
ಬೆಂಗಳೂರು (ಮಾ.6): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಜನಕಲ್ಯಾಣ ಮತ್ತು ಅಭಿವೃದ್ಧಿ ಎರಡಕ್ಕೂ ಸಮಾನ ಆದ್ಯತೆ ನೀಡಿದ್ದಾರೆ. ಸುಮಾರು 4.5 ಲಕ್ಷ ಕೋಟಿ ರೂಪಾಯಿಗಳಿಗೂ ಮೀರಿದ ಬೃಹತ್ ಗಾತ್ರದ ಈ ಆಯವ್ಯಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೇ ಶಿಕ್ಷಣ, ಮಹಿಳಾ ಕಲ್ಯಾಣ ಮತ್ತು ಮೂಲಸೌಕರ್ಯಕ್ಕೆ ಭರ್ಜರಿ ಕೊಡುಗೆ ನೀಡಲಾಗಿದೆ.
ನಿರೀಕ್ಷೆಯಂತೆಯೇ ಈ ಬಾರಿಯೂ ಶಿಕ್ಷಣ ಇಲಾಖೆಗೆ ಅತಿ ಹೆಚ್ಚು ಅಂದರೆ 47,224 ಕೋಟಿ ರೂ. ಅನುದಾನ ನೀಡುವ ಮೂಲಕ ಜ್ಞಾನದಾಸೋಹಕ್ಕೆ ಸರ್ಕಾರ ಒತ್ತು ನೀಡಿದೆ. ಇನ್ನು ಗೃಹಲಕ್ಷ್ಮಿಯಂತಹ ಯೋಜನೆಗಳನ್ನು ಒಳಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
| ಇಲಾಖೆಯ ಹೆಸರು | ಮಂಜೂರಾದ ಅನುದಾನ (ಕೋಟಿ ರೂ.) |
| ಶಿಕ್ಷಣ | 47,224 |
| ಮಹಿಳಾ ಮತ್ತು ಮಕ್ಕಳ ಕಲ್ಯಾಣ | 34,929 |
| ಇಂಧನ | 29,947 |
| ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR), | 26,559 |
| ಒಳಾಡಳಿತ ಮತ್ತು ಸಾರಿಗೆ | 23,100 |
| ನೀರಾವರಿ | 22,436 |
| ನಗರಾಭಿವೃದ್ಧಿ ಮತ್ತು ವಸತಿ | 22,203 |
| ಕಂದಾಯ | 19,843 |
| ಸಮಾಜ ಕಲ್ಯಾಣ | 18,612 |
| ಆರೋಗ್ಯ | 17,817 |
| ಲೋಕೋಪಯೋಗಿ (PWD) | 11,424 |
| ಕೃಷಿ | 8,373 |
| ಆಹಾರ ಮತ್ತು ನಾಗರಿಕ ಸರಬರಾಜು | 7,942 |
| ಪಶುಸಂಗೋಪನೆ ಮತ್ತು ಮೀನುಗಾರಿಕೆ | 4,084 |
| ಇತರೆ (ಸಾಲ ಮರುಪಾವತಿ ಇತ್ಯಾದಿ) | 1,72,757 |
ಇಂಧನ ವಲಯ: ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್ ನೀಡುವ ಹಿನ್ನೆಲೆಯಲ್ಲಿ ಇಂಧನ ಇಲಾಖೆಗೆ 29,947 ಕೋಟಿ ರೂ. ನೀಡಲಾಗಿದ್ದು, ಸೌರಶಕ್ತಿ ಯೋಜನೆಗಳಿಗೂ ಒತ್ತು ನೀಡಲಾಗಿದೆ.
ನೀರಾವರಿ ಮತ್ತು ಕೃಷಿ: ರೈತರ ಜೀವನಾಡಿಯಾದ ನೀರಾವರಿ ಯೋಜನೆಗಳಿಗೆ 22,436 ಕೋಟಿ ರೂ. ಮೀಸಲಿಟ್ಟಿದ್ದು, ಕೃಷಿ ವಲಯಕ್ಕೆ 8,373 ಕೋಟಿ ರೂ. ನೀಡಲಾಗಿದೆ.
ಆರೋಗ್ಯ ಕ್ಷೇತ್ರ: ರಾಜ್ಯದಾದ್ಯಂತ ನಮ್ಮ ಕ್ಲಿನಿಕ್ ಮತ್ತು ಆಸ್ಪತ್ರೆಗಳ ಮೇಲ್ದರ್ಜೆಗೆ ಏರಿಸಲು 17,817 ಕೋಟಿ ರೂ. ವ್ಯಯಿಸಲಾಗುತ್ತಿದೆ.
ಗ್ಯಾರಂಟಿ ಯೋಜನೆಗಳ ಭಾರದ ನಡುವೆಯೂ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮೀಸಲಿಡುವ ಮೂಲಕ ಆರ್ಥಿಕ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ