
ಬೆಂಗಳೂರು (ಆ.03): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮೊದಲ ಅವಧಿಗೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಿದ್ದರಾಮಯ್ಯ (Siddaramaiah) ಅವರು ರಾಜೀನಾಮೆ ನೀಡಿದ ನಂತರ, ಜುಲೈ 3ರಂದು 2ನೇ ಅವಧಿಯ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (D.K. Shivakumar) ಹಾಗೂ 13 ಶಾಸಕರು ಸಂಪುಟ ದರ್ಜೆ ಸಚಿವರಾಗಿ (Cabinet Ministers) ಪ್ರಮಾಣ ವಚನ ಸ್ವೀಕರಿಸಿದ್ದರು.
ಇದಾದ ಬರೋಬ್ಬರಿ ಒಂದು ತಿಂಗಳ ಬಳಿಕ ಇಂದು (ಆಗಸ್ಟ್ 03) ರಾಜ್ಯ ಸಚಿವ ಸಂಪುಟ ವಿಸ್ತರಣೆ (Cabinet Expansion) ನಡೆದಿದ್ದು, ಹೆಚ್ಚುವರಿಯಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ರಾಜ್ಯ ಸಚಿವ ಸಂಪುಟದ ಒಟ್ಟು ಗಾತ್ರ ಇದೀಗ 33ಕ್ಕೆ ಏರಿಕೆಯಾಗಿದೆ. ಆದರೆ, ಈ ವಿಸ್ತರಿತ ಮಂತ್ರಿಮಂಡಲದಲ್ಲಿ ಯಾರೊಬ್ಬರೂ ಮಹಿಳಾ ಸಚಿವರಿಲ್ಲದಿರುವುದು (Zero Women Representation) ಭಾರಿ ಆಶ್ಚರ್ಯ ಹಾಗೂ ಚರ್ಚೆಗೆ ಗ್ರಾಸವಾಗಿದೆ. ಕೊನೆ ಪಕ್ಷ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು (Women and Child Welfare Department) ನೋಡಿಕೊಳ್ಳುವುದಕ್ಕೂ ಒಬ್ಬರೇ ಒಬ್ಬರು ಮಹಿಳಾ ಸಚಿವೆ ಇಲ್ಲದಿರುವುದು ಹಿನ್ನಡೆಯಾಗಿದ್ದು, ಇದರ ಹಿಂದಿನ ರಾಜಕೀಯ ಒಳ-ಲೆಕ್ಕಾಚಾರ ಮಾತ್ರ ನಿಗೂಢವಾಗಿದೆ.
ಸಂಪುಟ ಸೇರಿದ ನೂತನ 19 ಸಚಿವರು ವಿಭಿನ್ನವಾಗಿ ತಮ್ಮ ಆರಾಧ್ಯ ದೈವ, ಸಂವಿಧಾನ ಹಾಗೂ ಗಣ್ಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ವಿವರ ಹೀಗಿದೆ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ