ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ಅಕ್ರಮದಲ್ಲಿ ಕೈವಾಡ: ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

Published : Nov 08, 2023, 08:29 AM IST
ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ಅಕ್ರಮದಲ್ಲಿ ಕೈವಾಡ: ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಾರಾಂಶ

ಪರೀಕ್ಷಾ ಅಕ್ರಮ ಮತ್ತು ಇದರಲ್ಲಿ ಪ್ರಿಯಾಂಕ್ ಖರ್ಗೆಯವರ ಕಬಂಧಬಾಹುಗಳ ಕುರಿತು ಸಿಬಿಐ ತನಿಖೆ ಮಾಡಲು ಗೃಹ ಸಚಿವ ಪರಮೇಶ್ವರ್ ಶಿಫಾರಸು ಮಾಡಬೇಕು. ತಾವು ಪ್ರಾಮಾಣಿಕರಲ್ಲವೇ? ಹಾಗಿದ್ದರೆ ನೀವ್ಯಾಕೆ ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತೀರಿ ಎಂದು ಪ್ರಿಯಾಂಕ್‌ ಖರ್ಗೆ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದ ಮುಖ್ಯ ವಕ್ತಾರ ಎಂ.ಜಿ.ಮಹೇಶ್

ಬೆಂಗಳೂರು(ನ.08):  ಕಿಯೋನಿಕ್ಸ್ ಭ್ರಷ್ಟಾಚಾರ ಹಾಗೂ ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.

ಮಂಗಳವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯ ವಕ್ತಾರ ಎಂ.ಜಿ.ಮಹೇಶ್, ಪರೀಕ್ಷಾ ಅಕ್ರಮ ಮತ್ತು ಇದರಲ್ಲಿ ಪ್ರಿಯಾಂಕ್ ಖರ್ಗೆಯವರ ಕಬಂಧಬಾಹುಗಳ ಕುರಿತು ಸಿಬಿಐ ತನಿಖೆ ಮಾಡಲು ಗೃಹ ಸಚಿವ ಪರಮೇಶ್ವರ್ ಶಿಫಾರಸು ಮಾಡಬೇಕು. ತಾವು ಪ್ರಾಮಾಣಿಕರಲ್ಲವೇ? ಹಾಗಿದ್ದರೆ ನೀವ್ಯಾಕೆ ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತೀರಿ ಎಂದು ಪ್ರಿಯಾಂಕ್‌ ಖರ್ಗೆ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದರು.

ಪರೀಕ್ಷಾ ಅಕ್ರಮ ಕಿಂಗ್‌ಪಿನ್‌ ಪರಾರಿಗೆ ಪೊಲೀಸರ ಸಾಥ್‌? ತನಿಖೆಗೆ ಸೂಚನೆ!

ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಬಗ್ಗೆ ದೊಡ್ಡದಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರು ಇವತ್ತು ಈ ಎಲ್ಲ ವಿದ್ಯಮಾನಗಳ ಕೇಂದ್ರ ಬಿಂದುವಿನಂತಿದ್ದಾರೆ ಎಂದು ಆರೋಪಿಸಿದರು. ಪ್ರಿಯಾಂಕ್ ಖರ್ಗೆ ಸಂಪೂರ್ಣ ಕರ್ತವ್ಯ ವಿಮುಖರಾಗಿದ್ದು, ಸಚಿವರಾಗಿ ಮುಂದುವರೆಯಲು ನೈತಿಕತೆ ಹೊಂದಿಲ್ಲ. ಬೇರೆ ಪಕ್ಷವನ್ನು ಲೀಡರ್‌ಲೆಸ್‌, ಕೇಡರ್‌ಲೆಸ್‌ ಪಾರ್ಟಿ ಅನ್ನುವ ನೀವು ಬೇಸ್‍ಲೆಸ್ ಮತ್ತು ಶೇಮ್‍ಲೆಸ್ ವ್ಯಕ್ತಿ ಎಂದು ಟೀಕಿಸಿದರು.

ಕಿಯೋನಿಕ್ಸ್ ಎಂಡಿ, ಗುತ್ತಿಗೆದಾರರ ಬಳಿ ಸುಮಾರು ಶೇ.12 ಕಮಿಷನ್‍ಗಾಗಿ ಒತ್ತಾಯ ಮಾಡಿದ್ದಾರೆ. ಸರ್ಕಾರವು ತನ್ನೆಲ್ಲ ಕರ್ತವ್ಯವನ್ನು ಲೂಟಿ ಮಾಡುವ ಕಡೆ ಗಮನ ಹರಿಸಿದಂತಿದೆ. ಇನ್ನು ಕೆಇಎ ಪರೀಕ್ಷೆಯ ಅಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಆರ್.ಡಿ.ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಯಾರನ್ನು ಬೊಟ್ಟು ಮಾಡಿದ್ದಾರೋ ಆ ಆರ್.ಡಿ.ಪಾಟೀಲ್‍ಗೆ ಸರ್ಕಾರವೇ ಕೃಪಾಪೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌