
ಬೆಂಗಳೂರು (ನ.19): ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಆಯೋಗ ಎಚ್ಚರಿಸಿದೆ.
ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿ ಮಾಹಿತಿ ಮತ್ತು ದತ್ತಾಂಶಗಳನ್ನು ಗೌಪ್ಯವಾಗಿ ಇಡಲಾಗಿದೆ. ಆದರೂ, 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು ಕೆಲವರು ಹರಡುತ್ತಿದ್ದಾರೆ. ಹೀಗೆ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಮುಂದೆಯೂ ವಾಟ್ಸ್ಆ್ಯಪ್ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಹೀಗಾಗಿ ಯಾರೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಜನಸಂಖ್ಯೆ ಕುರಿತಂತೆ ಸುಳ್ಳು ಮಾಹಿತಿ ಹಂಚಿಕೊಳ್ಳಬಾರದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ