
ಬಳ್ಳಾರಿ (ನ.3): ಹದಿನಾಲ್ಕು ವರ್ಷಗಳ ಹಿಂದೆ 2008ರ ಚುನಾವಣೆಯಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ಹತ್ತು ಕ್ಷೇತ್ರಗಳ ಪೈಕಿ ಒಂಭತ್ತರಲ್ಲಿ ಗೆದ್ದು ಸಂಡೂರು ಸೋತಿದ್ದೆವು. ಈ ಬಾರಿ ಸಂಡೂರು ಗೆಲ್ಲಲು ಅಂಜನಾದ್ರಿ ಹನುಮಂತ ನನ್ನನ್ನು ಬಳ್ಳಾರಿಗೆ ಕಳುಹಿಸಿದ್ದಾರೆ ಎಂದು ಬಿಜೆಪಿ ಸಮಾವೇಶದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅಬ್ಬರಿಸಿದರು.
ಸಂಡೂರು ಉಪಚುನಾವಣೆ ಹಿನ್ನೆಲೆ ಇಂದು ಚೋರನೂರಿನಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಶಾಸಕ ಜನಾರ್ದನರೆಡ್ಡಿ ಅವರು, ಬಳ್ಳಾರಿ ಅಭಿವೃದ್ಧಿಗೆ ಕನಸು ಕಂಡವನು ನಾನು. ಬಳ್ಳಾರಿ ಖನಿಜ ಸಂಪತ್ತು ರಾಜ್ಯದಲ್ಲಿ ಉಪಯೋಗ ಮಾಡುವ ಬಗ್ಗೆ ನನ್ನಲ್ಲಿ ಚಿಂತನೆ ಇತ್ತು. ಬಳ್ಳಾರಿ ಅಭಿವೃದ್ಧಿಗೆ ಯಡಿಯೂರಪ್ಪ ಸಹಕಾರ ನೀಡಿದ್ರು. ಸಂಡೂರಿನಲ್ಲಿ ಆಸ್ಪತ್ರೆ, ರಸ್ತೆ, ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ, ಹೀಗೆ ಹತ್ತು ಹಲವು ಕನಸು ಕಂಡಿದ್ದೆ. ಆದರೆ ಕುತಂತ್ರದಿಂದ ನನ್ನನ್ನು ಬಳ್ಳಾರಿಯಿಂದ ದೂರ ಇಡೋ ಕೆಲಸ ಮಾಡಿದ್ರು. ನನ್ನ ಹಿಂದಿನ ಜನ್ಮದ ಕರ್ಮದಿಂದ ನಾನು ಬಳ್ಳಾರಿಯಿಂದ ದೂರ ಇಡುವಂತೆ ಆಯ್ತು. ಆದರೆ ಕರ್ಮ ರಿಟರ್ಸ್ ಅಂತಾರಲ್ಲ ಹಾಗೆ ನನಗೆ ವಿನಾಕಾರಣ ತೊಂದರೆ ಕೊಟ್ಟವರು ಈಗ ಸಂಕಷ್ಟದಲ್ಲಿದ್ದಾರೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಸಂಡೂರಿನಲ್ಲೇ ಮನೆ ಮಾಡಿದ ಜನಾರ್ದನ ರೆಡ್ಡಿ; ಕೈಗೆ ಮಾಸ್ಟರ್ ಸ್ಟ್ರೋಕ್ ಕೊಡ್ತಾರಾ ಧಣಿ?
ನಾನು ಹದಿನಾಲ್ಕು ವರ್ಷಗಳ ಹಿಂದೆ ಬಿಜೆಪಿ ಪಕ್ಷವನ್ನು ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಂಡು ಬಂದಿದ್ದೆ. ಆದರೆ ಸಂಡೂರು ಮಾತ್ರ ಗೆಲುವು ಪಡೆಯಲಾಗಿರಲಿಲ್ಲ. ಸೋತಿರೋ ಸಂಡೂರಿನಿಂದಲೇ ಗೆಲುವು ಪ್ರಾರಂಭ ಮಾಡುತ್ತೇವೆ. 2028ರಲ್ಲಿ 150 ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಸಂಡೂರಿನ ಸಿಪಿಐ ಮಹೇಶ್ ಗೌಡ ವಿರುದ್ಧ ಹರಿಹಾಯ್ದ ಶಾಸಕರು, ನಾನು ಸಿಬಿಐ ಅಧಿಕಾರಿಗಳನ್ನು ನೋಡಿದ್ದೇನೆ, ಇಲ್ಲಿಯ ಸಿಪಿಐ ಯಾವ ಲೆಕ್ಕಾ? ಸಂಡೂರಿನ ಸಿಪಿಐ ಮಹೇಶ್ ಗೌಡ ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಒಬ್ಬ ಪೊಲೀಸ್ ಆಫೀಸರ್ ಆಗಿ ಥೇಟ್ ಕಾಂಗ್ರೆಸ್ ಕಾರ್ಯಕರ್ತರಂತೆ ಬಿಜೆಪಿ ಕಾರ್ಯಕರ್ತರಿಗೆ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಬೆದರಿಸುವ ಆಡಿಯೋ ಕೇಳಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರಿಗೂ ಹೆದರಬೇಕಿಲ್ಲ, ಹೆದರುವ ಅವಶ್ಯಕತೆ ಇಲ್ಲ. ನಿಮ್ಮ ಜೊತೆಗೆ ನಾವಿದ್ದೇನೆ ಎಂದು ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ