ರೆಸಾರ್ಟ್ ಮೋಜು-ಮಸ್ತಿ ಮುಗಿಸಿಬಂದ ಬಿಜೆಪಿಯಿಂದ ಬರಗಾಲ ವೀಕ್ಷಣೆ ಟೂರ್

Published : Jan 19, 2019, 08:46 PM ISTUpdated : Jan 19, 2019, 08:55 PM IST
ರೆಸಾರ್ಟ್ ಮೋಜು-ಮಸ್ತಿ ಮುಗಿಸಿಬಂದ ಬಿಜೆಪಿಯಿಂದ ಬರಗಾಲ ವೀಕ್ಷಣೆ ಟೂರ್

ಸಾರಾಂಶ

ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೆಸಾರ್ಟ್ ರಾಜಕಾಣಕ್ಕೆ ಸಾಮಾಜ್ಯ ಜನರು ಛೀ... ಥೂ...ಅಂತ ಉಗಿಯುತ್ತಿದ್ದಾರೆ. ಇದ್ರಿಂದ ಎಚ್ಚೆತ್ತಿರುವ ರಾಜ್ಯ ಬಿಜೆಪಿ ಬರಗಾಲ ವೀಕ್ಷಣೆ ಟೂರ್ ಪ್ಲಾನ್ ಮಾಡಿದೆ.

ಬೆಂಗಳೂರು, [ಜ.19): ಹತ್ತು ದಿನಗಳ ಕಾಲ ಹರಿಯಾಣದಲ್ಲಿ ರೆಸಾರ್ಟ್‌ ಮೋಜು ಮಸ್ತಿ ಮಾಡಿ ಬಂದ ಕರ್ನಾಟಕ ಬಿಜೆಪಿಗೆ ಈಗ ಬರಗಾಲ ನೆನಪಾಗಿದೆ.

ಸೆಮಿನರ್ ನೆಪದಲ್ಲಿ ದೆಹಲಿಗೆ ಹೋಗಿದ್ದ ರಾಜ್ಯ ಬಿಜೆಪಿ ಶಾಸಕರು ಅಲ್ಲಿಂದ ಹರಿಯಾಣದ ರೆಸಾರ್ಟ್ ನಲ್ಲಿ ಮೋಜು ಮುಗಿಸಿ ಬಂದಿದ್ದು, ಇದೀಗ ಬರಗಾಲ ವೀಕ್ಷಣೆ ಪ್ರವಾಸಕ್ಕೆ ಸಜ್ಜಾಗಿದೆ. 

ಬಿಕ್ಕಟ್ಟಿಗೆ ಪರಿಹಾರ ಸೂಚಿಸಿ: ರೆಸಾರ್ಟ್ ಮಾಲೀಕರಿಗೆ ರಾಜ್ಯಪಾಲರ ಮನವಿ?

ಇದೇ ಜನವರಿ 21-22 ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬರ ಪ್ರವಾಸ ಮಾಡಲಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಬರಗಾಲ ವೀಕ್ಷಣೆಗೆ ಬಿಜೆಪಿ ತೆರಳುತ್ತಿದ್ದು, ಜ.21 ನೇ ತಾರೀಖಿನಂದು ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಮತ್ತು ಮುಳಬಾಗಿಲುಗಳಲ್ಲಿ ಬರಗಾಲ ವೀಕ್ಷಣೆ ಮಾಡಲಿದೆ.

ಇನ್ನು ಜ. 22ರಂದು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಬರಪೀಡಿತ ತಾಲ್ಲೂಕುಗಳಿಗೆ ನಿಯೋಗವು ಭೇಟಿ ನೀಡಲಿದೆ. ಇದೇ ವೇಳೆ ಚಾಮರಾಜನಗರ ಜಿಲ್ಲಾಧಿಕಾರಿ ಅವರೊಂದಿಗೆ ಸಭೆ ನಡೆಸಲಿದ್ದಾರೆ. 

ಬಿಜೆಪಿ ಶಾಸಕರು ತಂಗಿದ್ದ ದಂಗುಪಡಿಸುವ ಕೋಟಿ ಕೋಟಿ ರೆಸಾರ್ಟ್

ರೆಸಾರ್ಟ್‌ ರಾಜಕೀಯ ಮಾಡಿದ್ದರಿಂದ ಆಗಿರುವ ರಾಜಕೀಯ ಡ್ಯಾಮೆಜ್ ಅನ್ನು ಸರಿಪಡಿಸಿಕೊಳ್ಳುವ ಕಾರಣಕ್ಕೆ ಈ ಬರ ಪ್ರವಾಸ ಆಯೋಜಿಸಲಾಗಿದೆ ಎಂದು ಆಡಳಿತ ಪಕ್ಷದ ಕೆಲವರು ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬಿಜೆಪಿಯ ಈ ನಡೆಯನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. 

 

ಒಟ್ಟಿನಲ್ಲಿ ರೆಸಾರ್ಟ್ ರಾಜಕಾಣಕ್ಕೆ ಸಾಮಾಜ್ಯ ಜನರು ಛೀ... ಥೂ...ಅಂತ ಉಗಿಯುತ್ತಿದ್ದಾರೆ.ಅಷ್ಟೇ ಅಲ್ಲದೇ ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಇದ್ರಿಂದ ಎಚ್ಚೆತ್ತಿರುವ ರಾಜ್ಯ ಬಿಜೆಪಿ ಬರ ಪ್ರವಾಸ ಕೈಗೊಳ್ಳುತ್ತಿದೆ ಎನ್ನುವುದು ಸಾರ್ವಜನಿಕರ ಆರೋಪ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!