
ಬೆಂಗಳೂರು (ಸೆ.22): ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ಪ್ರಾಧಿಕಾರದ ಆದೇಶವನ್ನು ಎತ್ತಿಹಿಡಿದು ಸೆ.27ರವರೆಗೆ ಪ್ರತಿನಿತ್ಯ ತಲಾ 5,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಹೊರಡಿಸಿದೆ. ಈ ಪರಿಸ್ಥಿತಿ ಎಲ್ಲ ಸರ್ಕಾರದಲ್ಲೂ ಬಂದಿತ್ತು. ಇನ್ನು ಮಂಡ್ಯ ನಗರವನ್ನು ಬಂದ್ ಮಾಡಲು ರೈತರು ಕರೆ ನೀಡಿದ್ದಾರೆ. ಆದರೆ, ನಮ್ಮ ಸರ್ಕಾರ ನಿಮ್ಮ ಪರವಾಗಿದೆ. ಅಹಿತಕರ ಘಟನೆ ನಡೆದು ರಾಜ್ಯಕ್ಕೆ ಧಕ್ಕೆಯಾದಂತೆ ಎಲ್ಲರೂ ಜಾಗ್ರತೆವಹಿಸುವುದು ಅಗತ್ಯವಾಗಿದೆ. ನಿಮಗೆ ಕೋಪ ಇದ್ರೆ ಎಷ್ಟಾದ್ರೂ ಬೈಯಿರಿ. ನಾವು ಅಧಿಕಾರದಲ್ಲಿ ಇರುವವರು ಬೈಸಿಕೊಳ್ಳಲು ರೆಡಿ ಇದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿತಮಿಳುನಾಡು 24 ಸಾವಿರ ಕ್ಯೂಸೆಕ್ ಕೇಳಿದೆ. ನಮ್ಮ ಅಧಿಕಾರಿಗಳು ಎರಡು ಕಮಿಟಿಗಳ ಮುಂದೆ ಪ್ರಸ್ತಾಪ ಮಾಡಿ ಎರಡು ಸಲ 10,000 ಕ್ಯೂಸೆಕ್ಸ್ ಬಿಡಲು ಒಪ್ಪಿದ್ದೆವು. ನಂತರ ಒತ್ತಡ ಮಾಡಿ 5,000 ಕ್ಯೂಸೆಕ್ಗೆ ಇಳಿಸಿದೆವು. ಮಳೆ ಚೆನ್ನಾಗಿ ಆಗಬಹುದೆಂಬ ನಿರೀಕ್ಷೆ ಇತ್ತು. ಈಗ ಅಪೀಲು ಹೋಗಬೇಕು ಅಂತ ತೀರ್ಮಾನ ಮಾಡಿದ್ದೆವು. ಆದರೆ, ಇಬ್ಬರ ಅಪೀಲುಗಳನ್ನು ಡಿಸ್ಮಿಸ್ ಮಾಡಿದಾರೆ. ಸೆ.27ರವರೆಗೆ ನೀರು ಬಿಡಲು ಆದೇಶ ಆಗಿದೆ. ಈ ಪರಿಸ್ಥಿತಿ ಎಲ್ಲಾ ಸರ್ಕಾರಗಳ ಕಾಲದಲ್ಲಿ ಕೂಡಾ ಆಗಿತ್ತು ಎಂದು ಸಮಜಾಯಿಷಿ ನೀಡಿದರು.
ನಾಳೆ ಮಂಡ್ಯ ಬಂದ್: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣಿಕರೇ ಎಚ್ಚರ!
ಇನ್ನು ನಾಳೆ ಮಂಡ್ಯ ಬಂದ್ ನಿಂದ ಕಾವೇರಿ ವಿಚಾರವಾಗಿ ಏನೂ ಆಗಲ್ಲ. ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ನಾವೇ ನಿಮ್ಮ ಪರ ಹೋರಾಟ ಮಾಡ್ತೀವಿ. ಬಂದ್ ಮಾಡಿ ಜನರಿಗೆ ತೊಂದರೆ ಮಾಡಬೇಡಿ. ಸರ್ಕಾರ ನಿಮ್ಮ ಪರವಾಗಿದೆ. ಅಹಿತಕರ ಘಟನೆ ನಡೆದ್ರೆ ರಾಜ್ಯಕ್ಕೆ ಧಕ್ಕೆ ಆಗುತ್ತದೆ. ನಿಮಗೆ ಕೋಪ ಇದ್ದರೆ ಎಷ್ಟಾದ್ರೂ ಬೈಯಿರಿ, ನಾವು ಅಧಿಕಾರದಲ್ಲಿ ಇರುವವರು ಬೈಸಿಕೊಳ್ಳಲು ರೆಡಿ ಇದ್ದೇವೆ. ಇವತ್ತು ಬೊಮ್ಮಾಯಿ ಯಡಿಯೂರಪ್ಪ ಎಲ್ಲಾ ಮಾತಾಡ್ತಾ ಇದಾರೆ. ಅವರು ವಿಪಕ್ಷದವರು ಮಾತಾಡ್ಲೇ ಬೇಕು. ಅವರು ಯಾವ ಲಾಯರ್ ಇಟ್ಟಿದ್ರೋ, ನಾವೂ ಅದೇ ಲಾಯರ್ ಇಟ್ಟಿರೋದು ಎಂದು ಹೇಳಿದರು.
ಕೇಂದ್ರದ ಮಂತ್ರಿಗಳು ನಮ್ಮ ಕೈಲಾದ ಸಹಕಾರ ಕೊಡ್ತೀವಿ ಅಂದಿದಾರೆ. ಎರಡೂ ರಾಜ್ಯಗಳನ್ನು ಕರೆದು ಮಾತಾಡ್ತೀವಿ ಅಂದಿದಾರೆ. ಕೋರ್ಟ್ ಮುಂದೆ ನಾವು ವಾಸ್ತವಾಂಶ ತಿಳಿಸಬೇಕು. ಇಡೀ ಸರ್ಕಾರ ಕಾನೂನು ತಜ್ಞರ ಜೊತೆ ಚರ್ಚೆ ಮಾಡಬೇಕು ಇಡೀ ದೇಶದಲ್ಲಿ ಇಂತ ಪರಿಸ್ಥಿತಿ ಇದೆ. ಮಳೆ ಬರದೇ ಇರೋದ್ರಿಂದ ಹೀಗಾಗಿದೆ. ಒಟ್ಟಾರೆ ನಾನು ರಾಜಕಾರಣ ಮಾತಾಡಲ್ಲ. ಎಲ್ಲರಿಗೂ ಉತ್ತರ ಕೊಡುವ ಶಕ್ತಿ ನನಗಿದೆ. ಕುಮಾರಸ್ವಾಮಿ, ಯಡಿಯೂರಪ್ಪ ಎಲ್ಲರಿಗೂ ಉತ್ತರ ಕೊಡಬಲ್ಲೆನು. ನಿಮ್ಮ ನಿಮ್ಮ ಸರ್ಕಾರಗಳು ಏನು ಮಾಡಿವೆ ಅಂತ ಹೇಳಬಲ್ಲೆ. ಸಿನಿಮಾದವರು, ಸ್ವಾಮಿಗಳು, ಸಂಘಟನೆ ಗಳು ಈಗ ಭಾರಿ ರೋಷಾವೇಶದಿಂದ ಮಾತಾಡ್ತಾ ಇದಾರೆ. ನೀರಿಗಾಗಿ ನಡಿಗೆ ನಾನು ನನಗೋಸ್ಕರ ಮಾಡಿದ್ದೆನಾ.? ಎಂದು ಪ್ರತಿಭಟನಾಕಾರರ ವಿರುದ್ಧ ಕಿಡಿಕಾರಿದರು.
ಕಾವೇರಿ ಹೋರಾಟಕ್ಕೆ ಕುಳಿತ ಮಂಡ್ಯದ ಗಂಡು ಅಂಬರೀಶ್ ಪುತ್ರ ಅಭಿಷೇಕ್: ಅಪ್ಪನಂತೆ ಬಿಗಿಪಟ್ಟು
ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿಗಳನ್ನು ಮಾಡುವಂತೆ ಬೇಡಿಕೆ ವಿಚಾರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರತಿಯೊಬ್ಬರಿಗೂ ಆಸೆ ಇರುತ್ತದೆ. ನನ್ನ ಡಿಸಿಎಂ ಮಾಡಿದ್ದು ಸಿಎಂ ಸಿದ್ದರಾಮಯ್ಯ, ನಮಗೆ ಹೈಕಮಾಂಡ್ ಇದೆ. ಆಸೆ ಪಡೋರಿಗೆ ಉತ್ತರ ಕೊಡೋರಿದಾರೆ. ನಾನು ಉತ್ತರ ಕೊಡಲ್ಲ. ಶಿವಕುಮಾರ್ ಮೆತ್ತಗಾದ್ರಾ ಎಂಬ ಪ್ರಶ್ನೆಗೆ, ನನ್ನ ಪೊಲಿಟಿಕಲ್ ಟ್ರಾಕ್ ರೆಕಾರ್ಡ್ ನೋಡಿ. ನೀವೇ ನನ್ನ ಹೋರಾಟ ನೋಡಿದ್ದೀರಿ. ನಾನು ಹೋರಾಟ ಮಾಡಿದ್ದಕ್ಕೆ ಪಾರ್ಟಿ ನನ್ನ ಇಲ್ಲಿ ಕೂರಿಸಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ