದ್ರ ಸರ್ಕಾರದ ಕೈಗೊಂಬೆ. ಇಂಥ ದಾಳಿಗಳು ಮೊದಲನೇ ಬಾರಿ ಆಗುತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ