
ಶಿವಮೊಗ್ಗ (ಜು.22): ಜುಲೈ 25 ಹಾಗೂ 26ರಂದು ಬಿಜೆಪಿಯಿಂದ ರಾಜ್ಯಾದ್ಯಂತ ಎಸ್ಐಆರ್ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಸ್ಐಆರ್ ಸಂಬಂಧ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ಮಹಾಸಂಪರ್ಕ ಅಭಿಯಾನ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ, ‘ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಅಂದು ಮಹಾಸಂಪರ್ಕ ಅಭಿಯಾನ ನಡೆಸುತ್ತೇವೆ. ಬಿಜೆಪಿಯ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರ ನೇತೃತ್ವದಲ್ಲಿ ಈ ಮಹಾಸಂಪರ್ಕ ಅಭಿಯಾನ ನಡೆಯಲಿದೆ. ಎರಡು ದಿನಗಳ ಈ ಅಭಿಯಾನದಲ್ಲಿ 1 ಕೋಟಿ ಮನೆಗಳನ್ನು ತಲುಪುವ ಗುರಿ ಇಟ್ಟುಕೊಂಡಿದ್ದೇವೆ’ ಎಂದರು.
‘ಅಂದು ಬಿಜೆಪಿಯ ಪ್ರತಿ ಕಾರ್ಯಕರ್ತನಿಗೆ ಕನಿಷ್ಠ 20 ಮನೆಗಳನ್ನು ತಲುಪುವ ಗುರಿ ನೀಡಲಾಗುತ್ತಿದೆ. ಅಭಿಯಾನದ ಮೂಲಕ ಮತದಾರರಿಗೆ ಎಸ್ಐಆರ್ ಫಾರ್ಮ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಅದರ ಅಗತ್ಯತೆ, ಎಸ್ಐಆರ್ ಫಾರಂ ತುಂಬುವ ಪ್ರಕ್ರಿಯೆ, ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳು ಸೇರಿದಂತೆ ಮತದಾರರಲ್ಲಿ ಎಸ್ಐಆರ್ ಫಾರಂ ಬಗೆಗೆ ಇರಬಹುದಾದ ಎಲ್ಲಾ ರೀತಿಯ ಗೊಂದಲ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ. ಎಸ್ಐಆರ್ ಫಾರಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿಯೇ ಈ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದೇವೆ. ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈ ಅಭಿಯಾನ ಮಾಡುತ್ತೇವೆ’ ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ