LIVE NOW
Published : May 04, 2026, 07:00 AM ISTUpdated : May 04, 2026, 10:14 AM IST

Karnataka By-Election Results 2026 LIVE: ‌ಬಾಗಲಕೋಟೆಯಲ್ಲಿ ಮೇಟಿಗೆ ಮುನ್ನಡೆ, ದಾವಣಗೆರೆಯಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ

ಸಾರಾಂಶ

ಉಪಚುನಾವಣೆ ನಡೆದ ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ನಗರದ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ, ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾಗಬೇಕಿದ್ದ ಪೋಸ್ಟಲ್ ಬ್ಯಾಲೆಟ್  ಕೆಲವು ತಾಂತ್ರಿಕ ಕಾರಣಗಳಿದೆ ಎಣಿಕೆ ಕಾರ್ಯ ವಿಳಂಬವಾಗಿದ್ದು, ಪೋಸ್ಟಲ್ ಬ್ಯಾಲಟ್ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ದಾವಣಗೆರೆ ದಕ್ಷಿಣದಲ್ಲಿ ನಾಯಕ ಶಾಮನೂರು ಶಿವಶಂಕರಪ್ಪ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನ ಎಚ್.ವೈ.ಮೇಟಿ ಅವರ ನಿಧನದಿಂದ ಸ್ಥಾನಗಳು ತೆರವಾಗಿದ್ದು, ಏ.9ರಂದು ಮತದಾನ ನಡೆದಿತ್ತು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಸೇರಿದಂತೆ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

10:13 AM (IST) May 04

Sringeri - ಬಿಜೆಪಿಯ ಜೀವರಾಜ್‌ಗೆ ಶಾಸಕ ಪ್ರಮಾಣ ಪತ್ರ ಹಸ್ತಾಂತರ; ಅಭಿಮಾನಿಗಳಿಂದ ಸಂಭ್ರಮ

ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುಗೊಂಡಿವೆ. ಇದರಿಂದಾಗಿ, ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಇದೀಗ 52 ಮತಗಳ ಮುನ್ನಡೆ ಸಾಧಿಸಿ, ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
Read Full Story

10:03 AM (IST) May 04

ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

ಶಾಮನೂರು ಶಿವಶಂಕರಪ್ಪ ಸ್ಪರ್ಧಿಸುತ್ತಿದ್ದಾಗ ಆರಂಭಿಕ ಮತ ಎಣಿಕೆಯಲ್ಲಿಯೇ ಮುನ್ನಡೆ ಕಾಯ್ದುಕೊಳ್ಳುತ್ತಿದ್ದ ಕಾಂಗ್ರೆಸ್, ಇದೀಗ ಹಲವು ಕಾರಣಗಳಿಂದ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಉಲ್ಬಣಗೊಂಡಿದ್ದು ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್‌ನ ಸಮರ್ಥ ಶ್ಯಾಮನೂರು ಹಿನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಸಂಕಟದ ಆರಂಭದ ಸಂಕೇತ. ಮುಸ್ಲಿಂ ಮತಗಳು ವಿಭಜನೆಯಾಗುತ್ತಿರುವುದು ಸ್ಪಷ್ಟ. ಬಣ ರಾಜಕೀಯ ಉಲ್ಪಣವಾಗುತ್ತಿರುವುದು ಕಾಂಗ್ರೆಸ್‌ಗೆ ಒಳ್ಳೇಯ ಸಂಕೇತವಲ್ಲ.

09:56 AM (IST) May 04

ಬಾಗಲಕೋಟೆಯಲ್ಲಿ ಮೇಟಿಗೆ 15 ಸಾವಿರ ಮತಗಳ ಮುನ್ನಡೆ

ಬಾಗಲಕೋಟೆ : 6 ಸುತ್ತಿನ ಮತ ಎಣಿಕೆ ಅಂತ್ಯಕ್ಕೆ, 15,457 ಮತಗಳ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

ಉಮೇಶ್ ಮೇಟಿ ಪಡೆದ ಮತಗಳು-32,363
ವೀರಣ್ಣ ಚರಂತಿಮಠ ಪಡೆದ ಮತಗಳು- 16,906
ಮತಗಳ ಅಂತರ- 15,457

09:48 AM (IST) May 04

ಬಾಗಲಕೋಟೆ ಕದನ: ಎಣಿಕೆ ಆರಂಭದಲ್ಲೇ ಕೈ ಪಾಳಯದಲ್ಲಿ ಸಂಭ್ರಮ, 5ನೇ ಸುತ್ತಿನಲ್ಲೂ ಕಾಂಗ್ರೆಸ್ ಭರ್ಜರಿ ಮುನ್ನಡೆ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 5ನೇ ಸುತ್ತಿನ ಅಂತ್ಯಕ್ಕೆ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಾರೀ ಮತಗಳ ಅಂತರ ಸಾಧಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

Read Full Story

09:33 AM (IST) May 04

‌ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋಲಬೇಕು; ಈಶ್ವರನಲ್ಲಿ ಹರಕೆ ಹೊತ್ತ ಒಳ್ಳೆ ಹುಡುಗ ಪ್ರಥಮ್

Ole Hudga Pratham: ಇಂದು ಚುನಾವಣೆ ಕಾವು ಏರಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಬಿಜೆಪಿ ಪಕ್ಷವು ಧ್ವಂಸ ಮಾಡಲಿದೆಯಾ ಎಂಬ ಪ್ರಶ್ನೆ ಇದೆ. ಹೀಗಿರುವಾಗ‌ ಮಮತಾ ಬ್ಯಾನರ್ಜಿ ಸೋಲಲಿ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 4 ವಿಜೇತ, ನಟ ಒಳ್ಳೆ ಹುಡುಗ ಪ್ರಥಮ್ ಬಯಸುತ್ತಿದ್ದಾರೆ. 

 

Read Full Story

09:14 AM (IST) May 04

5 States Assembly Election Results 2026 - ತಮಿಳುನಾಡು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು - ಬಿ. ಶ್ರೀರಾಮುಲು

5 States Assembly Election Results 2026 ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ತಮಿಳುನಾಡು ಹೊರತುಪಡಿಸಿ ಉಳಿದೆಡೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಗಳ ಬಗ್ಗೆಯೂ ಪ್ರಸ್ತಾಪಿಸಿದರು.

Read Full Story

09:05 AM (IST) May 04

ಶೃಂಗೇರಿ ಅಂಚೆ ಮತ ವಿವಾದ - ಮೂವರ ವಿರುದ್ಧ FIR! ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಧಿಕಾರ ಸ್ವೀಕಾರ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಅಕ್ರಮ ಆರೋಪದ ಮೇಲೆ ಡಿ.ಎನ್. ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ನಡೆದ ಮರು ಎಣಿಕೆಯಲ್ಲಿ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಜಯಗಳಿಸಿದ್ದು, ಶಾಸಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Read Full Story

08:59 AM (IST) May 04

‌Thalapathy Vijay ಭವಿಷ್ಯ ನಿರ್ಧಾರವಾಗೋ ದಿನವೇ ತಿರುಪತಿ ಮೊರೆ ಹೋದ ನಟಿ ತ್ರಿಶಾ; ಈಗಲೇ ಇಷ್ಟು ಬೆಂಬಲವೇ?

‌Thalapathy Vijay Election News: ನಟಿ ತ್ರಿಶಾ ಕೃಷ್ಣನ್‌ಗೆ ಇಂದು 43ನೇ ವರ್ಷದ ಜನ್ಮದಿನ. ಗೆಳೆಯ ದಳಪತಿ ವಿಜಯ್‌ ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ಹೀಗಾಗಿ ಅವರು ರಾತ್ರಿ ತಿರುಪತಿಗೆ ಪ್ರಯಾಣ ಬೆಳೆಸಿ, ಮುಂಜಾನೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಲ್ಲದೆ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

Read Full Story

08:56 AM (IST) May 04

ಲೇಟಾಗಿ ಆರಂಭವಾದ ಮತ ಎಣಿಕೆ, ಇನ್ನೂ ಸಿಗದ ಆರಂಭಿಕ ಲೆಕ್ಕಚಾರ

ದಾವಣಗೆರೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕೈ ಟಿಕೆಕ್ ತಪ್ಪಿದ ಹಿನ್ನಲೆಯಲ್ಲಿ ಉಚ್ಛಾಟನೆ ಪರ್ವವು ಫಲಿತಾಂಶದ ಮೇಲೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ತೀವ್ರ ಜಿದ್ದಾಜಿದ್ದಿನ ಮತ ಕಾಳಗದಲ್ಲಿ ಜನರ ಕುತೂಹಲ ಹೆಚ್ಚಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬ ಮೂರನೇ ಕುಡೆ ಸಮರ್ಥ್ ಶ್ಯಾಮನೂರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳಾ ಎಂಬ ಕುತೂಹಲ ಹೆಚ್ಚಾಗಿದೆ. ಮತ್ತೊಂದೆಡೆ ಬಿಜೆಪಿಯು ಸಾಮಾನ್ಯ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದಕ್ಕೆ ಸೇರಿದ ಸಾಮಾನ್ಯ ವ್ಯಕ್ತಿ ಶ್ರೀನಿವಾಸಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿ ಪ್ರಯೋಗಕ್ಕೆ ಇಳಿದಿದ್ದು, ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಸಜವಾಗಿಯೇ ಇದೆ. 

ಮತ್ತೊಂದೆಡೆ ಬಾಗಲಕೋಟೆಯಲ್ಲಿ ಬೈ ಎಲೆಕ್ಷನ್ ಮೂಲಕವೇ ಬಿಜೆಪಿ ಕ್ಷೇತ್ರವನ್ನು ಭದ್ರಕೋಟೆಯನ್ನಾಗಿಸಿಕೊಂಡಿದ್ದು, ಮತ್ತೆ ಹೂವು ಅರಳುತ್ತಾ ಕಾದು ನೋಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಉಮೇಶ್ ಮೇಟಿಯನ್ನು ಗೆಲ್ಲಿಸುತ್ತಾರೆ, ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದು, ವೀರಣ್ಣ ಚಿರಂತಿಮಠ ಅವರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗುತ್ತಾರಾ ಕಾದು ನೋಡಬೇಕು. 

08:22 AM (IST) May 04

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಪ್ರಕ್ರಿಯೆ ಆರಂಭಿಸಿದರು.
Read Full Story

08:21 AM (IST) May 04

Tamil Nadu Election Result - ಪೆರಂಬೂರ್‌ ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ ಕಂಡ ಜೋಸೆಫ್‌ ವಿಜಯ್‌

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ, ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಆರಂಭಿಕ ಮುನ್ನಡೆ ಸಾಧಿಸಿದೆ. ಪೆರಂಬೂರ್ ಕ್ಷೇತ್ರದಲ್ಲಿ ಸ್ವತಃ ವಿಜಯ್ ಮುನ್ನಡೆಯಲ್ಲಿದ್ದು, ಫಲಿತಾಂಶದ ನಂತರ ಶಾಸಕರನ್ನು ರಕ್ಷಿಸಿಕೊಳ್ಳಲು ಪಕ್ಷವು 'ರೆಸಾರ್ಟ್ ರಾಜಕೀಯ'ದ ಕ್ರಮ ಕೈಗೊಂಡಿದೆ.

Read Full Story

08:00 AM (IST) May 04

Sharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ

ಅಂಡಮಾನ್‌ನ ಸ್ವರಾಜ್ ದ್ವೀಪದ ಸಮುದ್ರದಾಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಈ ಐತಿಹಾಸಿಕ ಸಾಧನೆಯಲ್ಲಿ ಬೆಂಗಳೂರಿನ ಸಾಹಸ ಕ್ರೀಡಾಪಟು ಹಾಗೂ ಆರ್. ಅಶೋಕ್ ಅವರ ಪುತ್ರ ಶರತ್ ಆರ್. ಅಶೋಕ್ ಕೂಡ ಭಾಗವಹಿಸಿದ್ದರು.
Read Full Story

07:49 AM (IST) May 04

ಬಾಗಲಕೋಟೆ ಉಪಚುನಾವಣೆ ಮತ ಎಣಿಕೆ - ಬಿಗಿ ಭದ್ರತೆಯೊಂದಿಗೆ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಅಧಿಕಾರಿಗಳು

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವಿನ ನೇರ ಹಣಾಹಣಿಯ ಫಲಿತಾಂಶಕ್ಕಾಗಿ ತೀವ್ರ ಕುತೂಹಲ ಕೆರಳಿದೆ. ನವನಗರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬಿಗಿ ಭದ್ರತೆಯೊಂದಿಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
Read Full Story

07:36 AM (IST) May 04

ಬಾಗಲಕೋಟೆ ಉಪಚುನಾವಣೆ - ಇಂದು ತೋವಿವಿಯಲ್ಲಿ ಮತ ಎಣಿಕೆ; ನಿಷೇಧಾಜ್ಞೆ ಜಾರಿ

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಬಿಗಿ ಭದ್ರತೆ, ಸಿಬ್ಬಂದಿ ನಿಯೋಜನೆ ಮತ್ತು ನಿಷೇಧಾಜ್ಞೆ ಜಾರಿ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
Read Full Story

07:19 AM (IST) May 04

ಬಾಗಲಕೋಟೆ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ - ಯಾರಿಗೆ ವಿಜಯ ಮಾಲೆ?

ಎಚ್.ವೈ. ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆದಿದ್ದು, ಎರಡೂ ಪಕ್ಷಗಳು ಗೆಲುವಿಗಾಗಿ ತಮ್ಮದೇ ಆದ ತಂತ್ರಗಳನ್ನು ನೆಚ್ಚಿಕೊಂಡಿವೆ.
Read Full Story

More Trending News