
ಹಾಸನ (ಫೆ.16):ನಮ್ಮ ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಅವೆಲ್ಲ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ನೀಡುತ್ತೆ ಅನ್ನುವ ನೀರಿಕ್ಷೆ ಇತ್ತು. ಆದರೆ ಕರ್ನಾಟಕ ಬಜೆಟ್ ಮಂಡಿಸಿದ ಬಳಿಕ ನಿರೀಕ್ಷೆ ಹುಸಿಯಾಗಿದೆ ಎಂದು ರಾಜ್ಯ ಬಜೆಟ್ ಬಗ್ಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಬಜೆಟ್ನಲ್ಲಿ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಬರಗಾಲದಲ್ಲಿ ತತ್ತರಿಸಿರುವ ರೈತರ ಸಂಕಷ್ಟಕ್ಕೆ ಸರ್ಕಾರ ನೆರವಾಗಿಲ್ಲ. ಈ ಬಜೆಟ್ ಕೇವಲ ಗ್ಯಾರಂಟಿಗಳಿಗೆ ಮಾತ್ರ ಸೀಮಿತವಾಗಿದೆ. ನಾನು ನಿನ್ನೆಯೇ ನಿರೀಕ್ಷೆ ಮಾಡಿದಂತೆ ಇದು ವಿಫಲ ಬಜೆಟ್ ಮಂಡನೆಯಾಗಿದೆ ಎಂದರು.
ಇದು ಜನಪರ ಬಜೆಟ್ ಅಲ್ಲ, ಜನರೇ ತಿರಸ್ಕರಿಸುವಂತಹ ಬಜೆಟ್ ಆಗಿದೆ. ಈ ಬಜೆಟ್ನಲ್ಲಿ ಹಾಸನ ಜಿಲ್ಲೆಗೆ ಒಂದೇ ಒಂದು ರೂಪಾಯಿ ನೀಡಿಲ್ಲ. ಯಾವುದೇ ಕಾಮಗಾರಿಗೂ ಹಣ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ನಮ್ಮ ಹಾಸನ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಸಿಎಂ ಅವರ ಪ್ರವಾಸ ಇರೋದ್ರಿಂದ ಕೇವಲ ಆಸ್ಪತ್ರೆಗೆ ಅಲ್ಪ ಹಣ ನೀಡಲಾಗಿದೆ. ಈ ಆಸ್ಪತ್ರೆ ರೇವಣ್ಣನವರೇ ಕಟ್ಟಿಸಿದ್ದರು. ವೈಯಕ್ತಿವಾಗಿ ನಾನು ಈ ಬಜೆಟ್ ತಿರಸ್ಕರಿಸುತ್ತೇನೆ. ಇಂದು ಆರ್ಥಿಕ ಸಮಸ್ಯೆ ಇರೋದ್ರಿಂದಲೇ ಇದು ವಿಫಲ ಬಜೆಟ್ ಆಗಿದೆ ಎಂದರು.
ರಾಜ್ಯದ ಜನತೆಗೆ ಮೂರುನಾಮ ಹಾಕಿ ಮೋಸ ಮಾಡಿದ ಬಜೆಟ್: ಕಾರಜೋಳ ವ್ಯಂಗ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ